AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡಿನ ದಾಳಿ ಕೇಸ್​: ಯಾರ ಮೇಲೆ ಅನುಮಾನ ಇದೆ ಎಂಬುದು ತಿಳಿಸಿದ ಸಲ್ಮಾನ್​ ಖಾನ್​

ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ನಡೆದ ಬಳಿಕ ಅವರ ಅಭಿಮಾನಿಗಳಿಗೆ ಆತಂಕ ಆಯಿತು. ಈ ಕೇಸ್​ಗೆ ಸಂಬಂಧಿಸಿದಂತೆ ಪೊಲೀಸರು ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ. ಅದರ ವಿವರಗಳು ಲಭ್ಯವಾಗಿವೆ. ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ ಬಗ್ಗೆ ಹೇಳಿಕೆಯಲ್ಲಿ ಸಲ್ಮಾನ್​ ಖಾನ್​ ಅವರು ಪ್ರಸ್ತಾಪಿಸಿದ್ದಾರೆ. ಈ ಮೊದಲು ನಡೆದಿದ್ದ ಕೊಲೆ ಪ್ರಕರಣಗಳ ಬಗ್ಗೆಯೂ ಅವರು ಮಾತನಾಡಿದ್ದಾರೆ.

ಗುಂಡಿನ ದಾಳಿ ಕೇಸ್​: ಯಾರ ಮೇಲೆ ಅನುಮಾನ ಇದೆ ಎಂಬುದು ತಿಳಿಸಿದ ಸಲ್ಮಾನ್​ ಖಾನ್​
ಸಲ್ಮಾನ್​ ಖಾನ್​, ಗ್ಯಾಲಕ್ಸಿ ಅಪಾರ್ಟ್​ಮೆಂಟ್​
ಮದನ್​ ಕುಮಾರ್​
|

Updated on: Jul 24, 2024 | 6:14 PM

Share

ಕೆಲವು ತಿಂಗಳ ಹಿಂದೆ ನಟ ಸಲ್ಮಾನ್​ ಖಾನ್​ ಅವರ ಮನೆ ಮೇಲೆ ಗುಂಡಿನ ದಾಳಿ ಆಯಿತು. ಏಪ್ರಿಲ್ 14ರಂದು ನಸುಕಿನ ವೇಳೆ ಬಂದ ಇಬ್ಬರು ಕಿಡಿಗೇಡಿಗಳು ಸಲ್ಲು ಮನೆ ಮೇಲೆ ಗುಂಡು ಹಾರಿಸಿದ್ದರು. ಆ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಮಾನ್​ ಖಾನ್​ ಅವರು ಈವರೆಗೂ ಸಾರ್ವಜನಿಕವಾಗಿ ಮಾತನಾಡಿಲ್ಲ. ಈಗ ಅವರ ಹೇಳಿಕೆಯ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ವರದಿ ಪ್ರಕಟ ಆಗಿದೆ. ಪೊಲೀಸರ ತನಿಖೆ ವೇಳೆ ಸಲ್ಮಾನ್​ ಖಾನ್​ ನೀಡಿದ ಹೇಳಿಕೆಯ ಪ್ರತಿ ಲಭ್ಯವಾಗಿದ್ದು, ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾದ ಅಂಶಗಳ ಬಗ್ಗೆ ಮಾಹಿತಿ ಬಹಿರಂಗ ಆಗಿದೆ.

ಜುಲೈ ಮೊದಲ ವಾರದಲ್ಲಿ ಕ್ರೈಂ ಬ್ರ್ಯಾಂಚ್​ ಪೊಲೀಸರು ಚಾರ್ಜ್​ಶೀಟ್​ ಸಲ್ಲಿಸಿದ್ದರು. ಅದರಲ್ಲಿ ಸಲ್ಮಾನ್​ ಖಾನ್​ ಅವರ ಹೇಳಿಕೆಯ ಬಗ್ಗೆ ವಿವರ ಇದೆ. 1,735 ಪುಟಗಳು ಇರುವ ಚಾರ್ಜ್​ಶೀಟ್​ನಲ್ಲಿ ಸಲ್ಮಾನ್​ ಖಾನ್​ ಅವರು ತಮಗೆ ಯಾರ ಮೇಲೆ ಅನುಮಾನ ಇದೆ ಎಂಬುದನ್ನು ತಿಳಿಸಿದ್ದಾರೆ. ಘಟನೆ ನಡೆದ ದಿನ ಏನಾಯಿತು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ಗುಂಡಿನ ದಾಳಿ ನಡೆದ ಬಳಿಕ ಪ್ರತಿ ಕ್ಷಣವೂ ಎಚ್ಚರಿಕೆಯಿಂದ ಇರುವಂತೆ ತಮ್ಮ ಕುಟುಂಬದ ಸದಸ್ಯರಿಗೆ ಸಲ್ಮಾನ್​ ಖಾನ್​ ಸಲಹೆ ನೀಡಿದ್ದಾರೆ.

‘ಅಂದು ಮುಂಜಾನೆ ನನಗೆ ಪಟಾಕಿ ರೀತಿಯ ಸದ್ದು ಕೇಳಿಸಿತು. ಬೈಕ್​ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗ್ಯಾಲಕ್ಸಿ ಅಪಾರ್ಟ್​ಮೆಂಟ್​ನ ಮೊದಲ ಮಹಡಿ ಕಡೆಗೆ ಗುಂಡು ಹಾರಿಸಿದರು ಅಂತ ನಸುಕಿನ 4.55ರ ಸುಮಾರಿಗೆ ಪೊಲೀಸ್​ ಬಾಡಿಗಾರ್ಡ್​ ಬಂದು ವಿಷಯ ತಿಳಿಸಿದರು. ಈ ಮೊದಲು ಕೂಡ ನನಗೆ ಮತ್ತು ನನ್ನ ಕುಟುಂಬದವರ ಮೇಲೆ ಹಲ್ಲೆ ಮಾಡುವ ಪ್ರಯತ್ನ ನಡೆದಿತ್ತು. ಸೋಶಿಯಲ್ ಮೀಡಿಯಾ ಮೂಲಕ ಲಾರೆನ್ಸ್​ ಬಿಷ್ಣೋಯ್ ಈ ದಾಳಿಯ ಹೊಣೆ ಹೊತ್ತುಕೊಂಡಿದ್ದಾನೆ ಎಂಬುದು ತಿಳಿಯಿತು. ಹಾಗಾಗಿ ಆತನ ಗ್ಯಾಂಗ್​ನವರೇ ನಮ್ಮ ಮೇಲೆ ದಾಳಿ ಮಾಡಿದ್ದಾರೆ ಎಂದು ನಾನು ನಂಬಿದ್ದೇನೆ’ ಎಂದಿದ್ದಾರೆ ಸಲ್ಮಾನ್​ ಖಾನ್​.

ಇದನ್ನೂ ಓದಿ: ಯೂಟ್ಯೂಬ್​ನಲ್ಲಿ ಸಲ್ಮಾನ್​ ಖಾನ್​ಗೆ ಕೊಲೆ ಬೆದರಿಕೆ ಹಾಕಿದ 25ರ ಯುವಕನ ಬಂಧನ

‘ಈ ಮೊದಲು ಕೂಡ ಲಾರೆನ್ಸ್​ ಬಿಷ್ಣೋಯ್​ ಹಾಗೂ ಆತನ ಗ್ಯಾಂಗ್​ನವರು ನನ್ನನ್ನು ಮತ್ತು ನನ್ನ ಕುಟುಂಬದವರನ್ನು ಕೊಲ್ಲುವುದಾಗಿ ಸಂದರ್ಶನಗಳಲ್ಲಿ ಹೇಳಿದ್ದರು. ಈಗ ಕೂಡ ಅದೇ ಉದ್ದೇಶದಿಂದ ನನ್ನ ಮನೆ ಎದುರು ಆತನ ಗ್ಯಾಂಗ್​ ಸದಸ್ಯರು ದಾಳಿ ಮಾಡಿದ್ದಾರೆ ಎಂಬುದು ನನ್ನ ನಂಬಿಕೆ’ ಎಂದು ಸಲ್ಮಾನ್​ ಖಾನ್​ ಹೇಳಿದ್ದಾರೆ. ಪ್ರಕರಣದ ಬಗ್ಗೆ ಸಲ್ಮಾನ್​ ಖಾನ್​ ಜೊತೆ 4 ಗಂಟೆಗಳ ಕಾಲ ವಿಚಾರಣೆ ನಡೆಸಿ ಅವರ ಹೇಳಿಕೆಯನ್ನು ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

ಸಲ್ಮಾನ್​ ಖಾನ್​ ಅವರ ಫಾರ್ಮ್​ ಹೌಸ್​ ಒಳಗೆ ನುಸುಳುವ ಪ್ರಯತ್ನ ಕೂಡ ಈ ಹಿಂದೆ ಆಗಿತ್ತು. ನಕಲಿ ಗುರುತಿನ ಚೀಟಿ ತೋರಿಸಿ ಇಂಥ ಕೃತ್ಯ ಮಾಡಲಾಗಿತ್ತು. ಆ ಬಗ್ಗೆಯೂ ತಮ್ಮ ಹೇಳಿಕೆಯಲ್ಲಿ ಸಲ್ಮಾನ್​ ಖಾನ್​ ಪ್ರಸ್ತಾಪಿಸಿದ್ದಾರೆ. ಆ ಘಟನೆಗೆ ಸಂಬಂಧಿಸಿದಂತೆ ಸಲ್ಲು ಕಡೆಯವರು ಈ ಮೊದಲೇ ಪೊಲೀಸರಿಗೆ ದೂರು ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ
ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ
ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ
ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ
ಮಕ್ಕಳಾಗಿಲ್ಲ ಎಂದು ಕೊರಗುತ್ತಿರುವವರಿಗೆ ದೇವಸ್ಥಾನದ ಬಗ್ಗೆ ಹೇಳಿದ ಶೈನ್
ಮಕ್ಕಳಾಗಿಲ್ಲ ಎಂದು ಕೊರಗುತ್ತಿರುವವರಿಗೆ ದೇವಸ್ಥಾನದ ಬಗ್ಗೆ ಹೇಳಿದ ಶೈನ್
Video: ಲಿಫ್ಟ್​ ಒಳಗೆ ಹೈಡ್ರೋಜನ್ ಬಲೂನ್​ಗಳು ಸ್ಫೋಟ
Video: ಲಿಫ್ಟ್​ ಒಳಗೆ ಹೈಡ್ರೋಜನ್ ಬಲೂನ್​ಗಳು ಸ್ಫೋಟ
ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ
ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಯುವತಿ ಮುಖಕ್ಕೆ ಗುಟ್ಕಾ ಉಗಿದ ಮಂಗಳಮುಖಿ
ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: 1 ಕೋಟಿಗೂ ಅಧಿಕ ಮೌಲ್ಯದ ಕಾರುಗಳು ಭಸ್ಮ
ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: 1 ಕೋಟಿಗೂ ಅಧಿಕ ಮೌಲ್ಯದ ಕಾರುಗಳು ಭಸ್ಮ