AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್‌ಗೆ ಹಿನ್ನಡೆ: ‘ಕಾಲಾ ಹಿರಣ್’ ಚಿತ್ರದ ತುರ್ತು ನಿಷೇಧಕ್ಕೆ ದೆಹಲಿ ಹೈಕೋರ್ಟ್ ನಿರಾಕರಣೆ

ಸಲ್ಮಾನ್ ಖಾನ್ ಅವರು ‘ಕಾಲಾ ಹಿರಣ್’ ಚಿತ್ರತಂಡದ ವಿರುದ್ಧ ಕಾನೂನು ಸಮರಕ್ಕೆ ಇಳಿದಿದ್ದಾರೆ. ವಾದ ಆಲಿಸಿದ ನ್ಯಾಯಾಲಯವು ಸದ್ಯಕ್ಕೆ ಈ ಸಿನಿಮಾಗೆ ತಡೆ ನೀಡಲು ನಿರಾಕರಿಸಿದೆ. ಮೊದಲು ಚಿತ್ರತಂಡಕ್ಕೆ ಎಲ್ಲಾ ದಾಖಲೆಗಳನ್ನು ನೀಡಿ, ಅವರು ತಮ್ಮ ಪರ ವಾದ ಸಿದ್ಧಪಡಿಸಿಕೊಳ್ಳಲು ಅವಕಾಶ ಕೊಡಿ ಎಂದು ಸಲ್ಮಾನ್ ತಂಡಕ್ಕೆ ಕೋರ್ಟ್ ಸೂಚಿಸಿದೆ.

ಸಲ್ಮಾನ್ ಖಾನ್‌ಗೆ ಹಿನ್ನಡೆ: ‘ಕಾಲಾ ಹಿರಣ್’ ಚಿತ್ರದ ತುರ್ತು ನಿಷೇಧಕ್ಕೆ ದೆಹಲಿ ಹೈಕೋರ್ಟ್ ನಿರಾಕರಣೆ
Kala Hiran Movie Poster
ಮದನ್​ ಕುಮಾರ್​
|

Updated on: Jun 19, 2026 | 7:33 PM

Share

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ದೆಹಲಿ ಹೈಕೋರ್ಟ್‌ನಲ್ಲಿ ಸದ್ಯಕ್ಕೆ ಹಿನ್ನಡೆ ಆಗಿದೆ. ಅವರ ಜೀವನಾಧಾರಿತ ಎನ್ನಲಾದ ‘ಕಾಲಾ ಹಿರಣ್: ದಿ ಬ್ಯಾಟಲ್ ಫಾರ್ ಲೆಗಸಿ’ (Kala Hiran) ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಬೇಕೆಂಬ ಮನವಿಯ ವಿಚಾರಣೆಯನ್ನು ನ್ಯಾಯಾಲಯವು ಮುಂದೂಡಿದೆ. ಇದರಿಂದಾಗಿ ಸಲ್ಮಾನ್ ಖಾನ್ ಅವರು ಕೋರ್ಟ್ ತೀರ್ಪಿಗಾಗಿ ಜುಲೈ 1ರವರೆಗೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ‘ಲೈವ್ ಲಾ’ ಇಂಡಿಯಾ ವರದಿಯ ಪ್ರಕಾರ, ಜಸ್ಟಿಸ್ ಮಧು ಜೈನ್ ಅವರ ನೇತೃತ್ವದ ಪೀಠವು, ಸಲ್ಮಾನ್ ಖಾನ್ (Salman Khan) ಅವರ ಕಾನೂನು ತಂಡಕ್ಕೆ ಮೊಕದ್ದಮೆಯ ಸಂಪೂರ್ಣ ದಾಖಲೆಗಳನ್ನು ಚಿತ್ರನಿರ್ಮಾಪಕರಿಗೆ ಸಲ್ಲಿಸುವಂತೆ ಆದೇಶಿಸಿದೆ. ತದನಂತರ ವಿವರವಾದ ವಾದ-ಪ್ರತಿವಾದ ಆಲಿಸಲು ಪ್ರಕರಣವನ್ನು ಜುಲೈ 1ಕ್ಕೆ ಮುಂದೂಡಿದೆ.

1998ರ ಕೃಷ್ಣಮೃಗ ಬೇಟೆ ಪ್ರಕರಣ ಮತ್ತು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಜೊತೆಗಿನ ವಿವಾದಗಳನ್ನು ಆಧರಿಸಿ ‘ಕಾಲಾ ಹಿರಣ್’ ಸಿನಿಮಾ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಲ್ಮಾನ್ ಖಾನ್ ಕೋರ್ಟ್ ಮೆಟ್ಟಿಲೇರಿದ್ದಾರೆ. ಆದರೆ ಇದು ಸಲ್ಮಾನ್ ಖಾನ್ ಅವರ ಕಹಾನಿ ಅಲ್ಲ ಎಂದು ಚಿತ್ರದ ನಿರ್ಮಾಪಕರು ವಾದಿಸುತ್ತಿದ್ದಾರೆ. ಹಾಗಿದ್ದರೂ ಟೀಸರ್​ನಲ್ಲಿ ಸಲ್ಮಾನ್ ಖಾನ್ ಅವರಿಗೆ ಸಾಮ್ಯತೆ ಕಾಣಿಸಿದೆ.

ಸಲ್ಮಾನ್ ಖಾನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೀಪ್ ಸೇಥಿ, ‘ನನ್ನ ಕಕ್ಷಿದಾರರ ಜೀವನದ ಆಧಾರದ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ಅವರಿಗೆ ಯಾವುದೇ ಹಕ್ಕಿಲ್ಲ, ನಾವು ಯಾವುದೇ ಅನುಮತಿ ನೀಡಿಲ್ಲ’ ಎಂದು ಸ್ಪಷ್ಟಪಡಿಸಿದರು. ಸಿನಿಮಾದಲ್ಲಿ ಸಲ್ಮಾನ್ ಖಾನ್ ಹೆಸರನ್ನು ನೇರವಾಗಿ ಬಳಸದಿದ್ದರೂ, ಕಥೆ ಮತ್ತು ಪಾತ್ರಗಳು ಅವರ ನಿಜ ಜೀವನಕ್ಕೆ ತೀರಾ ಹತ್ತಿರವಾಗಿವೆ ಎಂದು ದೂರಲಾಗಿದೆ.

ಚಿತ್ರದ ಟೀಸರ್‌ನಲ್ಲಿ ನಾಯಕ ನಟನು ಸಲ್ಮಾನ್ ಖಾನ್ ಅವರಂತೆ ಕಾಣುವುದಲ್ಲದೆ, ಅವರ ಸಿಗ್ನೇಚರ್ ಆದ ಬ್ಲೂ ಬ್ರೇಸ್ಲೆಟ್ ಧರಿಸಿರುವುದು ಇದಕ್ಕೆ ಸಾಕ್ಷಿ ಎಂದು ವಕೀಲರು ವಾದಿಸಿದರು. ಅಲ್ಲದೆ, ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಖುಲಾಸೆಯಾಗಿದ್ದರೂ, ಟೀಸರ್‌ನಲ್ಲಿ ನಾಯಕ ಗನ್ ಹಿಡಿದಿರುವುದನ್ನು ತೋರಿಸಿ ತಪ್ಪು ಮಾಹಿತಿ ನೀಡಲಾಗುತ್ತಿದೆ ಎಂದು ಅವರು ದೂರಿದ್ದಾರೆ.

ಇದನ್ನೂ ಓದಿ: ಬಿಗ್ ಬಜೆಟ್ ಐತಿಹಾಸಿಕ ಸಿನಿಮಾಗಾಗಿ ಸಲ್ಮಾನ್ ಖಾನ್ ಜತೆ ಕೈ ಜೋಡಿಸಿದ ಫರ್ಹಾನ್ ಅಖ್ತರ್?

ಚಿತ್ರದ ಬಿಡುಗಡೆಗೆ ತಕ್ಷಣವೇ ತಡೆ ನೀಡಬಾರದು ಎಂದು ಚಿತ್ರನಿರ್ಮಾಪಕರ ವಕೀಲರು ಕೋರಿದರು. ಸಲ್ಮಾನ್ ಖಾನ್ ತಂಡದಿಂದ ತಮಗೆ ಕೇವಲ ಅರ್ಧದಷ್ಟು ಕಾನೂನು ದಾಖಲೆಗಳು ಮಾತ್ರ ಸಿಕ್ಕಿವೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು. ಇದರೊಂದಿಗೆ, ಈ ಸಿನಿಮಾದ ವಿವಾದದಿಂದ ಚಿತ್ರತಂಡಕ್ಕೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಈಗಾಗಲೇ ಈ ಬಗ್ಗೆ ಪೊಲೀಸರಿಗೆ ದೂರು ನೀಡಿರುವುದಾಗಿ ವಕೀಲರು ಕೋರ್ಟ್ ಗಮನಕ್ಕೆ ತಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ