Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ಮನೆ ಮೇಲೆ ಗುಂಡು ಹಾರಿಸಿದ ಶಂಕಿತರ ಸಿಸಿಟಿವಿ ವಿಡಿಯೋ ವೈರಲ್​

ಇಂದು (ಏಪ್ರಿಲ್​ 11) ಮುಂಜಾನೆ 4.55 ಗಂಟೆಗೆ ಶಂಕಿತರ ಚಲನವಲನ ಸಿಸಿಟಿವಿಯಲ್ಲಿ ಕಾಣಿಸಿದೆ. ಸಮವೇಗದಲ್ಲಿ ಬಂದ ಇಬ್ಬರು ಬೈಕ್​ ಸವಾರರು ಆ ದಾರಿಯಲ್ಲಿ ಹಾದು ಹೋಗಿದ್ದಾರೆ. ಅವರೇ ಸಲ್ಮಾನ್​ ಖಾನ್​ ನಿವಾಸದ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದೆ.

ಸಲ್ಮಾನ್​ ಖಾನ್​ ಮನೆ ಮೇಲೆ ಗುಂಡು ಹಾರಿಸಿದ ಶಂಕಿತರ ಸಿಸಿಟಿವಿ ವಿಡಿಯೋ ವೈರಲ್​
ಸಿಸಿಟಿವಿ ವಿಡಿಯೋದ ದೃಶ್ಯ, ಸಲ್ಮಾನ್​ ಖಾನ್​
Follow us
ಮದನ್​ ಕುಮಾರ್​
|

Updated on: Apr 14, 2024 | 1:53 PM

ಖ್ಯಾತ ನಟ ಸಲ್ಮಾನ್​ ಖಾನ್​ (Salman Khan) ಅವರ ಮನೆ ಎದುರು ಗುಂಡಿನ ದಾಳಿ ನಡೆದಿರುವುದು ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿದೆ. ಏಪ್ರಿಲ್​ 14ರ ಮುಂಜಾನೆಯೇ ಸಲ್ಲು ಮನೆ ಮೇಲೆ ಕಿಡಿಗೇಡಿಗಳು ಗುಂಡು ಹಾರಿಸಿದ್ದಾರೆ. ಶಂಕಿತರ ಪತ್ತೆಗಾಗಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಶಂಕಿತ ಶೂಟರ್​ಗಳ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ಬೈಕ್​ನಲ್ಲಿ ಬಂದ ಕಿಡಿಗೇಡಿಗಳು ಸಲ್ಮಾನ್​ ಖಾನ್​ ನಿವಾಸದ ಎದುರು ಶೂಟೌಟ್​ (Shootout) ನಡೆಸಿದ್ದಾರೆ. ಅದೃಷ್ಟವಶಾತ್​ ಯಾರಿಗೂ ಹಾನಿ ಆಗಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಶಂಕಿತರ ವಿಡಿಯೋ (CCTV Video) ಹರಿದಾಡುತ್ತಿದೆ. ಆರೋಪಿಗಳನ್ನು ಆದಷ್ಟು ಬೇಗ ಪೊಲೀಸರು ಬಂಧಿಸಲಿದ್ದಾರೆ ಎಂಬ ಭರವಸೆ ಅಭಿಮಾನಿಗಳಿಗೆ ಇದೆ.

ಭಾನುವಾರ ಬೆಳಗ್ಗೆ 4.55 ಗಂಟೆಗೆ ಶಂಕಿತರ ಚಲನವಲನ ಕಾಣಿಸಿದೆ. ಒಂದೇ ವೇಗದಲ್ಲಿ ಬಂದ ಇಬ್ಬರು ಬೈಕ್​ ಸವಾರರು ಆ ದಾರಿಯಲ್ಲಿ ಹಾದು ಹೋಗಿದ್ದಾರೆ. ಅವರೇ ಸಲ್ಮಾನ್​ ಖಾನ್​ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಸದ್ಯ ಮುಂಬೈ ಕ್ರೈಂ ಬ್ರ್ಯಾಂಚ್​ ಅಧಿಕಾರಿಗಳು ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ತಂಡದವರು ಘಟನೆ ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆ ತೀವ್ರಗೊಂಡಿದೆ.

ಸಲ್ಮಾನ್​ ಖಾನ್​ ಅವರಿಗೆ ಈ ಮೊದಲು ಕೂಡ ಕೊಲೆ ಬೆದರಿಕೆ ಹಾಕಲಾಗಿತ್ತು. ಆ ಕಾರಣದಿಂದ ಅವರು ಭದ್ರತೆ ಹೆಚ್ಚಿಸಿಕೊಂಡಿದ್ದರು. ಬುಲೆಟ್​ಪ್ರೂಫ್​ ಕಾರುಗಳನ್ನು ಅವರು ಖರೀದಿಸಿದ್ದರು. ಈಗ ಅವರ ನಿವಾಸದ ಎದುರಲ್ಲೇ ಶೂಟೌಟ್​ ನಡೆದಿರುವ ಕಾರಣ ತಮ್ಮ ಸುರಕ್ಷತೆ ಬಗ್ಗೆ ಸಲ್ಮಾನ್​ ಖಾನ್​ ಅವರು ಇನ್ನಷ್ಟು ಎಚ್ಚರಿಕೆ ವಹಿಸಬೇಕಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಹಲವು ತಿಂಗಳ ಹಿಂದೆ ಇಬ್ಬರು ವ್ಯಕ್ತಿಗಳು ಸಲ್ಮಾನ್​ ಖಾನ್​ ಅವರ ಫಾರ್ಮ್​ಹೌಸ್​ಗೆ ನುಸುಳಲು ಪ್ರಯತ್ನಿಸಿದ್ದು ವರದಿ ಆಗಿತ್ತು.

ಇದನ್ನೂ ಓದಿ: Salman Khan: ಗುಂಡಿನ ದಾಳಿ ಬಳಿಕ ಸಲ್ಮಾನ್​ ಖಾನ್​ ಮನೆ ಎದುರು ಹೇಗಿದೆ ಪರಿಸ್ಥಿತಿ?

ಶೂಟೌಟ್​ ಘಟನೆಗೆ ಸಂಬಂಧಿಸಿದಂತೆ ಅನೇಕರು ಕಳವಳ ವ್ಯಕ್ತಪಡಿಸಿದ್ದಾರೆ. ಸಲ್ಮಾನ್​ ಖಾನ್​ ಮಾತ್ರವಲ್ಲ, ಜನಸಾಮಾನ್ಯರಿಗೂ ಮುಂಬೈನಲ್ಲಿ ಭದ್ರತೆ ಇಲ್ಲ ಎಂದು ಶಿವ ಸೇನಾ ಮುಖಂಡ ಆನಂದ್​ ದುಬೆ ಹೇಳಿದ್ದಾರೆ. ‘ಮಹಾರಾಷ್ಟ್ರದಲ್ಲಿ ಕಾನೂನು, ಸುವ್ಯವಸ್ಥೆ ಅಪಾಯಕಾರಿ ಸ್ಥಿತಿಯಲ್ಲಿದೆ. ಈ ಸಂದರ್ಭದಲ್ಲಿ ಗೃಹ ಮಂತ್ರಿ ಎಲ್ಲಿದ್ದಾರೆ? ಅವರು 24 ಗಂಟೆ ರಾಜಕೀಯ ಪ್ರಚಾರ ಮತ್ತು ಷಡ್ಯಂತ್ರದಲ್ಲಿ ಬ್ಯುಸಿ ಆಗಿದ್ದಾರೆ’ ಎಂದು ಶಿವಸೇನೆಯ ಸಂಜಯ್​ ರಾವತ್​ ಆರೋಪಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ