AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ಮಮತಾ ಬ್ಯಾನರ್ಜಿ ಜತೆ ಕೈ ಜೋಡಿಸಿದ ಸಲ್ಮಾನ್​ ಖಾನ್​; ರಾಜಕೀಯದ ಮುನ್ಸೂಚನೆಯೇ?

Salman Khan Meets Mamata Banerjee: ತಮ್ಮನ್ನು ಭೇಟಿ ಆಗಲು ಬಂದ ಸಲ್ಮಾನ್​ ಖಾನ್​ಗೆ ಮಮತಾ ಬ್ಯಾನರ್ಜಿ ಅವರು ಶಾಲು ಹೊದಿಸಿ ಸ್ವಾಗತಿಸಿದ್ದಾರೆ. ಈ ಭೇಟಿಯ ಕಾರಣ ಏನು?

Salman Khan: ಮಮತಾ ಬ್ಯಾನರ್ಜಿ ಜತೆ ಕೈ ಜೋಡಿಸಿದ ಸಲ್ಮಾನ್​ ಖಾನ್​; ರಾಜಕೀಯದ ಮುನ್ಸೂಚನೆಯೇ?
ಮಮತಾ ಬ್ಯಾನರ್ಜಿ, ಸಲ್ಮಾನ್ ಖಾನ್
ಮದನ್​ ಕುಮಾರ್​
|

Updated on: May 14, 2023 | 9:58 AM

Share

ಮುಖ್ಯಾಂಶಗಳು

  • ಸಲ್ಮಾನ್​ ಖಾನ್​ ಅವರು ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದಾರೆ
  • ಕೊಲ್ಕತ್ತಾದಲ್ಲಿ ಸಲ್ಮಾನ್​ ಖಾನ್​ ಅವರು ಮನರಂಜನಾ ಕಾರ್ಯಕ್ರಮ ನೀಡಿದ್ದಾರೆ
  • ಸಲ್ಮಾನ್​ ಖಾನ್​ ಅವರು ಈಗ ‘ಟೈಗರ್​ 3’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ

ಎಲ್ಲೆಲ್ಲೂ ಈಗ ರಾಜಕೀಯದ್ದೇ ಚರ್ಚೆ. ಕರ್ನಾಟಕದ ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಚರ್ಚೆ ಶುರುವಾಗಿದೆ. ಮುಂಬರುವ ಲೋಕಸಭಾ ಚುನಾವಣೆ ಬಗ್ಗೆಯೂ ಭಾರಿ ಕೌತುಕ ಮೂಡಿದೆ. ಈ ಸಂದರ್ಭದಲ್ಲಿ ರಾಜಕೀಯ ನಾಯಕರ ಜೊತೆ ಸಿನಿಮಾ ತಾರೆಯರು ಕಾಣಿಸಿಕೊಂಡರೆ ಬೇರೆ ಬೇರೆ ಅನುಮಾನಗಳಿಗೆ ಕಾರಣ ಆಗುತ್ತದೆ. ನಟ ಸಲ್ಮಾನ್​ ಖಾನ್​ ಅವರು ಈಗ ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರನ್ನು ಭೇಟಿ ಆಗಿದ್ದಾರೆ. ಇಬ್ಬರು ಜೊತೆಗಿರುವ ಫೋಟೋ ಮತ್ತು ವಿಡಿಯೋಗಳು ವೈರಲ್​ ಆಗಿವೆ. ತಮ್ಮನ್ನು ಭೇಟಿ ಆಗಲು ಬಂದ ಸಲ್ಮಾನ್​ ಖಾನ್​ಗೆ ಮಮತಾ ಬ್ಯಾನರ್ಜಿ ಅವರು ಶಾಲು ಹೊದಿಸಿ ಸ್ವಾಗತಿಸಿದ್ದಾರೆ. ಈ ಭೇಟಿಯ ಕಾರಣ ಏನು? ಸಲ್ಮಾನ್​ ಖಾನ್​ (Salman Khan) ಅವರು ರಾಜಕೀಯದ ಬಗ್ಗೆ ಆಸಕ್ತಿ ಹೊಂದಿದ್ದಾರಾ? ಇಲ್ಲಿದೆ ಅಸಲಿ ಕಹಾನಿ..

ಸಲ್ಮಾನ್​ ಖಾನ್​ ಅವರು ಸಿನಿಮಾ ಮಾತ್ರವಲ್ಲದೇ ಲೈವ್​ ಕಾರ್ಯಕ್ರಮಗಳ ಮೂಲಕವೂ ಅಭಿಮಾನಿಗಳನ್ನು ರಂಜಿಸುತ್ತಾರೆ. ‘ದಬಂಗ್​ ಟೂರ್​’ ಮಾಡುವ ಮೂಲಕ ಬೇರೆ ಬೇರೆ ನಗರ ಮತ್ತು ದೇಶಗಳಿಗೆ ತೆರಳಿ ಅವರು ಮನರಂಜನೆ ನೀಡುತ್ತಾರೆ. ಅವರ ಜೊತೆ ಬಾಲಿವುಡ್​ನ ಅನೇಕ ತಾರೆಯರು ಸಾಥ್​ ನೀಡುತ್ತಾರೆ. ಈಗ ಅವರು ಪಶ್ಚಿಮ ಬಂಗಾಳಕ್ಕೆ ಹೋಗಿರುವುದು ಕೂಡ ಅದೇ ಕಾರಣಕ್ಕೆ.

ಇದನ್ನೂ ಓದಿ
Image
ಸೆಟ್​​ನಲ್ಲಿ ಸಲ್ಲುನ ಭೇಟಿ ಮಾಡೋಕೆ ಬಂದ ರಾಮ್​ ಚರಣ್​ಗೆ ಸಿಕ್ತು ಹಿಂದಿ ಸಿನಿಮಾ ಆಫರ್
Image
ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
Image
ಬಹಿರಂಗ ವೇದಿಕೆಯಲ್ಲಿ ಸಲ್ಲು ಇದೆಂಥಾ ಕೆಲಸ; ಪೂಜಾ ಹೆಗ್ಡೆ ವಿಚಾರದಲ್ಲಿ ಸಿಕ್ಕಾಪಟ್ಟೆ ಮುಜುಗರ
Image
ಸಲ್ಮಾನ್​ ಖಾನ್ ಫಾರ್ಮ್​ಹೌಸ್​ ಬೆಲೆ 80 ಕೋಟಿ ರೂ.! ಸಲ್ಲು ಮೆಚ್ಚಿನ ಈ ಸ್ಥಳದಲ್ಲಿ ಏನೆಲ್ಲ ಇದೆ?

ಪಶ್ಚಿಮ ಬಂಗಾಳಕ್ಕೆ ತೆರಳಿದ ಸಲ್ಮಾನ್​ ಖಾನ್​ ಅವರು ಸೌಹಾರ್ದಯುತವಾಗಿ ಅಲ್ಲಿನ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದಾರೆ ಅಷ್ಟೇ. ಸದ್ಯಕ್ಕಂತೂ ಅವರು ರಾಜಕೀಯದ ವಿಚಾರದಲ್ಲಿ ತಲೆ ಹಾಕಿಲ್ಲ. ಸಲ್ಮಾನ್​ ಖಾನ್​ ಅವರನ್ನು ಬರಮಾಡಿಕೊಳ್ಳಲು ಮಮತಾ ಬ್ಯಾನರ್ಜಿ ಅವರು ತಮ್ಮ ಮನೆ ಎದುರು ನಿಂತಿದ್ದರು. 30 ನಿಮಿಷಗಳ ಕಾಲ ಇಬ್ಬರೂ ಮಾತುಕಥೆ ನಡೆಸಿದ್ದಾರೆ.

ಇದನ್ನೂ ಓದಿ: The Kerala Story: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬ್ಯಾನ್​; ನಿರ್ಧಾರಕ್ಕೆ ಕಾರಣ ತಿಳಿಸಿದ ಮಮತಾ ಬ್ಯಾನರ್ಜಿ

ಕೊಲ್ಕತ್ತಾದಲ್ಲಿ ಶನಿವಾರ ಸಲ್ಮಾನ್​ ಖಾನ್​ ಅವರು ಮನರಂಜನಾ ಕಾರ್ಯಕ್ರಮ ನೀಡಿದ್ದಾರೆ. ಅವರಿಗೆ ಬೆದರಿಕೆ ಇರುವ ವಿಚಾರ ಗೊತ್ತೇ ಇದೆ. ಆದ್ದರಿಂದ ಕೊಲ್ಕತ್ತಾದಲ್ಲಿ ಸಲ್ಮಾನ್​ ಖಾನ್​ ಉಳಿದುಕೊಂಡಿರುವ ಹೋಟೆಲ್​ ಸುತ್ತಮುತ್ತ ಬಿಗಿ ಭದ್ರತೆ ಒದಗಿಸಲಾಗಿದೆ. ಸೋನಾಕ್ಷಿ ಸಿನ್ಹಾ, ಪೂಜಾ ಹೆಗ್ಡೆ ಮುಂತಾದ ತಾರೆಯರು ಕೂಡ ‘ದಬಂಗ್​ ಟೂರ್​’ನಲ್ಲಿ ಸಲ್ಲು ಜೊತೆ ಭಾಗಿ ಆಗಿದ್ದಾರೆ.

ಇದನ್ನೂ ಓದಿ: Salman Khan: ಸೋಲಿನ ನೋವು ಮರೆತು ಪೋಸ್​ ಕೊಟ್ಟ​ ಸಲ್ಮಾನ್​ ಖಾನ್​; ‘ಘರ್ಜಿಸಲು ಟೈಗರ್​ ರೆಡಿ’ ಎಂದ ಫ್ಯಾನ್ಸ್​

ಸಲ್ಮಾನ್​ ಖಾನ್​ ಅವರು ಈಗ ‘ಟೈಗರ್​ 3’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಶೂಟಿಂಗ್​ ನಡೆಯುತ್ತಿದೆ. ಹಲವು ಕಾರಣಗಳಿಂದ ಈ ಸಿನಿಮಾದ ಮೇಲೆ ಹೈಪ್​ ಸೃಷ್ಟಿ ಆಗಿದೆ. ಮನೀಶ್​ ಶರ್ಮಾ ಅವರು ‘ಟೈಗರ್​ 3’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ನಾಯಕಿಯಾಗಿ ಕತ್ರಿನಾ ಕೈಫ್​ ನಟಿಸುತ್ತಿದ್ದಾರೆ. ಸಲ್ಲು ಮತ್ತು ಕತ್ರಿನಾ ಜೋಡಿಯನ್ನು ಮತ್ತೊಮ್ಮೆ ತೆರೆಮೇಲೆ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ