AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಪ್ರಚಾರದ ಗಿಮಿಕ್’; ಸಲ್ಮಾನ್ ಖಾನ್ ಮನೆಯ ಶೂಟೌಟ್ ಬಗ್ಗೆ ತಂದೆಯ ಪ್ರತಿಕ್ರಿಯೆ

ಸಿಎನ್​ಎನ್​ ನ್ಯೂಸ್ 18ಗೆ ಸಲೀಮ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ‘ಹೇಳೋಕೆ ಏನೂ ಇಲ್ಲ. ಅವರಿಗೆ ಪಬ್ಲಿಸಿಟಿ ಬೇಕು. ಈ ಬಗ್ಗೆ ಚಿಂತಿಸೋ ಅಗತ್ಯವಿಲ್ಲ’ ಎಂದಿದ್ದಾರೆ’ ಅವರು. ಇದರಿಂದ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ಆದರೂ ಭಯ ಸಂಪೂರ್ಣವಾಗಿ ಕಡಿಮೆ ಆಗಿಲ್ಲ.

‘ಇದು ಪ್ರಚಾರದ ಗಿಮಿಕ್’; ಸಲ್ಮಾನ್ ಖಾನ್ ಮನೆಯ ಶೂಟೌಟ್ ಬಗ್ಗೆ ತಂದೆಯ ಪ್ರತಿಕ್ರಿಯೆ
ಸಲೀಂ-ಸಲ್ಮಾನ್
ರಾಜೇಶ್ ದುಗ್ಗುಮನೆ
|

Updated on: Apr 15, 2024 | 7:26 AM

Share

ನಟ ಸಲ್ಮಾನ್ ಖಾನ್ (Salman Khan) ಅವರಿಗೆ ಕೊಲೆ ಬೆದರಿಕೆ ಇದೆ. ಲಾರೆನ್ಸ್ ಗ್ಯಾಂಗ್​ನವರು ಸಲ್ಲುಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಮಧ್ಯೆ ಸಲ್ಮಾನ್ ಖಾನ್ ಮನೆಯ ಬಳಿ ಫೈರಿಂಗ್ ಆಗಿದೆ. ಇದು ಅಭಿಮಾನಿಗಳಿಗೆ ಆತಂಕ ಮೂಡಿಸಿದೆ. ಸದ್ಯ ಸಲ್ಮಾನ್ ಖಾನ್​ ಮನೆ ಬಳಿ ಭದ್ರತೆ ಹೆಚ್ಚಿಸಲಾಗಿದೆ. ಈಗಾಗಲೇ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ. ಈ ಬಗ್ಗೆ ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ಚಿಂತಿಸುವ ಅಗತ್ಯವಿಲ್ಲ ಎಂದು ಅಭಿಮಾನಿಗಳಿಗೆ ಧೈರ್ಯ ತುಂಬಿದ್ದಾರೆ.

ಸಿಎನ್​ಎನ್​ ನ್ಯೂಸ್ 18ಗೆ ಸಲೀಮ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ‘ಹೇಳೋಕೆ ಏನೂ ಇಲ್ಲ. ಅವರಿಗೆ ಪಬ್ಲಿಸಿಟಿ ಬೇಕು. ಈ ಬಗ್ಗೆ ಚಿಂತಿಸೋ ಅಗತ್ಯವಿಲ್ಲ’ ಎಂದಿದ್ದಾರೆ’ ಅವರು. ಇದರಿಂದ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ಆದರೂ ಭಯ ಸಂಪೂರ್ಣವಾಗಿ ಕಡಿಮೆ ಆಗಿಲ್ಲ. ಮುಂದೇನಾಗುತ್ತದೆ ಎನ್ನುವ ಚಿಂತೆ ಅಭಿಮಾನಿಗಳನ್ನು ಬಹುವಾಗಿ ಕಾಡುತ್ತಿದೆ.

ಏಪ್ರಿಲ್ 14ರ ಮುಂಜಾನೆ ಮುಂಬೈನ ಗ್ಯಾಲಾಕ್ಸಿ ಅಪಾರ್ಟ್​ಮೆಂಟ್​ನಲ್ಲಿರುವ ಸಲ್ಮಾನ್ ಖಾನ್ ಮನೆ ಸಮೀಪ ಗುಂಡಿನ ದಾಳಿ ಕೇಳಿಸಿದೆ. ಬೈಕ್​ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ಮಾಡಿದ್ದರು. ಸದ್ಯ ಕೇಸ್ ದಾಖಲಿಸಿಕೊಂಡಿರೋ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದಾಳಿಯ ಬಳಿಕ ಬೈಕ್​ನಲ್ಲಿ ಬಂದವರು ವೆಸ್ಟರ್ನ್​ ಎಕ್ಸ್​ಪ್ರೆಸ್ ಹೈವೇ ಅತ್ತ ತೆರಳಿದ್ದಾರೆ. ಹೀಗಾಗಿ ದಾಳಿ ಮಾಡಿದವರು ಮುಂಬೈನಿಂದ ಹೊರ ಹೋಗಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಹೊಸ ಚಿತ್ರಕ್ಕೆ ‘ಸಿಖಂದರ್’ ಶೀರ್ಷಿಕೆ; 2025ರ ಈದ್​ಗೆ ರಿಲೀಸ್

ಕಳೆದ ವರ್ಷ ಸಲ್ಮಾನ್ ಖಾನ್ ಅವರಿಗೆ ಗ್ಯಾಂಗ್​ಸ್ಟರ್ ಗೋಲ್ಡಿ ಬ್ರಾರ್ ಅವರಿಂದ ಬೆದರಿಕೆ ಬಂದಿತ್ತು. ಅವರ ಗ್ಯಾಂಗ್​ನ ಹಿಟ್​ಲಿಸ್ಟ್​ನಲ್ಲಿ ಸಲ್ಮಾನ್ ಖಾನ್ ಹೆಸರು ಇದೆ. ಆ ಬಳಿಕ ಸಲ್ಮಾನ್ ಖಾನ್ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು. ಇತ್ತೀಚೆಗೆ ಈದ್ ಸಂದರ್ಭದಲ್ಲಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್