AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ಪರ ಲಾಯರ್​ ಶ್ರೀಕಾಂತ್​ ಶಿವಡೆ ಕ್ಯಾನ್ಸರ್​ನಿಂದ ನಿಧನ; ‘ತಕ್ಕ ಶಿಕ್ಷೆ ಸಿಕ್ತು’ ಎಂದ ನೆಟ್ಟಿಗರು

Shrikant Shivade Death: ಖ್ಯಾತ ಕ್ರಿಮಿನಲ್​ ಲಾಯರ್​ ಶ್ರೀಕಾಂತ್​ ಶಿವಡೆ ನಿಧನದ ಸುದ್ದಿಯು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿದೆ. ಅದಕ್ಕೆ ಕಮೆಂಟ್​ ಮಾಡಿರುವ ಅನೇಕರು ಹಿಡಿಶಾಪ ಹಾಕಿದ್ದಾರೆ.

ಸಲ್ಮಾನ್​ ಖಾನ್​ ಪರ ಲಾಯರ್​ ಶ್ರೀಕಾಂತ್​ ಶಿವಡೆ ಕ್ಯಾನ್ಸರ್​ನಿಂದ ನಿಧನ; ‘ತಕ್ಕ ಶಿಕ್ಷೆ ಸಿಕ್ತು’ ಎಂದ ನೆಟ್ಟಿಗರು
ಸಲ್ಮಾನ್ ಖಾನ್, ಶ್ರೀಕಾಂತ್ ಶಿವಡೆ
TV9 Web
| Edited By: |

Updated on: Jan 20, 2022 | 9:11 AM

Share

ಖ್ಯಾತ ಕ್ರಿಮಿನಲ್​ ಲಾಯರ್​ ಶ್ರೀಕಾಂತ್​ ಶಿವಡೆ (Shrikant Shivade) ನಿಧನರಾಗಿದ್ದಾರೆ. ಅನೇಕ ಹೈ-ಪ್ರೊಫೈಲ್​ ಕೇಸ್​ಗಳಲ್ಲಿ ವಾದ ಮಾಡುವ ಮೂಲಕ ಅವರು ಹೆಸರು ಗಳಿಸಿದ್ದರು. ಹಲವು ದಿನಗಳಿಂದ ಶ್ರೀಕಾಂತ್ ಶಿವಡೆ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ರಕ್ತದ ಕ್ಯಾನ್ಸರ್​ (Cancer) ಆಗಿತ್ತು ಎಂಬ ಮಾಹಿತಿ ಹೇಳಿಬಂದಿದೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ (ಜ.19) ಅವರು ನಿಧನರಾದರು. ಸಲ್ಮಾನ್​ ಖಾನ್ (Salman Khan)​, ಸೈಫ್​ ಅಲಿ ಖಾನ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳ ಕೇಸ್​ ನಿಭಾಯಿಸಿದ್ದು ಇದೇ ಶ್ರೀಕಾಂತ್​ ಶಿವಡೆ. ಸಲ್ಮಾನ್​ ಖಾನ್​ ಅವರ ಹಿಟ್​ ಆ್ಯಂಡ್​ ರನ್​ ಕೇಸ್​ ಕೈಗೆತ್ತಿಕೊಳ್ಳುವ ಮೂಲಕ ಅವರು ಫೇಮಸ್​ ಆಗಿದ್ದರು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ನೆಟ್ಟಿಗರು ಸಹಜವಾಗಿಯೇ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಆದರೆ ಕೆಲವರು ನೆಗೆಟಿವ್​ ಕಮೆಂಟ್​ ಮಾಡಿದ್ದಾರೆ. ‘ಇಂಥವರಿಗೆ ಹೀಗೆಯೇ ಆಗಬೇಕು’ ಎಂದು ಖಾರವಾಗಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಬಾಲಿವುಡ್​ ಸೆಲೆಬ್ರಿಟಿಗಳು ಮತ್ತು ದೊಡ್ಡ ದೊಡ್ಡ ಉದ್ಯಮಿಗಳ ಪರವಾಗಿ ಶ್ರೀಕಾಂತ್​ ಶಿವಡೆ ವಕಾಲತ್ತು ವಹಿಸುತ್ತಿದ್ದರು. ಅತ್ಯಾಚಾರದ ಕೇಸ್​ನಲ್ಲಿ ಜೈಲು ಸೇರಿದ ಶೈನಿ ಅಹುಜಾ ಪರವಾಗಿಯೂ ಅವರು ವಾದ ಮಾಡಿದ್ದರು. 2ಜಿ ಸ್ಪೆಕ್ಟ್ರಂ ಹಗರಣದ ಆರೋಪಿಗಳಿಗೂ ಶ್ರೀಕಾಂತ್​ ಶಿವದೆ ಲಾಯರ್​ ಆಗಿದ್ದರು. ಹಾಗಾಗಿ ಅವರ ಬಗ್ಗೆ ಅನೇಕರಿಗೆ ಅಸಮಾಧಾನವಿತ್ತು.

ಶ್ರೀಕಾಂತ್​ ಶಿವಡೆ ನಿಧನದ ಸುದ್ದಿಯನ್ನು ವೈರಲ್​ ಭಯಾನಿ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅದಕ್ಕೆ ಕಮೆಂಟ್​ ಮಾಡಿರುವ ಅನೇಕರು ಹಿಡಿಶಾಪ ಹಾಕಿದ್ದಾರೆ. ‘ಕ್ರಿಮಿನಲ್​ಗಳನ್ನು ಇವರು ರಕ್ಷಿಸುತ್ತಿದ್ದರು. ಅದಕ್ಕಾಗಿಯೇ ಈ ರೀತಿ ಆಗಿದೆ. ಕರ್ಮ ಬಿಡುವುದಿಲ್ಲ. ಎಲ್ಲರೂ ಸಾಯಲೇಬೇಕು. ಆದರೆ ಎಂಥ ಸಾವು ಬರುತ್ತದೆ ಎಂಬುದು ಮುಖ್ಯ. ಇಂಥವರ ವಿಚಾರದಲ್ಲಿ ಕರುಣೆಯೇ ಬೇಕಾಗಿಲ್ಲ’ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ವಜ್ರ ವ್ಯಾಪಾರಿ ಭರತ್​ ಷಾ ಕೇಸ್​, ಶೀನಾ ಬೋರಾ ಮರ್ಡರ್​ ಕೇಸ್​ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಶ್ರೀಕಾಂತ್ ಶಿವಡೆ ವಕಾಲತ್ತು ವಹಿಸಿದ್ದರು. ತಾಯಿ, ಪತ್ನಿ, ಓರ್ವ ಮಗ ಹಾಗೂ ಮಗಳನ್ನು ಅವರು ಅಗಲಿದ್ದಾರೆ.

ಇದನ್ನೂ ಓದಿ:

ನಟ ಸಲ್ಮಾನ್ ಖಾನ್ ಬೇಟೆಯಾಡಿದ್ದ ಕೃಷ್ಣ ಮೃಗದ ನೆನಪಲ್ಲಿ ನಿರ್ಮಾಣ ಆಗಲಿದೆ ಬೃಹತ್​ ಸ್ಮಾರಕ

Pradeep Raj Death: ಕೊರೊನಾ ಸೋಂಕಿನಿಂದ ‘ಕಿರಾತಕ’ ಚಿತ್ರದ​ ನಿರ್ದೇಶಕ ಪ್ರದೀಪ್​ ರಾಜ್​ ನಿಧನ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್