AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ರಿನಾ ಮದುವೆಗೆ ಬರ್ತಿಲ್ಲ ಸಲ್ಮಾನ್​ ಖಾನ್​? ಭರ್ಜರಿಯಾಗಿ ನಡೆಯಲಿದೆ ಸಂಗೀತ್ ಕಾರ್ಯಕ್ರಮ

ವಿಕ್ಕಿ ಕೌಶಲ್​ ‘ಭೂತ್​’ ಹಾಗೂ ‘ಗೋವಿಂದ್​ ಮೆರಾ ನಾಮ್​’ ಚಿತ್ರಗಳಲ್ಲೂ ನಟಿಸಿದ್ದಾರೆ. ಈ ಸಿನಿಮಾದ ನಿರ್ದೇಶಕ ಶಶಾಂಕ್​ ಖೈತಾನ್​ ಜತೆ ವಿಕ್ಕಿಗೆ ಒಳ್ಳೆಯ ಬಾಂಧವ್ಯ ಇದೆ. ಮೊದಲ ಅತಿಥಿಯಾಗಿ ಅವರಿಗೆ ಆಮಂತ್ರಣ ಹೋಗಿದೆ.

ಕತ್ರಿನಾ ಮದುವೆಗೆ ಬರ್ತಿಲ್ಲ ಸಲ್ಮಾನ್​ ಖಾನ್​? ಭರ್ಜರಿಯಾಗಿ ನಡೆಯಲಿದೆ ಸಂಗೀತ್ ಕಾರ್ಯಕ್ರಮ
ಸಲ್ಮಾನ್​-ಕತ್ರಿನಾ
TV9 Web
| Edited By: |

Updated on: Nov 28, 2021 | 4:44 PM

Share

ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್​ ಮದುವೆಗೆ ಕೆಲವೇ ದಿನಗಳು ಬಾಕಿ ಇವೆ. ಈ ಜೋಡಿ ಮದುವೆ ಆಗುತ್ತಿಲ್ಲ ಎಂದು ಕತ್ರಿನಾ ಆಪ್ತರು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಸದ್ದಿಲ್ಲದೆ ವಿವಾಹಕ್ಕೆ ಸಿದ್ಧತೆ ನಡೆಯುತ್ತಿದೆ. ರಾಜಸ್ಥಾನದ ಐಷಾರಾಮಿ ಹೋಟೆಲ್​ನಲ್ಲಿ ವಿವಾಹ ನಡೆಯುತ್ತಿದೆ ಎನ್ನಲಾಗಿದೆ. ಈ ಮಧ್ಯೆ ಒಬ್ಬೊಬ್ಬರಾಗಿ ಸೆಲೆಬ್ರಿಟಿಗಳಿಗೆ ಆಮಂತ್ರಣ ಪತ್ರ ತಲುಪುತ್ತಿದೆ. ಮದುವೆಗೂ ಮೊದಲು ಭರ್ಜರಿಯಾಗಿ ಸಂಗೀತ್ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ಈಗ ವರದಿಯೊಂದು ಹೊರ ಬಿದ್ದಿದೆ.

ವಿಕ್ಕಿ ಕೌಶಲ್​ ‘ಭೂತ್​’ ಹಾಗೂ ‘ಗೋವಿಂದ್​ ಮೆರಾ ನಾಮ್​’ ಚಿತ್ರಗಳಲ್ಲೂ ನಟಿಸಿದ್ದಾರೆ. ಈ ಸಿನಿಮಾದ ನಿರ್ದೇಶಕ ಶಶಾಂಕ್​ ಖೈತಾನ್​ ಜತೆ ವಿಕ್ಕಿಗೆ ಒಳ್ಳೆಯ ಬಾಂಧವ್ಯ ಇದೆ. ಮೊದಲ ಅತಿಥಿಯಾಗಿ ಅವರಿಗೆ ಆಮಂತ್ರಣ ಹೋಗಿದೆ. ಮೂಲಗಳ ಪ್ರಕಾರ ಪಂಜಾಬ್​ ಶೈಲಿಯಲ್ಲಿ ಹಸೆಮಣೆ ಏರುವ ಸಮಾರಂಭ ನಡೆಯಲಿದೆಯಂತೆ.

ಇನ್ನು, ಮದುವೆ ಹಿಂದಿನ ದಿನ ಸಂಗೀತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ದೊಡ್ಡದೊಡ್ಡ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ. ವಿಕ್ಕಿ ಜತೆ ಒಳ್ಳೆಯ ಗೆಳೆತನ ಹೊಂದಿರುವ ಕರಣ್​ ಜೋಹರ್​ ಅವರು ವರನ ಕಡೆಯಿಂದ ಹಾಗೂ ಕತ್ರಿನಾಗೆ ಕ್ಲೋಸ್​ ಇರುವ ಫರ್ಹಾ ಖಾನ್​ ವಧು ಕಡೆಯಿಂದ ಸಂಗೀತ್​ ಕಾರ್ಯಕ್ರಮದ ಜವಾಬ್ದಾರಿ ಹೊತ್ತುಕೊಳ್ಳಲಿದ್ದಾರೆ.

ಸಲ್ಮಾನ್​ ಖಾನ್​ ಸಹೋದರಿ ಅರ್ಪಿತಾ ಶರ್ಮಾ ಹಾಗೂ ಅಲ್ವಿರಾ ಅಗ್ನಿಹೋತ್ರಿ ಈ ಮದುವೆಯಲ್ಲಿ ಭಾಗಿಯಾಗುತ್ತಿದ್ದಾರೆ. ಸಲ್ಮಾನ್​ ಖಾನ್​ ಅವರು ಈ ವಿವಾಹ ಸಮಾರಂಭ ಪಾಲ್ಗೊಳ್ಳುತ್ತಿಲ್ಲ ಎಂದು ವರದಿ ಆಗಿದೆ. ಸಲ್ಮಾನ್​ ಖಾನ್​ ಉದ್ದೇಶಪೂರ್ವಕವಾಗಿಯೇ ಈ ಮದುವೆಗೆ ಬರುತ್ತಿಲ್ಲ ಎನ್ನಲಾಗಿದೆ.

ಶಾರುಖ್​ ಖಾನ್​ ಅವರು ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ 200 ಅತಿಥಿಗಳು ಪಾಲ್ಗೊಳ್ಳಲಿದ್ದಾರೆ. ಇವರಲ್ಲಿ ಬಹುತೇಕರು ಸೆಲೆಬ್ರಿಟಿಗಳು. ಎಲ್ಲರಿಗೂ ಉಳಿದುಕೊಳ್ಳೋಕೆ ಹೋಟೆಲ್​ನಲ್ಲಿಯೇ ವ್ಯವಸ್ಥೆ ಮಾಡಲಾಗಿದೆ. ಡಿಸೆಂಬರ್​ 9ರಂದು ಮದುವೆ ಸಮಾರಂಭ ನಡೆಯಲಿದೆ.  ರಾಜಸ್ಥಾನದ ಸಿಕ್ಸ್​ ಸೆನ್ಸಸ್​ ಫೋರ್ಟ್​ ಹೋಟೆಲ್​ನಲ್ಲಿ ಮದುವೆ ನಡೆಯುತ್ತಿದೆ. ಇದಕ್ಕಾಗಿ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ನಡೆಯುತ್ತಿದೆ.

ಇದನ್ನೂ ಓದಿ:  ‘ಕತ್ರಿನಾ-ವಿಕ್ಕಿ ಮದುವೆ ನಡೆಯುತ್ತಿಲ್ಲ’; ಅಚ್ಚರಿಯ​ ವಿಚಾರ ತೆರೆದಿಟ್ಟ ವಿಕ್ಕಿ ಕೌಶಲ್​ ಸಂಬಂಧಿ

Antim Box Office Collection: ಕೇವಲ 4.5 ಕೋಟಿ ಗಳಿಸಿದ ‘ಅಂತಿಮ್​’ ಚಿತ್ರ; ಸಲ್ಮಾನ್​ ಖಾನ್​ ಸಿನಿಮಾದ ಹಣೆಬರಹ ಏನಾಗಬಹುದು?

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ