‘ಇದು ಪ್ರಚಾರದ ಗಿಮಿಕ್’; ಸಲ್ಮಾನ್ ಖಾನ್ ಮನೆಯ ಶೂಟೌಟ್ ಬಗ್ಗೆ ತಂದೆಯ ಪ್ರತಿಕ್ರಿಯೆ

ಸಿಎನ್​ಎನ್​ ನ್ಯೂಸ್ 18ಗೆ ಸಲೀಮ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ‘ಹೇಳೋಕೆ ಏನೂ ಇಲ್ಲ. ಅವರಿಗೆ ಪಬ್ಲಿಸಿಟಿ ಬೇಕು. ಈ ಬಗ್ಗೆ ಚಿಂತಿಸೋ ಅಗತ್ಯವಿಲ್ಲ’ ಎಂದಿದ್ದಾರೆ’ ಅವರು. ಇದರಿಂದ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ಆದರೂ ಭಯ ಸಂಪೂರ್ಣವಾಗಿ ಕಡಿಮೆ ಆಗಿಲ್ಲ.

‘ಇದು ಪ್ರಚಾರದ ಗಿಮಿಕ್’; ಸಲ್ಮಾನ್ ಖಾನ್ ಮನೆಯ ಶೂಟೌಟ್ ಬಗ್ಗೆ ತಂದೆಯ ಪ್ರತಿಕ್ರಿಯೆ
ಸಲೀಂ-ಸಲ್ಮಾನ್
Follow us
|

Updated on: Apr 15, 2024 | 7:26 AM

ನಟ ಸಲ್ಮಾನ್ ಖಾನ್ (Salman Khan) ಅವರಿಗೆ ಕೊಲೆ ಬೆದರಿಕೆ ಇದೆ. ಲಾರೆನ್ಸ್ ಗ್ಯಾಂಗ್​ನವರು ಸಲ್ಲುಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಮಧ್ಯೆ ಸಲ್ಮಾನ್ ಖಾನ್ ಮನೆಯ ಬಳಿ ಫೈರಿಂಗ್ ಆಗಿದೆ. ಇದು ಅಭಿಮಾನಿಗಳಿಗೆ ಆತಂಕ ಮೂಡಿಸಿದೆ. ಸದ್ಯ ಸಲ್ಮಾನ್ ಖಾನ್​ ಮನೆ ಬಳಿ ಭದ್ರತೆ ಹೆಚ್ಚಿಸಲಾಗಿದೆ. ಈಗಾಗಲೇ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ. ಈ ಬಗ್ಗೆ ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ಚಿಂತಿಸುವ ಅಗತ್ಯವಿಲ್ಲ ಎಂದು ಅಭಿಮಾನಿಗಳಿಗೆ ಧೈರ್ಯ ತುಂಬಿದ್ದಾರೆ.

ಸಿಎನ್​ಎನ್​ ನ್ಯೂಸ್ 18ಗೆ ಸಲೀಮ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ‘ಹೇಳೋಕೆ ಏನೂ ಇಲ್ಲ. ಅವರಿಗೆ ಪಬ್ಲಿಸಿಟಿ ಬೇಕು. ಈ ಬಗ್ಗೆ ಚಿಂತಿಸೋ ಅಗತ್ಯವಿಲ್ಲ’ ಎಂದಿದ್ದಾರೆ’ ಅವರು. ಇದರಿಂದ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ಆದರೂ ಭಯ ಸಂಪೂರ್ಣವಾಗಿ ಕಡಿಮೆ ಆಗಿಲ್ಲ. ಮುಂದೇನಾಗುತ್ತದೆ ಎನ್ನುವ ಚಿಂತೆ ಅಭಿಮಾನಿಗಳನ್ನು ಬಹುವಾಗಿ ಕಾಡುತ್ತಿದೆ.

ಏಪ್ರಿಲ್ 14ರ ಮುಂಜಾನೆ ಮುಂಬೈನ ಗ್ಯಾಲಾಕ್ಸಿ ಅಪಾರ್ಟ್​ಮೆಂಟ್​ನಲ್ಲಿರುವ ಸಲ್ಮಾನ್ ಖಾನ್ ಮನೆ ಸಮೀಪ ಗುಂಡಿನ ದಾಳಿ ಕೇಳಿಸಿದೆ. ಬೈಕ್​ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ಮಾಡಿದ್ದರು. ಸದ್ಯ ಕೇಸ್ ದಾಖಲಿಸಿಕೊಂಡಿರೋ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದಾಳಿಯ ಬಳಿಕ ಬೈಕ್​ನಲ್ಲಿ ಬಂದವರು ವೆಸ್ಟರ್ನ್​ ಎಕ್ಸ್​ಪ್ರೆಸ್ ಹೈವೇ ಅತ್ತ ತೆರಳಿದ್ದಾರೆ. ಹೀಗಾಗಿ ದಾಳಿ ಮಾಡಿದವರು ಮುಂಬೈನಿಂದ ಹೊರ ಹೋಗಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಹೊಸ ಚಿತ್ರಕ್ಕೆ ‘ಸಿಖಂದರ್’ ಶೀರ್ಷಿಕೆ; 2025ರ ಈದ್​ಗೆ ರಿಲೀಸ್

ಕಳೆದ ವರ್ಷ ಸಲ್ಮಾನ್ ಖಾನ್ ಅವರಿಗೆ ಗ್ಯಾಂಗ್​ಸ್ಟರ್ ಗೋಲ್ಡಿ ಬ್ರಾರ್ ಅವರಿಂದ ಬೆದರಿಕೆ ಬಂದಿತ್ತು. ಅವರ ಗ್ಯಾಂಗ್​ನ ಹಿಟ್​ಲಿಸ್ಟ್​ನಲ್ಲಿ ಸಲ್ಮಾನ್ ಖಾನ್ ಹೆಸರು ಇದೆ. ಆ ಬಳಿಕ ಸಲ್ಮಾನ್ ಖಾನ್ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು. ಇತ್ತೀಚೆಗೆ ಈದ್ ಸಂದರ್ಭದಲ್ಲಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?