ಗುಂಡಿನ ದಾಳಿ ಪ್ರಕರಣದಲ್ಲಿ ಸಲ್ಮಾನ್​ ಖಾನ್​ ಹೇಳಿಕೆ ದಾಖಲಿಸಿಕೊಂಡ ಪೊಲೀಸರು

ಸಲ್ಮಾನ್​ ಖಾನ್​ ಅವರು ಸಖತ್​ ಬ್ಯುಸಿ ನಟ. ಈಗ ಅವರು ‘ಸಿಕಂದರ್​’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಗುಂಡಿನ ದಾಳಿ ನಂತರ ಭದ್ರತೆ ಹೆಚ್ಚಿಸಿಕೊಂಡು ಅವರು ತಿರುಗಾಡುತ್ತಿದ್ದಾರೆ. ‘ಸಿಕಂದರ್​’ ಸಿನಿಮಾದ ಕೆಲಸಗಳ ಕಾರಣದಿಂದ ಅವರಿಗೆ ಈಗ ‘ಬಿಗ್​ ಬಾಸ್​ ಒಟಿಟಿ 3’ ಶೋ ನಡೆಸಿಕೊಡಲು ಸಾಧ್ಯವಾಗುತ್ತಿಲ್ಲ. ಅವರ ಬದಲಿಗೆ ಅನಿಲ್​ ಕಪೂರ್​ ಅವರು ನಿರೂಪಕರಾಗಿದ್ದಾರೆ.

ಗುಂಡಿನ ದಾಳಿ ಪ್ರಕರಣದಲ್ಲಿ ಸಲ್ಮಾನ್​ ಖಾನ್​ ಹೇಳಿಕೆ ದಾಖಲಿಸಿಕೊಂಡ ಪೊಲೀಸರು
ಸಲ್ಮಾನ್​ ಖಾನ್​
Follow us
|

Updated on: Jun 12, 2024 | 10:14 PM

ಬಾಲಿವುಡ್​ ನಟ ಸಲ್ಮಾನ್​ ಖಾನ್​ (Salman Khan) ಅವರ ಬಾಂದ್ರಾ ನಿವಾಸದ ಮುಂದೆ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಮುಂಬೈ ಕ್ರೈಂ ಬ್ರ್ಯಾಂಚ್​​ (Mumbai Crime Branch) ಪೊಲೀಸರು ಸಲ್ಮಾನ್​ ಖಾನ್​ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಅಲ್ಲದೇ, ಸಲ್ಮಾನ್​ ಖಾನ್​ ಅವರ ಸಹೋದರ ಅರ್ಬಾಜ್​ ಖಾನ್​ ಹೇಳಿಕೆಯನ್ನೂ ಜೂನ್​ 4ರಂದು ದಾಖಲಿಸಿಕೊಳ್ಳಲಾಗಿದೆ. ಸಲ್ಮಾನ್​ ಖಾನ್​ ಕುಟುಂಬ (Salman Khan Family) ವಾಸವಾಗಿರುವ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಮೇಲೆ ಏಪ್ರಿಲ್​ 14ರಂದು ಕಿಡಿಗೇಡಿಗಳು ಗುಂಡು ಹಾರಿಸಿದ್ದರು.

ಸಲ್ಮಾನ್​ ಖಾನ್​ ಮನೆಯ ಮೇಲೆ ಶೂಟೌಟ್​ ಆಗಾದ ಅಭಿಮಾನಿಗಳಿಗೆ ಆತಂಕ ಆಗಿತ್ತು. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ಗುಂಡಿನ ದಾಳಿಗೆ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್​ ನಂಟು ಇರುವುದು ಬೆಳಕಿಗೆ ಬಂತು. ಆ ಬಳಿಕ ಮುಂಬೈ ಪೊಲೀಸರು ತನಿಖೆ ಚುರುಕುಗೊಳಿಸಿದರು. ಈ ಗುಂಡಿನ ದಾಳಿ ನಡೆಸಿದ ಕಿಡಿಗೇಡಿಗಳು 3 ಲಕ್ಷ ರೂಪಾಯಿ ಪಡೆದಿದ್ದರು ಎನ್ನಲಾಗಿದೆ.

ಶೂಟರ್​ಗಳಿಗೆ ಪ್ರೇರಣೆ ನೀಡುವಲ್ಲಿ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್​ನ ಸಹೋದರ ಅನ್ಮೋಲ್​ ಬಿಷ್ಣೋಯ್​ ಮುಖ್ಯ ಪಾತ್ರ ವಹಿಸಿದ್ದಾನೆ ಎಂದು ಈ ಮೊದಲು ಪೊಲೀಸರು ಹೇಳಿದ್ದರು. ಮಾರ್ಚ್​ 15ರಂದು ಪನ್ವೇಲ್​ನಲ್ಲಿ ಮಾರಕಾಸ್ತ್ರಗಳನ್ನು ಪಡೆದ ನಂತರ ಆತ ಈ ಶೂಟರ್​ಗಳಿಗೆ ದಾಳಿಯ ಆದೇಶ ನೀಡಿದ್ದ ಎನ್ನಲಾಗಿದೆ. ಶೂಟೌಟ್​ ಘಟನೆ ಬಳಿಕ ಸಲ್ಮಾನ್​ ಖಾನ್​ ಕುಟುಂಬದವರು ಹೇಳಿಕೆ ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: ‘ನನ್ನ ಮದುವೆ ಆಗ್ತೀಯಾ’: ಈ ನಟಿಗೆ ಪ್ರಪೋಸ್​ ಮಾಡಿದ್ದರು ಸಲ್ಮಾನ್​ ಖಾನ್​

‘ಬೈಕ್​ನಲ್ಲಿ ಬಂದ ಇಬ್ಬರು ಅಪರಿಚಿತರು ಸಲೀಂ ಖಾನ್​ ಕುಟುಂಬದ ಮನೆಯಾದ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಮೇಲೆ ಗುಂಡಿನ ದಾಳಿ ನಡೆಸಿದ್ದು ಆಘಾತಕಾರಿ ಸಂಗತಿ. ಈ ಘಟನೆಯಿಂದ ನಮ್ಮ ಫ್ಯಾಮಿಲಿಗೆ ಆತಂಕವಾಗಿದೆ. ದುರದೃಷ್ಟಕರ ವಿಷಯ ಏನೆಂದರೆ, ಕೆಲವರು ನಮ್ಮ ಕುಟುಂಬದ ಆಪ್ತರೆಂದು ಹೇಳಿಕೊಂಡು ಮಾಧ್ಯಮಗಳಲ್ಲಿ ಲಘುವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಘಟನೆ ಒಂದು ಪ್ರಚಾರದ ಗಿಮಿಕ್​ ಹಾಗೂ ಇದರಿಂದ ಸಲ್ಮಾನ್​ ಖಾನ್​ ಕುಟುಂಬದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಅಂತೆಲ್ಲ ಹೇಳಿದ್ದಾರೆ. ಆದರೆ ಅದು ನಿಜವಲ್ಲ. ಅಂಥವರ ಮಾತನ್ನು ಗಂಭೀರವಾಗಿ ಪರಿಗಣಿಸಬಾರದು’ ಎಂದು ಸಲ್ಮಾನ್​ ಖಾನ್​ ಅವರ ಕುಟುಂಬದವರು ಹೇಳಿಕೆ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
ಸಭೆಗೆ ಬಂದ ಕುಮಾರಸ್ವಾಮಿಯನ್ನು ಸ್ವಾಗತಿಸಿದ ಸಿದ್ದರಾಮಯ್ಯ: ವಿಡಿಯೋ ನೋಡಿ
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
‘ದರ್ಶನ್​ ಜೈಲಿಗೆ ಹೋದಮೇಲೆ ನನ್ನ ಮಗಳು ಸರಿಯಾಗಿ ಊಟ ಮಾಡುತ್ತಿಲ್ಲ’
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ಶ್ರೀಗಳು ಸ್ಥಾನ ಬಿಟ್ಟುಕೊಡಿ ಅಂದಿದ್ದು ಸಿದ್ದರಾಮಯ್ಯರನ್ನು ವಿಚಲಿತರಾಗಿಸಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆಗ, ಕಾಲೇಜುಗಳಿಗೆ ರಜೆ ಘೋಷಣೆ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ