AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಪ್ರಚಾರದ ಗಿಮಿಕ್’; ಸಲ್ಮಾನ್ ಖಾನ್ ಮನೆಯ ಶೂಟೌಟ್ ಬಗ್ಗೆ ತಂದೆಯ ಪ್ರತಿಕ್ರಿಯೆ

ಸಿಎನ್​ಎನ್​ ನ್ಯೂಸ್ 18ಗೆ ಸಲೀಮ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ‘ಹೇಳೋಕೆ ಏನೂ ಇಲ್ಲ. ಅವರಿಗೆ ಪಬ್ಲಿಸಿಟಿ ಬೇಕು. ಈ ಬಗ್ಗೆ ಚಿಂತಿಸೋ ಅಗತ್ಯವಿಲ್ಲ’ ಎಂದಿದ್ದಾರೆ’ ಅವರು. ಇದರಿಂದ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ಆದರೂ ಭಯ ಸಂಪೂರ್ಣವಾಗಿ ಕಡಿಮೆ ಆಗಿಲ್ಲ.

‘ಇದು ಪ್ರಚಾರದ ಗಿಮಿಕ್’; ಸಲ್ಮಾನ್ ಖಾನ್ ಮನೆಯ ಶೂಟೌಟ್ ಬಗ್ಗೆ ತಂದೆಯ ಪ್ರತಿಕ್ರಿಯೆ
ಸಲೀಂ-ಸಲ್ಮಾನ್
ರಾಜೇಶ್ ದುಗ್ಗುಮನೆ
|

Updated on: Apr 15, 2024 | 7:26 AM

Share

ನಟ ಸಲ್ಮಾನ್ ಖಾನ್ (Salman Khan) ಅವರಿಗೆ ಕೊಲೆ ಬೆದರಿಕೆ ಇದೆ. ಲಾರೆನ್ಸ್ ಗ್ಯಾಂಗ್​ನವರು ಸಲ್ಲುಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಮಧ್ಯೆ ಸಲ್ಮಾನ್ ಖಾನ್ ಮನೆಯ ಬಳಿ ಫೈರಿಂಗ್ ಆಗಿದೆ. ಇದು ಅಭಿಮಾನಿಗಳಿಗೆ ಆತಂಕ ಮೂಡಿಸಿದೆ. ಸದ್ಯ ಸಲ್ಮಾನ್ ಖಾನ್​ ಮನೆ ಬಳಿ ಭದ್ರತೆ ಹೆಚ್ಚಿಸಲಾಗಿದೆ. ಈಗಾಗಲೇ ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ. ಈ ಬಗ್ಗೆ ಸಲ್ಮಾನ್ ಖಾನ್ ತಂದೆ ಸಲೀಮ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ಚಿಂತಿಸುವ ಅಗತ್ಯವಿಲ್ಲ ಎಂದು ಅಭಿಮಾನಿಗಳಿಗೆ ಧೈರ್ಯ ತುಂಬಿದ್ದಾರೆ.

ಸಿಎನ್​ಎನ್​ ನ್ಯೂಸ್ 18ಗೆ ಸಲೀಮ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ‘ಹೇಳೋಕೆ ಏನೂ ಇಲ್ಲ. ಅವರಿಗೆ ಪಬ್ಲಿಸಿಟಿ ಬೇಕು. ಈ ಬಗ್ಗೆ ಚಿಂತಿಸೋ ಅಗತ್ಯವಿಲ್ಲ’ ಎಂದಿದ್ದಾರೆ’ ಅವರು. ಇದರಿಂದ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ಆದರೂ ಭಯ ಸಂಪೂರ್ಣವಾಗಿ ಕಡಿಮೆ ಆಗಿಲ್ಲ. ಮುಂದೇನಾಗುತ್ತದೆ ಎನ್ನುವ ಚಿಂತೆ ಅಭಿಮಾನಿಗಳನ್ನು ಬಹುವಾಗಿ ಕಾಡುತ್ತಿದೆ.

ಏಪ್ರಿಲ್ 14ರ ಮುಂಜಾನೆ ಮುಂಬೈನ ಗ್ಯಾಲಾಕ್ಸಿ ಅಪಾರ್ಟ್​ಮೆಂಟ್​ನಲ್ಲಿರುವ ಸಲ್ಮಾನ್ ಖಾನ್ ಮನೆ ಸಮೀಪ ಗುಂಡಿನ ದಾಳಿ ಕೇಳಿಸಿದೆ. ಬೈಕ್​ನಲ್ಲಿ ಬಂದ ಇಬ್ಬರು ಗುಂಡಿನ ದಾಳಿ ಮಾಡಿದ್ದರು. ಸದ್ಯ ಕೇಸ್ ದಾಖಲಿಸಿಕೊಂಡಿರೋ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದಾಳಿಯ ಬಳಿಕ ಬೈಕ್​ನಲ್ಲಿ ಬಂದವರು ವೆಸ್ಟರ್ನ್​ ಎಕ್ಸ್​ಪ್ರೆಸ್ ಹೈವೇ ಅತ್ತ ತೆರಳಿದ್ದಾರೆ. ಹೀಗಾಗಿ ದಾಳಿ ಮಾಡಿದವರು ಮುಂಬೈನಿಂದ ಹೊರ ಹೋಗಿರಬಹುದು ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಹೊಸ ಚಿತ್ರಕ್ಕೆ ‘ಸಿಖಂದರ್’ ಶೀರ್ಷಿಕೆ; 2025ರ ಈದ್​ಗೆ ರಿಲೀಸ್

ಕಳೆದ ವರ್ಷ ಸಲ್ಮಾನ್ ಖಾನ್ ಅವರಿಗೆ ಗ್ಯಾಂಗ್​ಸ್ಟರ್ ಗೋಲ್ಡಿ ಬ್ರಾರ್ ಅವರಿಂದ ಬೆದರಿಕೆ ಬಂದಿತ್ತು. ಅವರ ಗ್ಯಾಂಗ್​ನ ಹಿಟ್​ಲಿಸ್ಟ್​ನಲ್ಲಿ ಸಲ್ಮಾನ್ ಖಾನ್ ಹೆಸರು ಇದೆ. ಆ ಬಳಿಕ ಸಲ್ಮಾನ್ ಖಾನ್ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು. ಇತ್ತೀಚೆಗೆ ಈದ್ ಸಂದರ್ಭದಲ್ಲಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!