AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಲು ನಿವಾಸದ ಮೇಲೆ ಗುಂಡು ಹಾರಿಸಿದವರಿಗೆ ಸಿಕ್ಕಿತ್ತು ಲಕ್ಷ ಲಕ್ಷ ಹಣ; ಮೂರನೇ ಆರೋಪಿ ಅರೆಸ್ಟ್

ಸಲ್ಮಾನ್ ವಿರುದ್ಧ ದ್ವೇಷ ಸಾಧಿಸುತ್ತಿರುವ ಲಾರೆನ್ಸ್ ಬಿಷ್ಣೋಯ್ ಸದ್ಯ ಜೈಲಿನಲ್ಲಿದ್ದಾನೆ. ಅಲ್ಲಿಯೇ ಇದ್ದುಕೊಂಡು ಆತ ಸಲ್ಲು ವಿರುದ್ಧ ಸಂಚು ರೂಪಿಸುತ್ತಿದ್ದಾನೆ. ಲಾರೆನ್ಸ್​ನ ಸಹೋದರನೇ ಈ ಅನ್ಮೋಲ್. ಲಾರೆನ್ಸ್ ಗ್ಯಾಂಗ್ ಸಲ್ಲು ಮನೆಯ ಮೇಲಿನ ದಾಳಿಯ ಹೊಣೆ ಹೊತ್ತಿತ್ತು.  

ಸಲ್ಲು ನಿವಾಸದ ಮೇಲೆ ಗುಂಡು ಹಾರಿಸಿದವರಿಗೆ ಸಿಕ್ಕಿತ್ತು ಲಕ್ಷ ಲಕ್ಷ ಹಣ; ಮೂರನೇ ಆರೋಪಿ ಅರೆಸ್ಟ್
ಸಲ್ಮಾನ್ ಖಾನ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Apr 18, 2024 | 1:24 PM

Share

ಸಲ್ಮಾನ್ ಖಾನ್ (Salman Khan) ಅವರ ಮನೆಯ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಸ್ವೀಕರಿಸಿದ್ದಾರೆ. ಈಗಾಗಲೇ ಮುಂಬೈ ಕ್ರೈಮ್ ಬ್ರ್ಯಾಂಚ್​ನವರು ಮೂವರನ್ನು ಬಂಧಿಸಿದ್ದು, ತನಿಖೆಗೆ ಚುರುಕು ಮುಟ್ಟಿಸಲಾಗಿದೆ. ಶಾಕಿಂಗ್ ವಿಚಾರ ಎಂದರೆ ಗುಂಡು ಹಾರಿಸಿದವರಿಗೆ ಲಕ್ಷ ಲಕ್ಷ ರೂಪಾಯಿ ಸಿಕ್ಕಿತ್ತು. ಈ ಪ್ರಕರಣದ ಹಿಂದೆ ಅನ್ಮೋಲ್ ಬಿಷ್ಣೋಯ್ ಕೈವಾಡ ಇದೆ ಎನ್ನಲಾಗಿದೆ. ಸದ್ಯ ಕ್ರೈಮ್ ಬ್ರ್ಯಾಂಚ್​ ತಂಡ ದೆಹಲಿ, ಬಿಹಾರ್, ಗುಜರಾತ್ ಹಾಗೂ ರಾಜಸ್ಥಾನಕ್ಕೆ ತೆರಳಿದ್ದು, ತನಿಖೆ ನಡೆಸುತ್ತಿದೆ.

ಬಂಧಿತರನ್ನು ಸಾಗರ್ ಪಾಲ್ ಹಾಗೂ ವಿಕ್ಕಿ ಗುಪ್ತಾ ಎಂದು ಗುರುತಿಸಲಾಗಿದೆ. ಇವರು ಅನ್ಮೋಲ್ ಬಿಷ್ಣೋಯ್ ಜೊತೆ ಸಂಪರ್ಕದಲ್ಲಿ ಇದ್ದರು. ಇಂಟರ್​ನೆಟ್ ಕಾಲ್ ಮೂಲಕ ಸಂಪರ್ಕ ಸಾಧಿಸುತ್ತಿದ್ದರು. ಇಬ್ಬರೂ ಆರೋಪಿಗಳಿಗೆ 1 ಲಕ್ಷ ರೂಪಾಯಿ ಅಡ್ವಾನ್ಸ್ ನೀಡಲಾಗಿತ್ತು. ಕೆಲಸ ಮುಗಿದ ಬಳಿಕ 3 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ಕೊಡಲಾಗಿತ್ತು.

ಸಲ್ಲು ಮನೆಯ ಮೇಲೆ ನಾಲ್ಕು ಬಾರಿ ಗುಂಡು ಹಾರಿಸಿ ಸಾಗರ್ ಪಾಲ್ ಹಾಗೂ ವಿಕ್ಕಿ ಗುಪ್ತಾ ಅಲ್ಲಿಂದ ಪರಾರಿಯಾಗಿದ್ದರು. ಆಟೋ, ಟ್ರೇನ್, ಕಾರು, ಬಸ್​ ಮೂಲಕ ಗುಜರಾತ್​ನ ಕಚ್ ತಲುಪಿದ್ದರು. ಅಲ್ಲಿಯವರೆಗೆ ಮೊಬೈಲ್​ನ ಇವರು ಸ್ವಿಚ್​ ಆಫ್ ಮಾಡಿಯೇ ಇಟ್ಟಿದ್ದರು. ಕಚ್​ನ ಭುಜ್​ಗೆ ಹೊಗಿ ಅನ್ಮೋಲ್ ಜೊತೆ ಮಾತನಾಡಲು ಮೊಬೈಲ್ ಆನ್ ಮಾಡಿದಾಗ ಇವರು ಸಿಕ್ಕಿ ಬಿದ್ದಿದ್ದಾರೆ. ಅನ್ಮೋಲ್ ಸದ್ಯ ಕೆನಡಾದಲ್ಲಿದ್ದಾನೆ. ಆತನಿಗಾಗಿ ಲುಕ್​ಔಟ್ ನೋಟಿಸ್ ಹೊರಡಿಸಲಾಗಿದೆ.

ಸಲ್ಮಾನ್ ಖಾನ್ ವಿರುದ್ಧ ದ್ವೇಷ ಸಾಧಿಸುತ್ತಿರುವ ಲಾರೆನ್ಸ್ ಬಿಷ್ಣೋಯ್ ಸದ್ಯ ಜೈಲಿನಲ್ಲಿದ್ದಾನೆ. ಅಲ್ಲಿಯೇ ಇದ್ದುಕೊಂಡು ಆತ ಸಲ್ಲು ವಿರುದ್ಧ ಸಂಚು ರೂಪಿಸುತ್ತಿದ್ದಾನೆ. ಲಾರೆನ್ಸ್​ನ ಸಹೋದರನೇ ಈ ಅನ್ಮೋಲ್. ಲಾರೆನ್ಸ್ ಗ್ಯಾಂಗ್ ಸಲ್ಲು ಮನೆಯ ಮೇಲಿನ ದಾಳಿಯ ಹೊಣೆ ಹೊತ್ತಿತ್ತು.

ಇದನ್ನೂ ಓದಿ: ‘ಇದು ಪ್ರಚಾರದ ಗಿಮಿಕ್’; ಸಲ್ಮಾನ್ ಖಾನ್ ಮನೆಯ ಶೂಟೌಟ್ ಬಗ್ಗೆ ತಂದೆಯ ಪ್ರತಿಕ್ರಿಯೆ

ಸಲ್ಮಾನ್ ಖಾನ್ ಅವರು ಕೃಷ್ಣ ಮೃಗ ಹತ್ಯೆ ಮಾಡಿರುವ ಆರೋಪ ಹೊತ್ತಿದ್ದಾರೆ. ಬಿಷ್ಣೋಯ್ ಸಮುದಾಯದವರು ಕೃಷ್ಣ ಮೃಗವನ್ನು ದೇವರಂತೆ ನೋಡುತ್ತಾರೆ. ಈ ಕಾರಣಕ್ಕೆ ಸಲ್ಲು ಮೇಲೆ ಲಾರೆನ್ಸ್ ಗ್ಯಾಂಗ್​ನವರು ದ್ವೇಷ ಸಾಧಿಸುತ್ತಿದ್ದಾರೆ. ಸಲ್ಮಾನ್ ಖಾನ್ ಕ್ಷಮೆ ಕೇಳಬೇಕು ಎಂದು ಅವರು ಸಾಕಷ್ಟು ಬಾರಿ ಆಗ್ರಹಿಸಿದ್ದಾರೆ.

ಮತ್ತೊಬ್ಬ ಅರೆಸ್ಟ್

ಸಲ್ಮಾನ್ ಖಾನ್ ಮನೆಯ ಮೇಲೆ ನಡೆದ ಫೈರಿಂಗ್ ಪ್ರಕರಣದಲ್ಲಿ ಮೂರನೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಈ ವ್ಯಕ್ತಿ ದಾಳಿಗೂ ಮುನ್ನ ಮತ್ತು ನಂತರ ಫೈಯರ್ ಮಾಡಿದವರ ಜೊತೆ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಹರಿಯಾಣ ಮೂಲದ ಈ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಹತ್ತು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಈ ಸಂದರ್ಭದಲ್ಲಿ ಇನ್ನೂ ಕೆಲವು ದೊಡ್ಡ ವಿಚಾರಗಳು ರಿವೀಲ್ ಆಗೋ ಸಾಧ್ಯತೆ ಇದೆ. ಕಳೆದ ಎರಡು ತಿಂಗಳಿಂದ ಸಲ್ಮಾನ್ ಖಾನ್ ಮನೆಗೆ ಗುಂಡಿನ ದಾಳಿ ನಡೆಸಲು ಪ್ಲಾನ್ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲ, ಈ ಬಂಧಿತರು ಕೆಲವು ತಿಂಗಳುಗಳಿಂದ ಮುಂಬೈನಲ್ಲಿ ನೆಲೆಸಿದ್ದರು. ಇವರು ಬಿಹಾರ ಮೂಲದವರು.

ಶೂಟಿಂಗ್ ಘಟನೆಯ ನಂತರ ಸಲ್ಮಾನ್ ಖಾನ್ ಮತ್ತು ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಲ್ಮಾನ್ ಖಾನ್ ಅವರ ಸಂಪೂರ್ಣ ಭದ್ರತೆಯ ಹೊಣೆಯನ್ನು ಮುಂಬೈ ಪೊಲೀಸರು ವಹಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ