AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಆರೋಗ್ಯದ ಬಗ್ಗೆ ಮೂಡಿದೆ ಅನುಮಾನ; ಆತಂಕ ಹೊರಹಾಕಿದ ಅಭಿಮಾನಿಗಳು

ಸಲ್ಮಾನ್ ಖಾನ್ ಅವರು ನಟನೆಯಿಂದ ಮಾತ್ರ ಗಳಿಕೆ ಮಾಡುತ್ತಿಲ್ಲ. ಅವರು ಕಾರ್ಯಕ್ರಮಗಳಲ್ಲಿ ಡ್ಯಾನ್ಸ್ ಮಾಡಿಯೂ ಹಣ ಮಾಡುತ್ತಾರೆ. ಭಾನುವಾರ (ಅಕ್ಟೋಬರ್ 1) ಅವರು ಕಾರ್ಯಕ್ರಮ ಒಂದರಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಈ ವೇಳೆ ಅವರು ಸುಸ್ತು ಆದಂತೆ ಕಂಡುಬಂತು.

ಸಲ್ಮಾನ್ ಖಾನ್ ಆರೋಗ್ಯದ ಬಗ್ಗೆ ಮೂಡಿದೆ ಅನುಮಾನ; ಆತಂಕ ಹೊರಹಾಕಿದ ಅಭಿಮಾನಿಗಳು
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Oct 02, 2023 | 10:39 AM

Share

ಸಲ್ಮಾನ್ ಖಾನ್ (Salman Khan) ನಟನೆಯ ‘ಟೈಗರ್ 3’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ದೀಪಾವಳಿ ಪ್ರಯುಕ್ತ ಈ ಚಿತ್ರ ಬಿಡುಗಡೆ ಆಗುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಹೊಸ ಪೋಸ್ಟರ್​ಗಳು ಗಮನ ಸೆಳೆಯುತ್ತಿವೆ. ಈ ಮಧ್ಯೆ ಸಲ್ಮಾನ್ ಖಾನ್ ಅವರ ಆರೋಗ್ಯ ಕೈ ಕೊಟ್ಟಿದೆಯೇ ಎನ್ನುವ ಅನುಮಾನ ಅಭಿಮಾನಿಗಳಿಗೆ ವ್ಯಕ್ತವಾಗಿದೆ. ಸದ್ಯ ವಿಡಿಯೋ ಒಂದು ವೈರಲ್ ಆಗಿದೆ.

ಸಲ್ಮಾನ್ ಖಾನ್ ಅವರು ನಟನೆಯಿಂದ ಮಾತ್ರ ಗಳಿಕೆ ಮಾಡುತ್ತಿಲ್ಲ. ಅವರು ಕಾರ್ಯಕ್ರಮಗಳಲ್ಲಿ ಡ್ಯಾನ್ಸ್ ಮಾಡಿಯೂ ಹಣ ಮಾಡುತ್ತಾರೆ. ಭಾನುವಾರ (ಅಕ್ಟೋಬರ್ 1) ಅವರು ಕಾರ್ಯಕ್ರಮ ಒಂದರಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಈ ವೇಳೆ ಅವರು ಸುಸ್ತು ಆದಂತೆ ಕಂಡುಬಂತು. ಅಷ್ಟೇ ಅಲ್ಲ, ಅವರ ಆರೋಗ್ಯ ಸಾಕಷ್ಟು ಹದಗೆಟ್ಟಿದೆ ಎನ್ನುವ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ.

‘ಹಮ್ಕಾ ಪೀನಿ ಹೈ..’ ಹಾಡಿಗೆ ಸಲ್ಮಾನ್ ಖಾನ್ ಅವರು ಡ್ಯಾನ್ಸ್ ಮಾಡಿದ್ದಾರೆ. ‘ಸಲ್ಮಾನ್ ಖಾನ್ ಅನ್​ಫಿಟ್ ಆಗಿ ಕಾಣುತ್ತಿದ್ದಾರೆ. ಅವರು ಸಾಕಷ್ಟು ಸುಸ್ತ್ ಆದಂತೆ ಕಾಣುತ್ತಿದೆ. ಅವರಿಗೆ ವಿಶ್ರಾಂತಿ ಬೇಕಿದೆ’ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ‘ಸಲ್ಮಾನ್ ಖಾನ್ ಅವರು ಆರೋಗ್ಯದ ಬಗ್ಗೆ ಗಮನ ಹರಿಸಬೇಕಿದೆ. ಟೈಗರ್ 3 ಸಿನಿಮಾ ರಿಲೀಸ್​ ಆದ್ಮೇಲೆ ಒಂದು ಬ್ರೇಕ್ ಪಡೆಯಿರಿ’ ಎಂದು ಅನೇಕರು ಕೋರಿದ್ದಾರೆ.

ಇದನ್ನೂ ಓದಿ: ಈ ಸೂಪರ್ ಹಿಟ್ ಚಿತ್ರಗಳ ಆಫರ್​ನ ರಿಜೆಕ್ಟ್ ಮಾಡಿದ್ದರು ಸಲ್ಮಾನ್ ಖಾನ್..

ಸಲ್ಮಾನ್ ಖಾನ್ ಅವರು ನಿರಂತರವಾಗಿ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದರ ಜೊತೆಗೆ ಸಾಕಷ್ಟು ಕಾರ್ಯಕ್ರಮಗಳಲ್ಲಿಯೂ ಅವರು ಭಾಗಿ ಆಗುತ್ತಿದ್ದಾರೆ. ಈ ಕಾರಣದಿಂದ ಅವರಿಗೆ ಸರಿಯಾಗಿ ವಿಶ್ರಾಂತಿ ಸಿಗುತ್ತಿಲ್ಲ ಎನ್ನಲಾಗಿದೆ. ‘ಟೈಗರ್ 3’ ಚಿತ್ರವನ್ನು ಯಶ್​ ರಾಜ್​ ಫಿಲ್ಮ್ಸ್ ಬ್ಯಾನರ್ ಮೂಲಕ ಆದಿತ್ಯ ಚೋಪ್ರಾ ಅವರು ನಿರ್ಮಾಣ ಮಾಡುತ್ತಿದ್ದಾರೆ.  ಶಾರುಖ್ ಖಾನ್ ಅವರು ಈ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು