AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ಪರ ಲಾಯರ್​ ಶ್ರೀಕಾಂತ್​ ಶಿವಡೆ ಕ್ಯಾನ್ಸರ್​ನಿಂದ ನಿಧನ; ‘ತಕ್ಕ ಶಿಕ್ಷೆ ಸಿಕ್ತು’ ಎಂದ ನೆಟ್ಟಿಗರು

Shrikant Shivade Death: ಖ್ಯಾತ ಕ್ರಿಮಿನಲ್​ ಲಾಯರ್​ ಶ್ರೀಕಾಂತ್​ ಶಿವಡೆ ನಿಧನದ ಸುದ್ದಿಯು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿದೆ. ಅದಕ್ಕೆ ಕಮೆಂಟ್​ ಮಾಡಿರುವ ಅನೇಕರು ಹಿಡಿಶಾಪ ಹಾಕಿದ್ದಾರೆ.

ಸಲ್ಮಾನ್​ ಖಾನ್​ ಪರ ಲಾಯರ್​ ಶ್ರೀಕಾಂತ್​ ಶಿವಡೆ ಕ್ಯಾನ್ಸರ್​ನಿಂದ ನಿಧನ; ‘ತಕ್ಕ ಶಿಕ್ಷೆ ಸಿಕ್ತು’ ಎಂದ ನೆಟ್ಟಿಗರು
ಸಲ್ಮಾನ್ ಖಾನ್, ಶ್ರೀಕಾಂತ್ ಶಿವಡೆ
TV9 Web
| Edited By: |

Updated on: Jan 20, 2022 | 9:11 AM

Share

ಖ್ಯಾತ ಕ್ರಿಮಿನಲ್​ ಲಾಯರ್​ ಶ್ರೀಕಾಂತ್​ ಶಿವಡೆ (Shrikant Shivade) ನಿಧನರಾಗಿದ್ದಾರೆ. ಅನೇಕ ಹೈ-ಪ್ರೊಫೈಲ್​ ಕೇಸ್​ಗಳಲ್ಲಿ ವಾದ ಮಾಡುವ ಮೂಲಕ ಅವರು ಹೆಸರು ಗಳಿಸಿದ್ದರು. ಹಲವು ದಿನಗಳಿಂದ ಶ್ರೀಕಾಂತ್ ಶಿವಡೆ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ರಕ್ತದ ಕ್ಯಾನ್ಸರ್​ (Cancer) ಆಗಿತ್ತು ಎಂಬ ಮಾಹಿತಿ ಹೇಳಿಬಂದಿದೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ (ಜ.19) ಅವರು ನಿಧನರಾದರು. ಸಲ್ಮಾನ್​ ಖಾನ್ (Salman Khan)​, ಸೈಫ್​ ಅಲಿ ಖಾನ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳ ಕೇಸ್​ ನಿಭಾಯಿಸಿದ್ದು ಇದೇ ಶ್ರೀಕಾಂತ್​ ಶಿವಡೆ. ಸಲ್ಮಾನ್​ ಖಾನ್​ ಅವರ ಹಿಟ್​ ಆ್ಯಂಡ್​ ರನ್​ ಕೇಸ್​ ಕೈಗೆತ್ತಿಕೊಳ್ಳುವ ಮೂಲಕ ಅವರು ಫೇಮಸ್​ ಆಗಿದ್ದರು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ನೆಟ್ಟಿಗರು ಸಹಜವಾಗಿಯೇ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಆದರೆ ಕೆಲವರು ನೆಗೆಟಿವ್​ ಕಮೆಂಟ್​ ಮಾಡಿದ್ದಾರೆ. ‘ಇಂಥವರಿಗೆ ಹೀಗೆಯೇ ಆಗಬೇಕು’ ಎಂದು ಖಾರವಾಗಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಬಾಲಿವುಡ್​ ಸೆಲೆಬ್ರಿಟಿಗಳು ಮತ್ತು ದೊಡ್ಡ ದೊಡ್ಡ ಉದ್ಯಮಿಗಳ ಪರವಾಗಿ ಶ್ರೀಕಾಂತ್​ ಶಿವಡೆ ವಕಾಲತ್ತು ವಹಿಸುತ್ತಿದ್ದರು. ಅತ್ಯಾಚಾರದ ಕೇಸ್​ನಲ್ಲಿ ಜೈಲು ಸೇರಿದ ಶೈನಿ ಅಹುಜಾ ಪರವಾಗಿಯೂ ಅವರು ವಾದ ಮಾಡಿದ್ದರು. 2ಜಿ ಸ್ಪೆಕ್ಟ್ರಂ ಹಗರಣದ ಆರೋಪಿಗಳಿಗೂ ಶ್ರೀಕಾಂತ್​ ಶಿವದೆ ಲಾಯರ್​ ಆಗಿದ್ದರು. ಹಾಗಾಗಿ ಅವರ ಬಗ್ಗೆ ಅನೇಕರಿಗೆ ಅಸಮಾಧಾನವಿತ್ತು.

ಶ್ರೀಕಾಂತ್​ ಶಿವಡೆ ನಿಧನದ ಸುದ್ದಿಯನ್ನು ವೈರಲ್​ ಭಯಾನಿ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅದಕ್ಕೆ ಕಮೆಂಟ್​ ಮಾಡಿರುವ ಅನೇಕರು ಹಿಡಿಶಾಪ ಹಾಕಿದ್ದಾರೆ. ‘ಕ್ರಿಮಿನಲ್​ಗಳನ್ನು ಇವರು ರಕ್ಷಿಸುತ್ತಿದ್ದರು. ಅದಕ್ಕಾಗಿಯೇ ಈ ರೀತಿ ಆಗಿದೆ. ಕರ್ಮ ಬಿಡುವುದಿಲ್ಲ. ಎಲ್ಲರೂ ಸಾಯಲೇಬೇಕು. ಆದರೆ ಎಂಥ ಸಾವು ಬರುತ್ತದೆ ಎಂಬುದು ಮುಖ್ಯ. ಇಂಥವರ ವಿಚಾರದಲ್ಲಿ ಕರುಣೆಯೇ ಬೇಕಾಗಿಲ್ಲ’ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ವಜ್ರ ವ್ಯಾಪಾರಿ ಭರತ್​ ಷಾ ಕೇಸ್​, ಶೀನಾ ಬೋರಾ ಮರ್ಡರ್​ ಕೇಸ್​ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಶ್ರೀಕಾಂತ್ ಶಿವಡೆ ವಕಾಲತ್ತು ವಹಿಸಿದ್ದರು. ತಾಯಿ, ಪತ್ನಿ, ಓರ್ವ ಮಗ ಹಾಗೂ ಮಗಳನ್ನು ಅವರು ಅಗಲಿದ್ದಾರೆ.

ಇದನ್ನೂ ಓದಿ:

ನಟ ಸಲ್ಮಾನ್ ಖಾನ್ ಬೇಟೆಯಾಡಿದ್ದ ಕೃಷ್ಣ ಮೃಗದ ನೆನಪಲ್ಲಿ ನಿರ್ಮಾಣ ಆಗಲಿದೆ ಬೃಹತ್​ ಸ್ಮಾರಕ

Pradeep Raj Death: ಕೊರೊನಾ ಸೋಂಕಿನಿಂದ ‘ಕಿರಾತಕ’ ಚಿತ್ರದ​ ನಿರ್ದೇಶಕ ಪ್ರದೀಪ್​ ರಾಜ್​ ನಿಧನ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ