AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಲು ಮನೆಯೆ ಮೇಲೆ ಗುಂಡು ಹಾರಿಸಿ ಸಿನಿಮೀಯ ರೀತಿಯಲ್ಲಿ ಗುಜರಾತ್ ಸೇರಿದ್ದ ಶೂಟರ್​ಗಳು

ಸಲ್ಮಾನ್ ಖಾನ್ ಮನೆಯ ಮೇಲೆ ದಾಳಿ ಮಾಡಿದವರು ಸಿನಿಮಾ ರೀತಿಯಲ್ಲಿ ಪರಾರಿ ಆಗಿದ್ದರು. ಇದು ಅವರ ಹ್ಯಾಂಡ್ಲರ್​ಗಳ ಸೂಚನೆ ಇರಬಹುದು ಅಥವಾ ನಗರಕ್ಕೆ ಹೊಸಬರು ಅನ್ನೋ ಕಾರಣಕ್ಕೆ ಈ ರೀತಿ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಅವರು ಗುಜರಾತ್ ಸೇರಿದ್ದು ಹೇಗೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಸಲ್ಲು ಮನೆಯೆ ಮೇಲೆ ಗುಂಡು ಹಾರಿಸಿ ಸಿನಿಮೀಯ ರೀತಿಯಲ್ಲಿ ಗುಜರಾತ್ ಸೇರಿದ್ದ ಶೂಟರ್​ಗಳು
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Apr 17, 2024 | 8:24 AM

Share

ನಟ ಸಲ್ಮಾನ್ ಖಾನ್ (Salman Khan) ಮನೆಯ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ. ಮುಂಬೈ ಕ್ರೈಮ್ ಬ್ರ್ಯಾಂಚ್ ಅಧಿಕಾರಿಗಳು ಗುಜರಾತ್​ನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ. ಬಂಧಿತ ಇಬ್ಬರೂ ಮುಂಬೈನಿಂದ ಗುಜರಾತ್​ಗೆ ಸಿನಿಮೀಯ ಶೈಲಿಯಲ್ಲಿ ಪಾರಾಗಿದ್ದರು ಎಂದು ವರದಿ ಆಗಿದೆ. ಇವರು, ಆಟೋ, ಲೋಕಲ್ ಟ್ರೇನ್, ಟ್ರೇನ್, ಬಸ್ ಹೀಗೆ ಹಲವು ಸಾರಿಗೆ ವ್ಯವಸ್ಥೆ ಮೂಲಕ ಗುಜರಾತ್ ತಲುಪಿದ್ದರು.

ಸಿನಿಮಾಗಳಲ್ಲಿ ಕೊಲೆ ಅಥವಾ ಸುಲಿಗೆಯ ದೃಶ್ಯ ಇದ್ದರೆ ಇದನ್ನು ಮಾಡಿದವರು ತಪ್ಪಿಸಿಕೊಳ್ಳಲು ನಾನಾ ಮಾರ್ಗ ಅನುಸರಿಸೋದನ್ನು ತೋರಿಸಲಾಗುತ್ತದೆ. ಸಲ್ಲು ಮನೆ ಮೇಲೆ ದಾಳಿ ಮಾಡಿದವರು ಕೂಡ ಇದೇ ರೀತಿ ಮಾಡಿದ್ದರು. ಇದು ಅವರ ಹ್ಯಾಂಡ್ಲರ್​ಗಳ ಸೂಚನೆ ಇರಬಹುದು ಅಥವಾ ನಗರಕ್ಕೆ ಹೊಸಬರು ಅನ್ನೋ ಕಾರಣಕ್ಕೆ ಈ ರೀತಿ ಮಾಡಿರಬಹುದು ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತ ಇಬ್ಬರೂ ತನಿಖೆಯ ದಿಕ್ಕನ್ನು ತಪ್ಪಿಸುವ ಪ್ರಯತ್ನದಲ್ಲಿದ್ದರು. ಈ ಕಾರಣಕ್ಕೆ ಗುಜರಾತ್​ನ ಕಚ್​ಗೆ ಪರಾರಿ ಆಗಿದ್ದರು. ಸಲ್ಮಾನ್ ಖಾನ್ ಮನೆ ಮೇಲೆ ದಾಳಿ ಮಾಡಿದ ಬಳಿಕ ಇವರು ಚರ್ಚ್ ಒಂದರ ಬಳಿ ಬೈಕ್ ನಿಲ್ಲಿಸಿದರು. ಅಲ್ಲಿಂದ ರಿಕ್ಷಾ ಹಿಡಿದು ಬಾಂದ್ರಾ ರೈಲ್ವೆ ನಿಲ್ದಾಣಕ್ಕೆ ಬಂದರು. ನಂತರ ಅವರು ಲೋಕಲ್ ಟ್ರೇನ್ ಹಿಡಿದು ಸಂತಾಕ್ರೂಜ್ ರೈಲ್ವೆ ನಿಲ್ದಾಣಕ್ಕೆ ತೆರಳಿದರು.

ಇದನ್ನೂ ಓದಿ: ಸಲ್ಲು ಮನೆ ಮೇಲೆ ಗುಂಡು ಹಾರಿಸಿದವರು ಗುಜರಾತ್​ನಲ್ಲಿ ಅರೆಸ್ಟ್; ಎರಡು ತಿಂಗಳ ಹಿಂದೆ ನಡೆದಿತ್ತು ಪ್ಲ್ಯಾನ್

ಅಲ್ಲಿಂದ ಇಬ್ಬರೂ ವೆಸ್ಟರ್ನ್ ಎಕ್ರಸ್​ಪ್ರೆಸ್ ಹೈವೇ ಕಡೆ ನಡೆದೇ ಸಾಗಿದರು. ಅಲ್ಲಿ ಅವರು ಟಿ-ಶರ್ಟ್ ಬದಲಿಸಿಕೊಂಡರು. ಮತ್ತೆ ಆಟೋ ಹಿಡಿದ ಅವರು ದಾಹಿಸರ್ ಕಡೆ ಹೊರಟರು. ಆಟೋ ಇಳಿದ ಬಳಿಕ ಖಾಸಗಿ ಕಾರಿನಲ್ಲಿ ಸೂರತ್ ತೆರಳಿದರು. ಈ ವೇಳೆ ತಮ್ಮ ಬಳಿ ಇದ್ದ ಪಿಸ್ತೂಲ್​ನ ಅವರು ನೀರಿನಲ್ಲಿ ಎಸೆದಿದ್ದರು. ನಂತರ ಸೂರತ್ ರೈಲ್ವೆ ನಿಲ್ದಾಣಕ್ಕೆ ತೆರಳಿದರು. ಆದರೆ, ಗುಜರಾತ್​ನ ಬುಜ್​ಗೆ ಯಾವುದೇ ರೈಲು ಸಿಕ್ಕಿಲ್ಲ. ಹೀಗಾಗಿ ಸರ್ಕಾರಿ ಬಸ್​ನಲ್ಲಿ ಅಹ್ಮದಾಬಾದ್​ಗೆ ಹೋದರು. ನಂತರ ಅಲ್ಲಿಂದ ಮತ್ತೊಂದು ಬಸ್ ಏರಿ ಕಚ್ ಜಿಲ್ಲೆಗೆ ಹೋದರು. ಅಲ್ಲಿ ದೇವಸ್ಥಾನ ಒಂದರಲ್ಲಿ ಅಡಗಿ ಕುಳಿತಿದ್ದರು. ಅಲ್ಲಿ ಅವರ ಬಂಧನ ಮಾಡಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ