AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಕಂದರ್ ಸೋಲು: ಅಭಿಮಾನಿಗಳ ಮಾತು ಕೇಳಲು ಒಪ್ಪಿದ ಸಲ್ಮಾನ್ ಖಾನ್

ಸೋಲಿನ ಸುಳಿಯಿಂದ ಹೊರಬರಲು ಸಲ್ಮಾನ್ ಖಾನ್ ಅವರು ದಾರಿ ಹುಡುಕುತ್ತಿದ್ದಾರೆ. ಹಾಗಾಗಿ ಅವರು ಅಭಿಮಾನಿಗಳನ್ನೇ ಭೇಟಿ ಮಾಡಿ ಸಲಹೆ ಕೇಳಿದ್ದಾರೆ. ಇನ್ಮುಂದೆ ಯಾವ ರೀತಿ ಸಿನಿಮಾ ಮಾಡುವುದು ಸೂಕ್ತ ಎಂಬ ವಿಚಾರವನ್ನು ಫ್ಯಾನ್ಸ್ ಜೊತೆ ಸಲ್ಮಾನ್ ಖಾನ್ ಚರ್ಚಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಸಿಕಂದರ್ ಸೋಲು: ಅಭಿಮಾನಿಗಳ ಮಾತು ಕೇಳಲು ಒಪ್ಪಿದ ಸಲ್ಮಾನ್ ಖಾನ್
Salman Khan
ಮದನ್​ ಕುಮಾರ್​
|

Updated on: Apr 06, 2025 | 10:30 PM

Share

ಕೆಲವೇ ದಿನಗಳ ಹಿಂದೆ ಬಿಡುಗಡೆ ಆದ ‘ಸಿಕಂದರ್’ (Sikandar) ಸಿನಿಮಾದ ಸೋಲಿನಿಂದ ಸಲ್ಮಾನ್ ಖಾನ್ (Salman Khan) ಅವರ ವೃತ್ತಿ ಜೀವನಕ್ಕೆ ಕೊಂಚ ಹಿನ್ನಡೆ ಆಗಿದೆ. ಬಹುಕೋಟಿ ರೂಪಾಯಿ ಬಂಡವಾಳ ಹೂಡಿದ ಈ ಸಿನಿಮಾದಿಂದ ನಿರ್ಮಾಪಕರಿಗೆ ನಷ್ಟ ಆಗಿದೆ. ಅಲ್ಲದೇ, ಸಿನಿಮಾ ಚೆನ್ನಾಗಿಲ್ಲ ಎಂದು ಫ್ಯಾನ್ಸ್ ಕೂಡ ಬೇಸರ ಮಾಡಿಕೊಂಡಿದ್ದಾರೆ. ಇಷ್ಟೆಲ್ಲ ಹಿನ್ನಡೆ ಆದ ಬಳಿಕ ಸಲ್ಮಾನ್ ಖಾನ್ ಅವರು ಅಭಿಮಾನಿಗಳ (Salman Khan Fans) ಮಾತು ಕೇಳಲು ನಿರ್ಧರಿಸಿದ್ದಾರೆ. ವರದಿಗಳ ಪ್ರಕಾರ ಸಲ್ಮಾನ್ ಖಾನ್ ಅವರು ಈಗಾಗಲೇ ತಮ್ಮ ಕೆಲವು ಅಭಿಮಾನಿಗಳನ್ನು ಭೇಟಿ ಮಾಡಿ ಒಂದಷ್ಟು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಮುಂದಿನ ಸಿನಿಮಾಗಳನ್ನು ಯಾವ ರೀತಿ ಮಾಡಬೇಕು ಎಂಬ ಬಗ್ಗೆ ಮಾತುಕತೆ ಮಾಡಿದ್ದಾರೆ.

ಸಾಮಾನ್ಯವಾಗಿ ಸ್ಟಾರ್ ನಟರು ಈ ರೀತಿ ಮಾಡುವುದು ಕಡಿಮೆ. ಆದರೆ ಸಲ್ಮಾನ್ ಖಾನ್ ಅವರಿಗೆ ಬೇರೆ ದಾರಿ ಕಾಣದಂತಾಗಿದೆ. ಹಾಗಾಗಿ ಅಭಿಮಾನಿಗಳ ಬಳಿಯೇ ಸಲಹೆ ಕೇಳಲು ಅವರು ಮುಂದಾಗಿದ್ದಾರೆ. ಕೆಲವು ಅಪ್ಪಟ ಅಭಿಮಾನಿಗಳು ಸಲ್ಮಾನ್ ಖಾನ್ ಅವರನ್ನು ಭೇಟಿ ಮಾಡಿ ಒಂದಷ್ಟು ಸಲಹೆಗಳನ್ನು ಕೊಟ್ಟಿದ್ದಾರೆ. ಅಲಿ ಅಬ್ಬಾಸ್ ಜಾಫರ್, ಕಬೀರ್ ಖಾನ್ ರೀತಿಯ ಒಳ್ಳೆಯ ನಿರ್ದೇಶಕರ ಜೊತೆ ಕೆಲಸ ಮಾಡಬೇಕು ಎಂದು ಅಭಿಮಾನಿಗಳು ಹೇಳಿದ್ದಾರೆ. ಅದನ್ನು ಸಲ್ಮಾನ್ ಖಾನ್ ಅವರು ಒಪ್ಪಿದ್ದಾರೆ.

‘ಸಿಕಂದರ್’ ಸಿನಿಮಾ ಚೆನ್ನಾಗಿಲ್ಲದಿದ್ದರೂ ಕೂಡ ಅಭಿಮಾನಿಗಳು ಸಾಧ್ಯವಾದಷ್ಟು ಪ್ರಚಾರ ಮಾಡಲು ಪ್ರಯತ್ನಿಸಿದ್ದರು. ತಮ್ಮ ಶ್ರಮ ಹೇಗಿತ್ತು ಎಂಬುದನ್ನು ಕೂಡ ಅಭಿಮಾನಿಗಳು ಸಲ್ಮಾನ್ ಖಾನ್​ಗೆ ತೋರಿಸಿದ್ದಾರೆ. ಅಲ್ಲದೇ, ಸಲ್ಮಾನ್ ಹಾಗೂ ಫ್ಯಾನ್ಸ್ ನಡುವೆ ಸಂವಹನ ಸರಿಯಾಗಿ ಇರಬೇಕು, ಅದಕ್ಕೆ ಅವರ ಮ್ಯಾನೇಜರ್​ ಸೂಕ್ತ ರೀತಿಯಲ್ಲಿ ಸಹಕರಿಸಬೇಕು ಎಂದು ಕೂಡ ಫ್ಯಾನ್ಸ್ ಸಲಹೆ ಕೊಟ್ಟಿದ್ದಾರೆ ಎನ್ನಲಾಗಿದೆ. ಈ ವಿಷಯವನ್ನು ಕೂಡ ಗಂಭೀರವಾಗಿ ಪರಿಗಣಿಸುವುದಾಗಿ ಸಲ್ಮಾನ್ ಖಾನ್ ಭರವಸೆ ನೀಡಿದ್ದಾರೆ.

ಇದನ್ನೂ ಓದಿ
Image
ಸಲ್ಲು ಜೊತೆ ಪ್ರೇಮ, ಇಬ್ಬರು ಮಕ್ಕಳ ತಂದೆಯ ಜೊತೆ ವಿವಾಹ, ಆ ಬಳಿಕ ವಿಚ್ಛೇದನ
Image
ಸಿನಿಮಾ ಕೈಬಿಟ್ಟು ಸಲ್ಮಾನ್ ಖಾನ್​ಗೆ ಕ್ಷಮೆ ಕೇಳಿದ ಅಟ್ಲಿ; ರಾಂಗ್ ಆದ ನಟ?
Image
ದಕ್ಷಿಣದ ನಿರ್ದೇಶಕನ ಮೇಲೆ ಉರಿದು ಬಿದ್ದ ಸಲ್ಮಾನ್ ಖಾನ್ ಅಭಿಮಾನಿಗಳು, ಕಾರಣ?
Image
ಸಲ್ಮಾನ್ ಖಾನ್​ಗೆ ಬಂದಿರಲಿಲ್ಲ ಆಫರ್; ಜೀವನ ಬದಲಾಯಿಸಿದ ವ್ಯಕ್ತಿ ಇವರು

ಅಂದಾಜು ಒಂದು ಗಂಟೆ ಸಮಯ ಸಲ್ಮಾನ್ ಖಾನ್ ಮತ್ತು ಅಭಿಮಾನಿಗಳ ನಡುವೆ ಮಾತುಕಥೆ ನಡೆದಿದೆ. ಇನ್ಮುಂದೆ ಅಭಿಮಾನಿಗಳಿಗೆ ಇಷ್ಟ ಆಗುವ ರೀತಿಯಲ್ಲೇ ಸಿನಿಮಾ ಮಾಡುವುದಾಗಿ ಸಲ್ಲು ಹೇಳಿಕಳಿಸಿದ್ದಾರಂತೆ. ‘ಸಿಕಂದರ್’ ಸಿನಿಮಾಗೆ ಎ.ಆರ್. ಮುರುಗದಾಸ್ ಅವರು ನಿರ್ದೇಶನ ಮಾಡಿದ್ದಾರೆ. ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ನೂರು ಕೋಟಿ ರೂಪಾಯಿ ಗಳಿಸಲು ಪ್ರಯಾಸಪಟ್ಟಿದೆ. ರಶ್ಮಿಕಾ ಮಂದಣ್ಣ ಅವರ ಯಶಸ್ಸಿನ ಓಡಕ್ಕೂ ಈ ಚಿತ್ರದಿಂದ ಬ್ರೇಕ್ ಬಿದ್ದಿದೆ.

ಇದನ್ನೂ ಓದಿ: ಸಲ್ಮಾನ್ ಸಿನಿಮಾಗೆ ಚಿಲ್ಲರೆ ಗಳಿಕೆ; ಇನ್ನೂ ನೂರು ಕೋಟಿ ತಲುಪಿಲ್ಲ ‘ಸಿಕಂದರ್’ ಕಲೆಕ್ಷನ್

ಸಲ್ಮಾನ್ ಖಾನ್ ಅವರು ಸೋಲಿನ ಸುಳಿಯಿಂದ ಹೊರಗೆ ಬರಲು ದಾರಿ ಹುಡುಕುತ್ತಿದ್ದಾರೆ. ಉತ್ತಮ ಕಥೆ ಮತ್ತು ನಿರ್ದೇಶಕರನ್ನು ಆಯ್ಕೆ ಮಾಡಿಕೊಳ್ಳದೇ ಬೇರೆ ದಾರಿ ಇಲ್ಲ. ಶಾರುಖ್ ಖಾನ್ ರೀತಿ ಸ್ಕ್ರಿಪ್ಟ್ ಆಯ್ಕೆ ಮಾಡಿಕೊಳ್ಳುವತ್ತ ಸಲ್ಮಾನ್ ಖಾನ್ ಆಲೋಚಿಸಬೇಕಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

​ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ