ಸಲ್ಲು ಮನೆಯೆ ಮೇಲೆ ಗುಂಡು ಹಾರಿಸಿ ಸಿನಿಮೀಯ ರೀತಿಯಲ್ಲಿ ಗುಜರಾತ್ ಸೇರಿದ್ದ ಶೂಟರ್​ಗಳು

ಸಲ್ಮಾನ್ ಖಾನ್ ಮನೆಯ ಮೇಲೆ ದಾಳಿ ಮಾಡಿದವರು ಸಿನಿಮಾ ರೀತಿಯಲ್ಲಿ ಪರಾರಿ ಆಗಿದ್ದರು. ಇದು ಅವರ ಹ್ಯಾಂಡ್ಲರ್​ಗಳ ಸೂಚನೆ ಇರಬಹುದು ಅಥವಾ ನಗರಕ್ಕೆ ಹೊಸಬರು ಅನ್ನೋ ಕಾರಣಕ್ಕೆ ಈ ರೀತಿ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಅವರು ಗುಜರಾತ್ ಸೇರಿದ್ದು ಹೇಗೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಸಲ್ಲು ಮನೆಯೆ ಮೇಲೆ ಗುಂಡು ಹಾರಿಸಿ ಸಿನಿಮೀಯ ರೀತಿಯಲ್ಲಿ ಗುಜರಾತ್ ಸೇರಿದ್ದ ಶೂಟರ್​ಗಳು
ಸಲ್ಮಾನ್ ಖಾನ್
Follow us
|

Updated on: Apr 17, 2024 | 8:24 AM

ನಟ ಸಲ್ಮಾನ್ ಖಾನ್ (Salman Khan) ಮನೆಯ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ. ಮುಂಬೈ ಕ್ರೈಮ್ ಬ್ರ್ಯಾಂಚ್ ಅಧಿಕಾರಿಗಳು ಗುಜರಾತ್​ನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ. ಬಂಧಿತ ಇಬ್ಬರೂ ಮುಂಬೈನಿಂದ ಗುಜರಾತ್​ಗೆ ಸಿನಿಮೀಯ ಶೈಲಿಯಲ್ಲಿ ಪಾರಾಗಿದ್ದರು ಎಂದು ವರದಿ ಆಗಿದೆ. ಇವರು, ಆಟೋ, ಲೋಕಲ್ ಟ್ರೇನ್, ಟ್ರೇನ್, ಬಸ್ ಹೀಗೆ ಹಲವು ಸಾರಿಗೆ ವ್ಯವಸ್ಥೆ ಮೂಲಕ ಗುಜರಾತ್ ತಲುಪಿದ್ದರು.

ಸಿನಿಮಾಗಳಲ್ಲಿ ಕೊಲೆ ಅಥವಾ ಸುಲಿಗೆಯ ದೃಶ್ಯ ಇದ್ದರೆ ಇದನ್ನು ಮಾಡಿದವರು ತಪ್ಪಿಸಿಕೊಳ್ಳಲು ನಾನಾ ಮಾರ್ಗ ಅನುಸರಿಸೋದನ್ನು ತೋರಿಸಲಾಗುತ್ತದೆ. ಸಲ್ಲು ಮನೆ ಮೇಲೆ ದಾಳಿ ಮಾಡಿದವರು ಕೂಡ ಇದೇ ರೀತಿ ಮಾಡಿದ್ದರು. ಇದು ಅವರ ಹ್ಯಾಂಡ್ಲರ್​ಗಳ ಸೂಚನೆ ಇರಬಹುದು ಅಥವಾ ನಗರಕ್ಕೆ ಹೊಸಬರು ಅನ್ನೋ ಕಾರಣಕ್ಕೆ ಈ ರೀತಿ ಮಾಡಿರಬಹುದು ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತ ಇಬ್ಬರೂ ತನಿಖೆಯ ದಿಕ್ಕನ್ನು ತಪ್ಪಿಸುವ ಪ್ರಯತ್ನದಲ್ಲಿದ್ದರು. ಈ ಕಾರಣಕ್ಕೆ ಗುಜರಾತ್​ನ ಕಚ್​ಗೆ ಪರಾರಿ ಆಗಿದ್ದರು. ಸಲ್ಮಾನ್ ಖಾನ್ ಮನೆ ಮೇಲೆ ದಾಳಿ ಮಾಡಿದ ಬಳಿಕ ಇವರು ಚರ್ಚ್ ಒಂದರ ಬಳಿ ಬೈಕ್ ನಿಲ್ಲಿಸಿದರು. ಅಲ್ಲಿಂದ ರಿಕ್ಷಾ ಹಿಡಿದು ಬಾಂದ್ರಾ ರೈಲ್ವೆ ನಿಲ್ದಾಣಕ್ಕೆ ಬಂದರು. ನಂತರ ಅವರು ಲೋಕಲ್ ಟ್ರೇನ್ ಹಿಡಿದು ಸಂತಾಕ್ರೂಜ್ ರೈಲ್ವೆ ನಿಲ್ದಾಣಕ್ಕೆ ತೆರಳಿದರು.

ಇದನ್ನೂ ಓದಿ: ಸಲ್ಲು ಮನೆ ಮೇಲೆ ಗುಂಡು ಹಾರಿಸಿದವರು ಗುಜರಾತ್​ನಲ್ಲಿ ಅರೆಸ್ಟ್; ಎರಡು ತಿಂಗಳ ಹಿಂದೆ ನಡೆದಿತ್ತು ಪ್ಲ್ಯಾನ್

ಅಲ್ಲಿಂದ ಇಬ್ಬರೂ ವೆಸ್ಟರ್ನ್ ಎಕ್ರಸ್​ಪ್ರೆಸ್ ಹೈವೇ ಕಡೆ ನಡೆದೇ ಸಾಗಿದರು. ಅಲ್ಲಿ ಅವರು ಟಿ-ಶರ್ಟ್ ಬದಲಿಸಿಕೊಂಡರು. ಮತ್ತೆ ಆಟೋ ಹಿಡಿದ ಅವರು ದಾಹಿಸರ್ ಕಡೆ ಹೊರಟರು. ಆಟೋ ಇಳಿದ ಬಳಿಕ ಖಾಸಗಿ ಕಾರಿನಲ್ಲಿ ಸೂರತ್ ತೆರಳಿದರು. ಈ ವೇಳೆ ತಮ್ಮ ಬಳಿ ಇದ್ದ ಪಿಸ್ತೂಲ್​ನ ಅವರು ನೀರಿನಲ್ಲಿ ಎಸೆದಿದ್ದರು. ನಂತರ ಸೂರತ್ ರೈಲ್ವೆ ನಿಲ್ದಾಣಕ್ಕೆ ತೆರಳಿದರು. ಆದರೆ, ಗುಜರಾತ್​ನ ಬುಜ್​ಗೆ ಯಾವುದೇ ರೈಲು ಸಿಕ್ಕಿಲ್ಲ. ಹೀಗಾಗಿ ಸರ್ಕಾರಿ ಬಸ್​ನಲ್ಲಿ ಅಹ್ಮದಾಬಾದ್​ಗೆ ಹೋದರು. ನಂತರ ಅಲ್ಲಿಂದ ಮತ್ತೊಂದು ಬಸ್ ಏರಿ ಕಚ್ ಜಿಲ್ಲೆಗೆ ಹೋದರು. ಅಲ್ಲಿ ದೇವಸ್ಥಾನ ಒಂದರಲ್ಲಿ ಅಡಗಿ ಕುಳಿತಿದ್ದರು. ಅಲ್ಲಿ ಅವರ ಬಂಧನ ಮಾಡಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ