AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೀವ ಅಂತ ಶುರು ಆಗತ್ತೆ, ಆ ಮೇಲೆ ಜೀವ ತೆಗೀತಾರೆ’: ಕೈ ಕೊಟ್ಟ ಹುಡುಗಿಯರ ಬಗ್ಗೆ ಸಲ್ಮಾನ್​ ಓಪನ್​ ಮಾತು

The Kapil Sharma Show: ಸಲ್ಮಾನ್​ ಖಾನ್​ ಅವರ ಬದುಕಿನಲ್ಲಿ ಅನೇಕ ಹುಡುಗಿಯರ ಎಂಟ್ರಿ ಆಗಿತ್ತು. ಆದರೆ ಯಾರೂ ಮದುವೆ ಆಗುವ ಮನಸ್ಸು ಮಾಡಲಿಲ್ಲ.

‘ಜೀವ ಅಂತ ಶುರು ಆಗತ್ತೆ, ಆ ಮೇಲೆ ಜೀವ ತೆಗೀತಾರೆ’: ಕೈ ಕೊಟ್ಟ ಹುಡುಗಿಯರ ಬಗ್ಗೆ ಸಲ್ಮಾನ್​ ಓಪನ್​ ಮಾತು
ಸಲ್ಮಾನ್ ಖಾನ್Image Credit source: Sony Tv
ಮದನ್​ ಕುಮಾರ್​
|

Updated on:Apr 14, 2023 | 6:01 PM

Share

ನಟ ಸಲ್ಮಾನ್​ ಖಾನ್​ (Salman Khan) ಅವರಿಗೆ ಈಗ 57 ವರ್ಷ ವಯಸ್ಸು. ಆದರೂ ಕೂಡ ಅವರಿಗೆ ಮದುವೆ ಆಗುವ ಮನಸ್ಸಿಲ್ಲ. ಅವರ ಸಮಕಾಲೀನ ಹೀರೋಗಳಾದ ಶಾರುಖ್​ ಖಾನ್​, ಅಕ್ಷಯ್​ ಕುಮಾರ್​, ಆಮಿರ್​ ಖಾನ್​ ಮುಂತಾದವರು ಮದುವೆ-ಮಕ್ಕಳು ಅಂತ ಸಂಸಾರದಲ್ಲಿ ಬ್ಯುಸಿಯಾದರು. ಆದರೆ ಸಲ್ಮಾನ್​ ಖಾನ್​ ಮಾತ್ರ ಬ್ಯಾಚುಲರ್​ ಆಗಿಯೇ ಉಳಿದುಕೊಂಡಿದ್ದಾರೆ. ಸಲ್ಲು ಮದುವೆ ಯಾವಾಗ ಎಂಬ ಪ್ರಶ್ನೆ ಆಗಾಗ ಎದುರಾಗುತ್ತದೆ. ಆ ಪ್ರಶ್ನೆಗೆ ಈವರೆಗೂ ಉತ್ತರ ಸಿಕ್ಕಿಲ್ಲ. ಸದ್ಯಕ್ಕಂತೂ ಸಲ್ಮಾನ್​ ಖಾನ್​ ಮದುವೆ ಆಗುವ ಲಕ್ಷಣ ಕಾಣುತ್ತಿಲ್ಲ. ಈಗ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ (Kisi Ka Bhai Kisi Ki Jaan) ಸಿನಿಮಾದ ಬಿಡುಗಡೆಯ ತಯಾರಿಯಲ್ಲಿ ಅವರಿದ್ದಾರೆ. ರಿಯಲ್​ ಲೈಫ್​ನಲ್ಲಿ ‘ಜಾನ್​’ (ಜೀವ) ಎಂದು ಕರೆಯಲು ಯಾರಿಗೂ ಅವರು ಅಧಿಕಾರ ನೀಡಿಲ್ಲ! ‘ದಿ ಕಪಿಲ್​ ಶರ್ಮಾ ಶೋ’ (The Kapil Sharma Show) ವೇದಿಕೆಯಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.

ಸಲ್ಮಾನ್​ ಖಾನ್​ ಅವರ ಬದುಕಿನಲ್ಲಿ ಅನೇಕ ಹುಡುಗಿಯರ ಎಂಟ್ರಿ ಆಗಿತ್ತು. ಅನೇಕರ ಜೊತೆ ಅವರು ಪ್ರೀತಿಯಲ್ಲಿ ಮುಳುಗಿದ್ದರು. ಆದರೆ ಯಾರೂ ಮದುವೆ ಆಗುವ ಮನಸ್ಸು ಮಾಡಲಿಲ್ಲ. ಜಾನ್​ ಎಂದು ಕರೆಸಿಕೊಂಡರೆ ಏನಾಗುತ್ತದೆ ಎಂಬುದನ್ನು ಸಲ್ಮಾನ್​ ಖಾನ್​ ವಿವರಿಸಿದ್ದಾರೆ. ‘ನಿಮ್ಮನ್ನು ಎಲ್ಲರೂ ಭಾಯ್​ ಅಂತ ಕರೆಯುತ್ತಾರೆ. ಆದರೆ ಜಾನ್​ ಎಂದು ಕರೆಯುವ ಅಧಿಕಾರ ಯಾರಿಗಾದರೂ ಕೊಟ್ಟಿದ್ದೀರಾ’ ಎಂದು ಸಲ್ಮಾನ್​ ಖಾನ್​ಗೆ ಕಪಿಲ್​ ಶರ್ಮ ಕೇಳಿದರು. ಅದಕ್ಕೆ ಸಲ್ಲು ನೀಡಿದ ಉತ್ತರ ಸಖತ್​ ಫನ್ನಿ ಆಗಿತ್ತು.

ಇದನ್ನೂ ಓದಿ
Image
ಸೆಟ್​​ನಲ್ಲಿ ಸಲ್ಲುನ ಭೇಟಿ ಮಾಡೋಕೆ ಬಂದ ರಾಮ್​ ಚರಣ್​ಗೆ ಸಿಕ್ತು ಹಿಂದಿ ಸಿನಿಮಾ ಆಫರ್
Image
ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
Image
ಬಹಿರಂಗ ವೇದಿಕೆಯಲ್ಲಿ ಸಲ್ಲು ಇದೆಂಥಾ ಕೆಲಸ; ಪೂಜಾ ಹೆಗ್ಡೆ ವಿಚಾರದಲ್ಲಿ ಸಿಕ್ಕಾಪಟ್ಟೆ ಮುಜುಗರ
Image
ಸಲ್ಮಾನ್​ ಖಾನ್ ಫಾರ್ಮ್​ಹೌಸ್​ ಬೆಲೆ 80 ಕೋಟಿ ರೂ.! ಸಲ್ಲು ಮೆಚ್ಚಿನ ಈ ಸ್ಥಳದಲ್ಲಿ ಏನೆಲ್ಲ ಇದೆ?

‘ಜಾನ್​ (ಜೀವ) ಎಂದು ಕರೆಯುವ ಹಕ್ಕನ್ನು ಯಾರಿಗೂ ನೀಡಬಾರದು. ಮೊದಲು ಜಾನ್​ ಎನ್ನುತ್ತಾರೆ. ಆಮೇಲೆ ಜಾನ್​ ತೆಗೆಯುತ್ತಾರೆ. ನಿನ್ನ ಜೊತೆ ಇರಲು ನಂಗೆ ಬಹಳ ಸಂತೋಷ ಆಗುತ್ತದೆ ಎನ್ನುತ್ತಾರೆ. ಸ್ವಲ್ಪ ಸಮಯ ಕಳೆದ ಬಳಿಕ ಐ ಲವ್​ ಯೂ ಎನ್ನುತ್ತಾರೆ. ನಾವು ಬಲೆಗೆ ಬಿದ್ವಿ ಅಂತ ಗೊತ್ತಾದ ತಕ್ಷಣ ನಮ್ಮ ಜೀವನ ಹಾಳು ಮಾಡ್ತಾರೆ. ಜಾನ್​ ಎಂಬುದು ಒಂದು ಅಪೂರ್ಣ ಪದ. ಅದರ ಹಿಂದೆ ಇಡೀ ವಾಕ್ಯ ಅಡಗಿರುತ್ತದೆ. ಮೊದಲು ನಿನ್ನ ಜಾನ್​ ತೆಗೆಯುತ್ತೇನೆ. ನಂತರ ಬೇರೆಯವನನ್ನು ಜಾನ್​ ಮಾಡಿಕೊಳ್ಳುತ್ತೇನೆ. ಆಮೇಲೆ ಅವನ ಜಾನ್​ ಕೂಡ ತೆಗೆಯುತ್ತೇನೆ ಎಂಬುದು ಅದರ ಪೂರ್ಣ ಅರ್ಥ ಆಗಿರಬಹುದು’ ಎಂದು ಹೇಳಿ ಜೋರಾಗಿ ನಕ್ಕಿದ್ದಾರೆ ಸಲ್ಮಾನ್​ ಖಾನ್​.

ಇದನ್ನೂ ಓದಿ: Salman Khan: ಈದ್​ಗೆ ಸಲ್ಮಾನ್​ ಖಾನ್​ ಕಡೆಯಿಂದ ಮನರಂಜನೆಯ ರಸದೌತಣ; ಇಲ್ಲಿದೆ ನೋಡಿ ಸ್ಯಾಂಪಲ್​

ಈದ್​ ಪ್ರಯುಕ್ತ ಏಪ್ರಿಲ್​ 21ರಂದು ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಮತ್ತು ಪೂಜಾ ಹೆಗ್ಡೆ ಜೋಡಿಯಾಗಿ ನಟಿಸಿದ್ದಾರೆ. ಒಂದು ಮುಖ್ಯ ಪಾತ್ರದಲ್ಲಿ ದಗ್ಗುಬಾಟಿ ವೆಂಕಟೇಶ್​ ಅಭಿನಯಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:01 pm, Fri, 14 April 23

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ