AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ವಂಶಿಕಾ ಮಾತ್ರವಲ್ಲ, ಸಲ್ಮಾನ್​ ಖಾನ್​ ಹೆಸರಲ್ಲೂ ನಡೆದಿದೆ ಮೋಸ; ಅಧಿಕೃಕವಾಗಿ ಹೇಳಿಕೆ ಬಿಡುಗಡೆ ಮಾಡಿದ ಸಲ್ಲು

Salman Khan Films: ಸಲ್ಮಾನ್​ ಖಾನ್​ ಅವರ ಹೆಸರಲ್ಲಿ ಯಾರೋ ಕಿಡಿಗೇಡಿಗಳು ಮೋಸ ಮಾಡುತ್ತಿರುವುದು ತಿಳಿದುಬಂದಿದೆ. ಜನರು ಮೋಸ ಹೋಗಬಾರದು ಎಂಬ ಉದ್ದೇಶದಿಂದ ಸಲ್ಲು ಈ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

Salman Khan: ವಂಶಿಕಾ ಮಾತ್ರವಲ್ಲ, ಸಲ್ಮಾನ್​ ಖಾನ್​ ಹೆಸರಲ್ಲೂ ನಡೆದಿದೆ ಮೋಸ; ಅಧಿಕೃಕವಾಗಿ ಹೇಳಿಕೆ ಬಿಡುಗಡೆ ಮಾಡಿದ ಸಲ್ಲು
ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: Jul 17, 2023 | 2:49 PM

Share

ಬಾಲನಟಿ ವಂಶಿಕಾ ಅಂಜನಿ ಕಶ್ಯಪ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅನೇಕ ಜನರಿಗೆ ಮೋಸ ಮಾಡಿದ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂತು. ಇಂಥ ಕೆಲಸ ಮಾಡಿದ್ದಾರೆ ಎನ್ನಲಾದ ನಿಶಾ ನರಸಪ್ಪ ವಿರುದ್ಧ ಈಗಾಗಲೇ ಅನೇಕ ದೂರುಗಳು ದಾಖಲಾಗಿವೆ. ಇಂಥ ಫ್ರಾಡ್​ (Fraud) ನಡೆಯುವುದು ಸ್ಯಾಂಡಲ್​ವುಡ್​ನಲ್ಲಿ ಮಾತ್ರವಲ್ಲ. ಬಾಲಿವುಡ್​ ಮಂದಿಯ ಹೆಸರನ್ನೂ ಹೇಳಿಕೊಂಡು ಕೆಲವರು ಮೋಸ ಮಾಡುತ್ತಿರುವುದು ಗೊತ್ತಾಗಿದೆ. ಖ್ಯಾತ ನಟ ಸಲ್ಮಾನ್​ ಖಾನ್ (Salman Khan)​ ಮತ್ತು ಅವರ ನಿರ್ಮಾಣ ಸಂಸ್ಥೆಯ (Salman Khan Films) ಹೆಸರು ಬಳಸಿಕೊಂಡು ಯಾರೋ ಕಿಡಿಗೇಡಿಗಳು ಜನರಿಂದ ಹಣ ಕೀಳುವ ಪ್ರಯತ್ನ ಮಾಡಿದ್ದಾರೆ. ಈ ಬಗ್ಗೆ ಸ್ವತಃ ಸಲ್ಮಾನ್​ ಖಾನ್​ ಕಡೆಯಿಂದ ಹೇಳಿಕೆ ಬಿಡುಗಡೆ ಮಾಡಲಾಗಿದೆ.

ಸಲ್ಮಾನ್​ ಖಾನ್​ ಅವರ ಒಡೆತನದ ‘ಸಲ್ಮಾನ್​ ಖಾನ್​ ಫಿಲ್ಮ್ಸ್​’ ಕಂಪನಿಯ ಮೂಲಕ ಸ್ಪಷ್ಟನೆ ನೀಡಲಾಗಿದೆ. ‘ಸಲ್ಮಾನ್​ ಖಾನ್​ ಅವರಾಗಲಿ, ಸಲ್ಮಾನ್​ ಖಾನ್​ ಫಿಲ್ಮ್ಸ್​ ಕಂಪನಿ ಕಡೆಯಿಂದಾಗಲಿ ಯಾವುದೇ ಕಲಾವಿದರ ಆಯ್ಕೆ ಸದ್ಯಕ್ಕೆ ನಡೆಯುತ್ತಿಲ್ಲ. ನಮ್ಮ ಸಿನಿಮಾಗಳಿಗೆ ಕಲಾವಿದರನ್ನು ಆಯ್ಕೆ ಮಾಡುವ ಸಲುವಾಗಿ ನಾವು ಯಾವುದೇ ಕಾಸ್ಟಿಂಗ್​ ಏಜೆನ್ಸಿಯನ್ನು ನೇಮಿಸಿಕೊಂಡಿಲ್ಲ. ಯಾರಿಂದಲಾದರೂ ಈ ಬಗ್ಗೆ ಮೆಸೇಜ್​ ಅಥವಾ ಇ-ಮೇಲ್​ ಬಂದರೆ ದಯವಿಟ್ಟು ನಂಬಬೇಡಿ. ಸಲ್ಮಾನ್​ ಖಾನ್​ ಮತ್ತು ಅವರ ಸಂಸ್ಥೆಯ ಹೆಸರನ್ನು ಅನಧಿಕೃತವಾಗಿ ಬಳಸಿಕೊಂಡಿರುವುದು ಕಂಡುಬಂದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಸ್ಪಷ್ಟನೆ ನೀಡಲಾಗಿದೆ.

ಬಾಲಿವುಡ್​ನಲ್ಲಿ ಸಲ್ಮಾನ್​ ಖಾನ್​ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ನಟನಾಗಿ, ನಿರ್ಮಾಪಕನಾಗಿ, ಕಿರುತೆರೆ ಕಾರ್ಯಕ್ರಮಗಳ ನಿರೂಪಕನಾಗಿ ಅವರು ಹೆಸರು ಮಾಡಿದ್ದಾರೆ. ಚಿತ್ರರಂಗದಲ್ಲಿ ಎಷ್ಟೋ ಜನರಿಗೆ ಅವರು ಅವಕಾಶ ನೀಡಿದ್ದಾರೆ. ಹಲವು ಕಲಾವಿದರನ್ನು ಮತ್ತು ತಂತ್ರಜ್ಞರನ್ನು ಬಾಲಿವುಡ್​ಗೆ ಪರಿಚಯಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಈಗ ಅವರ ಹೆಸರಲ್ಲಿ ಯಾರೋ ಮೋಸ ಮಾಡುತ್ತಿರುವುದು ತಿಳಿದುಬಂದಿದೆ. ಜನರು ಮೋಸ ಹೋಗಬಾರದು ಎಂಬ ಉದ್ದೇಶದಿಂದ ಸಲ್ಲು ಅವರು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ‘ಸಲ್ಮಾನ್​ ಖಾನ್​ನನ್ನು ಖಂಡಿತಾ ಕೊಲ್ಲುತ್ತೇನೆ’: ರಾಷ್ಟ್ರೀಯ ಸುದ್ದಿ ವಾಹಿನಿಯಲ್ಲಿ ಬಹಿರಂಗವಾಗಿ ಕೊಲೆ ಬೆದರಿಕೆ

ಸದ್ಯ ಸಲ್ಮಾನ್​ ಖಾನ್​ ಅವರು ‘ಬಿಗ್​ ಬಾಸ್​ ಒಟಿಟಿ 2’ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದಾರೆ. ಅಲ್ಲದೇ, ‘ಟೈಗರ್​ 3’ ಚಿತ್ರದ ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ದೊಡ್ಡಮಟ್ಟದ ನಿರೀಕ್ಷೆ ಇದೆ. ಒಂದಿಲ್ಲೊಂದು ಕಾರಣಕ್ಕೆ ಸಲ್ಲು ಆಗಾಗ ಸುದ್ದಿ ಆಗುತ್ತಾರೆ. ಅವರ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಹಿರಿದಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!