AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ಮನೆ ಮೇಲೆ ಗುಂಡು ಹಾರಿಸಿದ ಶಂಕಿತರ ಸಿಸಿಟಿವಿ ವಿಡಿಯೋ ವೈರಲ್​

ಇಂದು (ಏಪ್ರಿಲ್​ 11) ಮುಂಜಾನೆ 4.55 ಗಂಟೆಗೆ ಶಂಕಿತರ ಚಲನವಲನ ಸಿಸಿಟಿವಿಯಲ್ಲಿ ಕಾಣಿಸಿದೆ. ಸಮವೇಗದಲ್ಲಿ ಬಂದ ಇಬ್ಬರು ಬೈಕ್​ ಸವಾರರು ಆ ದಾರಿಯಲ್ಲಿ ಹಾದು ಹೋಗಿದ್ದಾರೆ. ಅವರೇ ಸಲ್ಮಾನ್​ ಖಾನ್​ ನಿವಾಸದ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದೆ.

ಸಲ್ಮಾನ್​ ಖಾನ್​ ಮನೆ ಮೇಲೆ ಗುಂಡು ಹಾರಿಸಿದ ಶಂಕಿತರ ಸಿಸಿಟಿವಿ ವಿಡಿಯೋ ವೈರಲ್​
ಸಿಸಿಟಿವಿ ವಿಡಿಯೋದ ದೃಶ್ಯ, ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: Apr 14, 2024 | 1:53 PM

Share

ಖ್ಯಾತ ನಟ ಸಲ್ಮಾನ್​ ಖಾನ್​ (Salman Khan) ಅವರ ಮನೆ ಎದುರು ಗುಂಡಿನ ದಾಳಿ ನಡೆದಿರುವುದು ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿದೆ. ಏಪ್ರಿಲ್​ 14ರ ಮುಂಜಾನೆಯೇ ಸಲ್ಲು ಮನೆ ಮೇಲೆ ಕಿಡಿಗೇಡಿಗಳು ಗುಂಡು ಹಾರಿಸಿದ್ದಾರೆ. ಶಂಕಿತರ ಪತ್ತೆಗಾಗಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಈ ನಡುವೆ ಶಂಕಿತ ಶೂಟರ್​ಗಳ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ಬೈಕ್​ನಲ್ಲಿ ಬಂದ ಕಿಡಿಗೇಡಿಗಳು ಸಲ್ಮಾನ್​ ಖಾನ್​ ನಿವಾಸದ ಎದುರು ಶೂಟೌಟ್​ (Shootout) ನಡೆಸಿದ್ದಾರೆ. ಅದೃಷ್ಟವಶಾತ್​ ಯಾರಿಗೂ ಹಾನಿ ಆಗಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಶಂಕಿತರ ವಿಡಿಯೋ (CCTV Video) ಹರಿದಾಡುತ್ತಿದೆ. ಆರೋಪಿಗಳನ್ನು ಆದಷ್ಟು ಬೇಗ ಪೊಲೀಸರು ಬಂಧಿಸಲಿದ್ದಾರೆ ಎಂಬ ಭರವಸೆ ಅಭಿಮಾನಿಗಳಿಗೆ ಇದೆ.

ಭಾನುವಾರ ಬೆಳಗ್ಗೆ 4.55 ಗಂಟೆಗೆ ಶಂಕಿತರ ಚಲನವಲನ ಕಾಣಿಸಿದೆ. ಒಂದೇ ವೇಗದಲ್ಲಿ ಬಂದ ಇಬ್ಬರು ಬೈಕ್​ ಸವಾರರು ಆ ದಾರಿಯಲ್ಲಿ ಹಾದು ಹೋಗಿದ್ದಾರೆ. ಅವರೇ ಸಲ್ಮಾನ್​ ಖಾನ್​ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಸದ್ಯ ಮುಂಬೈ ಕ್ರೈಂ ಬ್ರ್ಯಾಂಚ್​ ಅಧಿಕಾರಿಗಳು ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ತಂಡದವರು ಘಟನೆ ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆ ತೀವ್ರಗೊಂಡಿದೆ.

ಸಲ್ಮಾನ್​ ಖಾನ್​ ಅವರಿಗೆ ಈ ಮೊದಲು ಕೂಡ ಕೊಲೆ ಬೆದರಿಕೆ ಹಾಕಲಾಗಿತ್ತು. ಆ ಕಾರಣದಿಂದ ಅವರು ಭದ್ರತೆ ಹೆಚ್ಚಿಸಿಕೊಂಡಿದ್ದರು. ಬುಲೆಟ್​ಪ್ರೂಫ್​ ಕಾರುಗಳನ್ನು ಅವರು ಖರೀದಿಸಿದ್ದರು. ಈಗ ಅವರ ನಿವಾಸದ ಎದುರಲ್ಲೇ ಶೂಟೌಟ್​ ನಡೆದಿರುವ ಕಾರಣ ತಮ್ಮ ಸುರಕ್ಷತೆ ಬಗ್ಗೆ ಸಲ್ಮಾನ್​ ಖಾನ್​ ಅವರು ಇನ್ನಷ್ಟು ಎಚ್ಚರಿಕೆ ವಹಿಸಬೇಕಿದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಹಲವು ತಿಂಗಳ ಹಿಂದೆ ಇಬ್ಬರು ವ್ಯಕ್ತಿಗಳು ಸಲ್ಮಾನ್​ ಖಾನ್​ ಅವರ ಫಾರ್ಮ್​ಹೌಸ್​ಗೆ ನುಸುಳಲು ಪ್ರಯತ್ನಿಸಿದ್ದು ವರದಿ ಆಗಿತ್ತು.

ಇದನ್ನೂ ಓದಿ: Salman Khan: ಗುಂಡಿನ ದಾಳಿ ಬಳಿಕ ಸಲ್ಮಾನ್​ ಖಾನ್​ ಮನೆ ಎದುರು ಹೇಗಿದೆ ಪರಿಸ್ಥಿತಿ?

ಶೂಟೌಟ್​ ಘಟನೆಗೆ ಸಂಬಂಧಿಸಿದಂತೆ ಅನೇಕರು ಕಳವಳ ವ್ಯಕ್ತಪಡಿಸಿದ್ದಾರೆ. ಸಲ್ಮಾನ್​ ಖಾನ್​ ಮಾತ್ರವಲ್ಲ, ಜನಸಾಮಾನ್ಯರಿಗೂ ಮುಂಬೈನಲ್ಲಿ ಭದ್ರತೆ ಇಲ್ಲ ಎಂದು ಶಿವ ಸೇನಾ ಮುಖಂಡ ಆನಂದ್​ ದುಬೆ ಹೇಳಿದ್ದಾರೆ. ‘ಮಹಾರಾಷ್ಟ್ರದಲ್ಲಿ ಕಾನೂನು, ಸುವ್ಯವಸ್ಥೆ ಅಪಾಯಕಾರಿ ಸ್ಥಿತಿಯಲ್ಲಿದೆ. ಈ ಸಂದರ್ಭದಲ್ಲಿ ಗೃಹ ಮಂತ್ರಿ ಎಲ್ಲಿದ್ದಾರೆ? ಅವರು 24 ಗಂಟೆ ರಾಜಕೀಯ ಪ್ರಚಾರ ಮತ್ತು ಷಡ್ಯಂತ್ರದಲ್ಲಿ ಬ್ಯುಸಿ ಆಗಿದ್ದಾರೆ’ ಎಂದು ಶಿವಸೇನೆಯ ಸಂಜಯ್​ ರಾವತ್​ ಆರೋಪಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?