AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡಿನ ದಾಳಿ ಪ್ರಕರಣದಲ್ಲಿ ಸಲ್ಮಾನ್​ ಖಾನ್​ ಹೇಳಿಕೆ ದಾಖಲಿಸಿಕೊಂಡ ಪೊಲೀಸರು

ಸಲ್ಮಾನ್​ ಖಾನ್​ ಅವರು ಸಖತ್​ ಬ್ಯುಸಿ ನಟ. ಈಗ ಅವರು ‘ಸಿಕಂದರ್​’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಗುಂಡಿನ ದಾಳಿ ನಂತರ ಭದ್ರತೆ ಹೆಚ್ಚಿಸಿಕೊಂಡು ಅವರು ತಿರುಗಾಡುತ್ತಿದ್ದಾರೆ. ‘ಸಿಕಂದರ್​’ ಸಿನಿಮಾದ ಕೆಲಸಗಳ ಕಾರಣದಿಂದ ಅವರಿಗೆ ಈಗ ‘ಬಿಗ್​ ಬಾಸ್​ ಒಟಿಟಿ 3’ ಶೋ ನಡೆಸಿಕೊಡಲು ಸಾಧ್ಯವಾಗುತ್ತಿಲ್ಲ. ಅವರ ಬದಲಿಗೆ ಅನಿಲ್​ ಕಪೂರ್​ ಅವರು ನಿರೂಪಕರಾಗಿದ್ದಾರೆ.

ಗುಂಡಿನ ದಾಳಿ ಪ್ರಕರಣದಲ್ಲಿ ಸಲ್ಮಾನ್​ ಖಾನ್​ ಹೇಳಿಕೆ ದಾಖಲಿಸಿಕೊಂಡ ಪೊಲೀಸರು
ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: Jun 12, 2024 | 10:14 PM

Share

ಬಾಲಿವುಡ್​ ನಟ ಸಲ್ಮಾನ್​ ಖಾನ್​ (Salman Khan) ಅವರ ಬಾಂದ್ರಾ ನಿವಾಸದ ಮುಂದೆ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಮುಂಬೈ ಕ್ರೈಂ ಬ್ರ್ಯಾಂಚ್​​ (Mumbai Crime Branch) ಪೊಲೀಸರು ಸಲ್ಮಾನ್​ ಖಾನ್​ ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಅಲ್ಲದೇ, ಸಲ್ಮಾನ್​ ಖಾನ್​ ಅವರ ಸಹೋದರ ಅರ್ಬಾಜ್​ ಖಾನ್​ ಹೇಳಿಕೆಯನ್ನೂ ಜೂನ್​ 4ರಂದು ದಾಖಲಿಸಿಕೊಳ್ಳಲಾಗಿದೆ. ಸಲ್ಮಾನ್​ ಖಾನ್​ ಕುಟುಂಬ (Salman Khan Family) ವಾಸವಾಗಿರುವ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಮೇಲೆ ಏಪ್ರಿಲ್​ 14ರಂದು ಕಿಡಿಗೇಡಿಗಳು ಗುಂಡು ಹಾರಿಸಿದ್ದರು.

ಸಲ್ಮಾನ್​ ಖಾನ್​ ಮನೆಯ ಮೇಲೆ ಶೂಟೌಟ್​ ಆಗಾದ ಅಭಿಮಾನಿಗಳಿಗೆ ಆತಂಕ ಆಗಿತ್ತು. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ಗುಂಡಿನ ದಾಳಿಗೆ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್​ ನಂಟು ಇರುವುದು ಬೆಳಕಿಗೆ ಬಂತು. ಆ ಬಳಿಕ ಮುಂಬೈ ಪೊಲೀಸರು ತನಿಖೆ ಚುರುಕುಗೊಳಿಸಿದರು. ಈ ಗುಂಡಿನ ದಾಳಿ ನಡೆಸಿದ ಕಿಡಿಗೇಡಿಗಳು 3 ಲಕ್ಷ ರೂಪಾಯಿ ಪಡೆದಿದ್ದರು ಎನ್ನಲಾಗಿದೆ.

ಶೂಟರ್​ಗಳಿಗೆ ಪ್ರೇರಣೆ ನೀಡುವಲ್ಲಿ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್​ನ ಸಹೋದರ ಅನ್ಮೋಲ್​ ಬಿಷ್ಣೋಯ್​ ಮುಖ್ಯ ಪಾತ್ರ ವಹಿಸಿದ್ದಾನೆ ಎಂದು ಈ ಮೊದಲು ಪೊಲೀಸರು ಹೇಳಿದ್ದರು. ಮಾರ್ಚ್​ 15ರಂದು ಪನ್ವೇಲ್​ನಲ್ಲಿ ಮಾರಕಾಸ್ತ್ರಗಳನ್ನು ಪಡೆದ ನಂತರ ಆತ ಈ ಶೂಟರ್​ಗಳಿಗೆ ದಾಳಿಯ ಆದೇಶ ನೀಡಿದ್ದ ಎನ್ನಲಾಗಿದೆ. ಶೂಟೌಟ್​ ಘಟನೆ ಬಳಿಕ ಸಲ್ಮಾನ್​ ಖಾನ್​ ಕುಟುಂಬದವರು ಹೇಳಿಕೆ ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: ‘ನನ್ನ ಮದುವೆ ಆಗ್ತೀಯಾ’: ಈ ನಟಿಗೆ ಪ್ರಪೋಸ್​ ಮಾಡಿದ್ದರು ಸಲ್ಮಾನ್​ ಖಾನ್​

‘ಬೈಕ್​ನಲ್ಲಿ ಬಂದ ಇಬ್ಬರು ಅಪರಿಚಿತರು ಸಲೀಂ ಖಾನ್​ ಕುಟುಂಬದ ಮನೆಯಾದ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಮೇಲೆ ಗುಂಡಿನ ದಾಳಿ ನಡೆಸಿದ್ದು ಆಘಾತಕಾರಿ ಸಂಗತಿ. ಈ ಘಟನೆಯಿಂದ ನಮ್ಮ ಫ್ಯಾಮಿಲಿಗೆ ಆತಂಕವಾಗಿದೆ. ದುರದೃಷ್ಟಕರ ವಿಷಯ ಏನೆಂದರೆ, ಕೆಲವರು ನಮ್ಮ ಕುಟುಂಬದ ಆಪ್ತರೆಂದು ಹೇಳಿಕೊಂಡು ಮಾಧ್ಯಮಗಳಲ್ಲಿ ಲಘುವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಘಟನೆ ಒಂದು ಪ್ರಚಾರದ ಗಿಮಿಕ್​ ಹಾಗೂ ಇದರಿಂದ ಸಲ್ಮಾನ್​ ಖಾನ್​ ಕುಟುಂಬದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಅಂತೆಲ್ಲ ಹೇಳಿದ್ದಾರೆ. ಆದರೆ ಅದು ನಿಜವಲ್ಲ. ಅಂಥವರ ಮಾತನ್ನು ಗಂಭೀರವಾಗಿ ಪರಿಗಣಿಸಬಾರದು’ ಎಂದು ಸಲ್ಮಾನ್​ ಖಾನ್​ ಅವರ ಕುಟುಂಬದವರು ಹೇಳಿಕೆ ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್