AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದ ಜೊತೆ ನಟ ಸಲ್ಮಾನ್ ಖಾನ್​ಗೆ ಇದೆ ಒಂದು ಸಂಬಂಧ; ಏನದು?

‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್​’ ಸಿನಿಮಾದ ಸೋಲಿನ ಬಳಿಕ ಸಲ್ಮಾನ್​ ಖಾನ್​ ಅವರು ‘ಟೈಗರ್​ 3’ ಚಿತ್ರದಲ್ಲಿ ತೊಡಗಿಕೊಂಡಿದ್ದಾರೆ. ಆ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ.

ಅಫ್ಘಾನಿಸ್ತಾನದ ಜೊತೆ ನಟ ಸಲ್ಮಾನ್ ಖಾನ್​ಗೆ ಇದೆ ಒಂದು ಸಂಬಂಧ; ಏನದು?
ಸಲ್ಮಾನ್​ ಖಾನ್​
TV9 Web
| Edited By: |

Updated on: Aug 20, 2021 | 9:35 AM

Share

ಪ್ರಸ್ತುತ ಅಫ್ಘಾನಿಸ್ತಾನ ಪರಿಸ್ಥಿತಿ ಹೀನಾಯವಾಗಿದೆ. ತಾಲಿಬಾನ್ ಹಿಡಿತಕ್ಕೆ ಸಿಕ್ಕಿರುವ ಅಲ್ಲಿನ ಜನರ ಜೀವನ ನಕರವಾಗಿದೆ. ಅಫ್ಘಾನ್​ ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗಾಗಿ ಜಗತ್ತಿನಾದ್ಯಂತ ಪ್ರಾರ್ಥನೆ ಮಾಡಲಾಗುತ್ತಿದೆ. ಇದರ ನಡುವೆ ಸಲ್ಮಾನ್​ ಖಾನ್​ಗೆ ಸಂಬಂಧಿಸಿದ ಸುದ್ದಿಯೊಂದು ಹರಿದಾಡುತ್ತಿದೆ. ಬಾಲಿವುಡ್​ನಲ್ಲಿ ಸ್ಟಾರ್​ ಆಗಿ ಮಿಂಚುತ್ತಿರುವ ಸಲ್ಲುಗೆ ಅಫ್ಘಾನಿಸ್ತಾನದ ಜೊತೆ ಒಂದು ಸಂಬಂಧ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಹಾಗಂತ ಸಲ್ಮಾನ್​ ಖಾನ್​ ನೇರವಾಗಿ ಅಫ್ಘಾನ್ ಜೊತೆ ಯಾವುದೇ ಲಿಂಕ್​ ಇಟ್ಟುಕೊಂಡಿಲ್ಲ. ಇದು ಅವರ ಪೂರ್ವಜರಿಗೆ ಸಂಬಂಧಿಸಿದ್ದು ಎಂಬುದು ವಿಶೇಷ.

ಕೆಲವು ಪೋರ್ಟಲ್​ಗಳು ವರದಿ ಮಾಡಿರುವಂತೆ ಸಲ್ಮಾನ್​ ಖಾನ್​ ಅವರ ಪೂರ್ವಜರು ಅಫ್ಘಾನಿಸ್ತಾನದವರು. ಸಲ್ಲು ಮುತ್ತಾತ ಅನ್ವರ್​ ಖಾನ್​ ಅವರು ಮೂಲತಃ ಅಘ್ಫಾನ್​ನವರು. ಅಲ್ಲಿಂದ ಭಾರತಕ್ಕೆ ಬಂದ ಅವರು ಭೊಪಾಲ್​ನಲ್ಲಿ ನೆಲೆಸಿದರು. ಬ್ರಿಟಿಷ್​ ಇಂಡಿಯಾದ ಸೇನೆಯಲ್ಲಿ ಅವರು ಸೈನಿಕನಾಗಿದ್ದರು. ಹಾಗಾಗಿ ಸಲ್ಮಾನ್​ ಖಾನ್​ ಕೂಡ ಮೂಲತಃ ಅಘ್ಫಾನ್​ವರು ಎಂಬ ಸುದ್ದಿ ಕೇಳಿ ಸ್ವತಃ ಅವರ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.

‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್​’ ಸಿನಿಮಾದ ಸೋಲಿನ ಬಳಿಕ ಸಲ್ಮಾನ್​ ಖಾನ್​ ಅವರು ‘ಟೈಗರ್​ 3’ ಚಿತ್ರದಲ್ಲಿ ತೊಡಗಿಕೊಂಡಿದ್ದಾರೆ. ಆ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಸಲ್ಲುಗೆ ಜೋಡಿಯಾಗಿ ಕತ್ರಿನಾ ಕೈಫ್ ನಟಿಸುತ್ತಿದ್ದಾರೆ. ವಿಲನ್ ಪಾತ್ರದಲ್ಲಿ ಇಮ್ರಾನ್ ಹಷ್ಮಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ‘ಅಂತಿಮ್​: ದಿ ಫೈನಲ್​ ಟ್ರುತ್​’, ‘ಪಠಾಣ್​’ ಮುಂತಾದ ಸಿನಿಮಾಗಳಲ್ಲಿ ಸಲ್ಮಾನ್​ ಖಾನ್​ ಅತಿಥಿ ಪಾತ್ರ ಸಹ ಮಾಡುತ್ತಿದ್ದಾರೆ.

ನಿರ್ದೇಶಕನಿಗೆ ಬಂದಿತ್ತು ಜೀವ ಬೆದರಿಕೆ:

ಅಪ್ಘಾನಿಸ್ತಾನದ ಜನರ ಪಾಲಿಗೆ ತಾಲಿಬಾನಿಗಳು ವೈರಿಗಳಂತೆ ಕಾಡುತ್ತಿದ್ದಾರೆ. ಅವರ ಕ್ರೂರತೆಗೆ ಆ ದೇಶದ ಜನ ಬೆಚ್ಚಿ ಬಿದ್ದಿದ್ದಾರೆ. ಈ ಮಧ್ಯೆ ಅಲ್ಲಿಂದ ಪ್ರಾಣ ಉಳಿಸಿಕೊಂಡು ಬಂದ ಅನೇಕರು ತಮ್ಮ ಅನುಭವ ಹಂಚಿಕೊಳ್ಳುತ್ತಿದ್ದಾರೆ. ಅದೇ ರೀತಿ ಶೂಟಿಂಗ್​ ವೇಳೆ ತಾಲಿಬಾನಿಗಳಿಂದ ಜೀವ ಬೆದರಿಕೆ ಬಂದಿತ್ತು ಎಂಬ ವಿಚಾರವನ್ನು ಬಾಲಿವುಡ್​ನ ಖ್ಯಾತ ನಿರ್ದೇಶಕ ಕಬೀರ್​ ಖಾನ್​ ಹೇಳಿಕೊಂಡಿದ್ದಾರೆ. ‘ಅದು ನನ್ನ ಮೊದಲ ಸಿನಿಮಾ. ‘ಕಾಬೂಲ್​ ಎಕ್ಸ್​​ಪ್ರೆಸ್’​ (2006) ಶೂಟಿಂಗ್​ಗಾಗಿ ನಾನು ಅಪ್ಘಾನಿಸ್ತಾನಕ್ಕೆ ತೆರಳಿದ್ದೆ. ಆದಿತ್ಯ ಚೋಪ್ರಾ ಅವರು ಅಪ್ಘಾನಿಸ್ತಾನದಲ್ಲಿ ಶೂಟ್​ ಮಾಡೋದು ಕಷ್ಟ ಎಂದು ಹೇಳಿದ್ದರು. ಆದರೆ, ಅಲ್ಲಿಯ ಜನರು ಸಿನಿಮಾ ಶೂಟ್​ಗೆ ಸಹಾಯ ಮಾಡಿದ್ದರು. ಈ ವೇಳೆ ತಾಲಿಬಾನಿಗಳಿಂದ ಜೀವ ಬೆದರಿಕೆ ಇತ್ತು. ಆದರೆ, ಅಲ್ಲಿನ ಜನರು ನನಗೆ ಸಂಪೂರ್ಣ ಬೆಂಬಲ ನೀಡಿದ್ದರು. ಈಗ ಅವರೇ ಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ಸಹಾಯ ಮಾಡೋಕೆ ಆಗುತ್ತಿಲ್ಲ ಎನ್ನುವ ಬೇಸರ ನನಗಿದೆ’ ಎಂದಿದ್ದಾರೆ ಕಬೀರ್​ ಖಾನ್.

​ಇದನ್ನೂ ಓದಿ:

‘ದುಡ್ಡು ಕೊಟ್ಟರೆ ಮಾತ್ರ ಬಾಗಿಲು ತೆಗಿತೀನಿ’; ಸಲ್ಮಾನ್​ ಖಾನ್​ ತಮ್ಮನನ್ನೇ ಹೊರಗೆ ನಿಲ್ಲಿಸಿ, ವಾಪಸ್​​ ಕಳಿಸಿದ ಭೂಪ

ರಷ್ಯಾಗೆ ಹೊರಟ ಸಲ್ಮಾನ್​ ಖಾನ್​-ಕತ್ರಿನಾ ಕೈಫ್​; ಏನಿದು ಸಮಾಚಾರ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ