AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಪ್ರಚಾರದ ಗಿಮಿಕ್’; ಸಲ್ಮಾನ್ ಖಾನ್ ಮನೆಯ ಶೂಟೌಟ್ ಬಗ್ಗೆ ತಂದೆಯ ಪ್ರತಿಕ್ರಿಯೆ

ಸಿಎನ್​ಎನ್​ ನ್ಯೂಸ್ 18ಗೆ ಸಲೀಮ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ‘ಹೇಳೋಕೆ ಏನೂ ಇಲ್ಲ. ಅವರಿಗೆ ಪಬ್ಲಿಸಿಟಿ ಬೇಕು. ಈ ಬಗ್ಗೆ ಚಿಂತಿಸೋ ಅಗತ್ಯವಿಲ್ಲ’ ಎಂದಿದ್ದಾರೆ’ ಅವರು. ಇದರಿಂದ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ಆದರೂ ಭಯ ಸಂಪೂರ್ಣವಾಗಿ ಕಡಿಮೆ ಆಗಿಲ್ಲ.

‘ಇದು ಪ್ರಚಾರದ ಗಿಮಿಕ್’; ಸಲ್ಮಾನ್ ಖಾನ್ ಮನೆಯ ಶೂಟೌಟ್ ಬಗ್ಗೆ ತಂದೆಯ ಪ್ರತಿಕ್ರಿಯೆ
ಸಲೀಂ-ಸಲ್ಮಾನ್
Follow us
ರಾಜೇಶ್ ದುಗ್ಗುಮನೆ
|

Updated on: Apr 15, 2024 | 7:26 AM

ನಟ ಸಲ್ಮಾನ್ ಖಾನ್ (Salman Khan) ಅವರಿಗೆ ಕೊಲೆ ಬೆದರಿಕೆ ಇದೆ. ಲಾರೆನ್ಸ್ ಗ್ಯಾಂಗ್​ನವರು ಸಲ್ಲುಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಮಧ್ಯೆ ಸಲ್ಮಾನ್ ಖಾನ್ ಮನೆಯ ಬಳಿ ಫೈರಿಂಗ್ ಆಗಿದೆ. ಇದು ಅಭಿಮಾನಿಗಳಿಗೆ ಆತಂಕ ಮೂಡಿಸಿದೆ. ಸದ್ಯ ಸಲ್ಮಾನ್ ಖಾನ್​ ಮನೆ ಬಳಿ ಭದ್ರತೆ ಹೆಚ್ಚಿಸಲಾಗಿದೆ. ಈಗಾಗಲೇ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ. ಈ ಬಗ್ಗೆ ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ಚಿಂತಿಸುವ ಅಗತ್ಯವಿಲ್ಲ ಎಂದು ಅಭಿಮಾನಿಗಳಿಗೆ ಧೈರ್ಯ ತುಂಬಿದ್ದಾರೆ.

ಸಿಎನ್​ಎನ್​ ನ್ಯೂಸ್ 18ಗೆ ಸಲೀಮ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ‘ಹೇಳೋಕೆ ಏನೂ ಇಲ್ಲ. ಅವರಿಗೆ ಪಬ್ಲಿಸಿಟಿ ಬೇಕು. ಈ ಬಗ್ಗೆ ಚಿಂತಿಸೋ ಅಗತ್ಯವಿಲ್ಲ’ ಎಂದಿದ್ದಾರೆ’ ಅವರು. ಇದರಿಂದ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ಆದರೂ ಭಯ ಸಂಪೂರ್ಣವಾಗಿ ಕಡಿಮೆ ಆಗಿಲ್ಲ. ಮುಂದೇನಾಗುತ್ತದೆ ಎನ್ನುವ ಚಿಂತೆ ಅಭಿಮಾನಿಗಳನ್ನು ಬಹುವಾಗಿ ಕಾಡುತ್ತಿದೆ.

ಏಪ್ರಿಲ್ 14ರ ಮುಂಜಾನೆ ಮುಂಬೈನ ಗ್ಯಾಲಾಕ್ಸಿ ಅಪಾರ್ಟ್​ಮೆಂಟ್​ನಲ್ಲಿರುವ ಸಲ್ಮಾನ್ ಖಾನ್ ಮನೆ ಸಮೀಪ ಗುಂಡಿನ ದಾಳಿ ಕೇಳಿಸಿದೆ. ಬೈಕ್​ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ಮಾಡಿದ್ದರು. ಸದ್ಯ ಕೇಸ್ ದಾಖಲಿಸಿಕೊಂಡಿರೋ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದಾಳಿಯ ಬಳಿಕ ಬೈಕ್​ನಲ್ಲಿ ಬಂದವರು ವೆಸ್ಟರ್ನ್​ ಎಕ್ಸ್​ಪ್ರೆಸ್ ಹೈವೇ ಅತ್ತ ತೆರಳಿದ್ದಾರೆ. ಹೀಗಾಗಿ ದಾಳಿ ಮಾಡಿದವರು ಮುಂಬೈನಿಂದ ಹೊರ ಹೋಗಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಹೊಸ ಚಿತ್ರಕ್ಕೆ ‘ಸಿಖಂದರ್’ ಶೀರ್ಷಿಕೆ; 2025ರ ಈದ್​ಗೆ ರಿಲೀಸ್

ಕಳೆದ ವರ್ಷ ಸಲ್ಮಾನ್ ಖಾನ್ ಅವರಿಗೆ ಗ್ಯಾಂಗ್​ಸ್ಟರ್ ಗೋಲ್ಡಿ ಬ್ರಾರ್ ಅವರಿಂದ ಬೆದರಿಕೆ ಬಂದಿತ್ತು. ಅವರ ಗ್ಯಾಂಗ್​ನ ಹಿಟ್​ಲಿಸ್ಟ್​ನಲ್ಲಿ ಸಲ್ಮಾನ್ ಖಾನ್ ಹೆಸರು ಇದೆ. ಆ ಬಳಿಕ ಸಲ್ಮಾನ್ ಖಾನ್ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು. ಇತ್ತೀಚೆಗೆ ಈದ್ ಸಂದರ್ಭದಲ್ಲಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬೆತ್ತಲೆ ಕಳ್ಳನ ಕೈಚಳಕ: ವಿಡಿಯೋ ನೋಡಿ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ಬಾಳೆಗಿಡ ನೆಲಕಚ್ಚಿದ್ದು ಕಂಡು ಆಘಾತಕ್ಕೊಳಗಾಗಿ ಪ್ರಜ್ಞೆತಪ್ಪಿ ಬಿದ್ದ ರೈತ
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ರಾಮನಗರ ಜಿಲ್ಲೆಯ ಹಲವೆಡೆ ಭಾರಿ ಮಳೆ: ಮಾಗಡಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ, ಐವರು ಸಾವು
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
Daily Devotional: ಕಾಲುಂಗುರ ಕಳೆದು ಹೋದರೆ ಅದರ ಮುನ್ಸೂಚನೆ ಏನು?
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ
ಈ ದಿನ ಜ್ಯೇಷ್ಠ ನಕ್ಷತ್ರ, ಸಿದ್ಧಯೋಗ: ಯಾವ ರಾಶಿಗಳಿಗೆ ಶುಭ ದಿನ ತಿಳಿಯಿರಿ