AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2027ಕ್ಕೆ ಮುಂದೂಡಿಕೆ ಆಯ್ತಾ ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ’ ಚಿತ್ರದ ರಿಲೀಸ್?

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಮಾತೃಭೂಮಿ’ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ಚಿತ್ರದ ಬಿಡುಗಡೆಗೆ ಅನುಮತಿ ಸಿಗಲಲ್ಲ. ಚಿತ್ರದ ಶೀರ್ಷಿಕೆ ಬದಲಾವಣೆ ಮಾಡಿದರೂ ಗ್ರೀನ್ ಸಿಗ್ನಲ್ ಸಿಗಲಿಲ್ಲ. ಸಲ್ಮಾನ್ ಖಾನ್ ನಟನೆಯ ಈ ಚಿತ್ರದ ಬಿಡುಗಡೆ ಇನ್ನಷ್ಟು ತಡವಾಗುವ ಸಾಧ್ಯತೆ ದಟ್ಟವಾಗಿದೆ.

2027ಕ್ಕೆ ಮುಂದೂಡಿಕೆ ಆಯ್ತಾ ಸಲ್ಮಾನ್ ಖಾನ್ ನಟನೆಯ ‘ಮಾತೃಭೂಮಿ’ ಚಿತ್ರದ ರಿಲೀಸ್?
Salman Khan
ಮದನ್​ ಕುಮಾರ್​
|

Updated on: Jul 13, 2026 | 7:12 PM

Share

ಮುಖ್ಯಾಂಶಗಳು

  • ಸಂಘರ್ಷದ ನೈಜ ಘಟನೆಗಳನ್ನು ಆಧರಿಸಿ ನಿರ್ಮಾಣ ಆಗಿದೆ ‘ಮಾತೃಭೂಮಿ’ ಸಿನಿಮಾ.
  • ಚಿತ್ರದ ಸೂಕ್ಷ್ಮ ವಿಷಯಗಳ ಕುರಿತು ರಕ್ಷಣಾ ಸಚಿವಾಲಯ ಆಕ್ಷೇಪ ಎತ್ತಿದ್ದಕ್ಕೆ ರಿಲೀಸ್ ವಿಳಂಬ.
  • ನಿರ್ಮಾಪಕರು ಈ ವರ್ಷವೇ ರಿಲೀಸ್ ಮಾಡಲು ಯತ್ನಿಸುತ್ತಿದ್ದರೂ ಚಿತ್ರಕ್ಕೆ ಸಿಗುತ್ತಿಲ್ಲ ಅನುಮತಿ.

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ನಟನೆಯ, ಬಹುನಿರೀಕ್ಷಿತ ‘ಮಾತೃಭೂಮಿ’ (Maatrubhumi) ಸಿನಿಮಾದ ಬಿಡುಗಡೆ ದಿನಾಂಕವು ಮತ್ತಷ್ಟು ಮುಂದೂಡಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಆರಂಭದಲ್ಲಿ ‘ಬ್ಯಾಟಲ್ ಆಫ್ ಗಲ್ವಾನ್’ (Battle Of Galwan) ಎಂದು ಹೆಸರಿಡಲಾಗಿದ್ದ ಈ ಸಿನಿಮಾಗೆ ಜಾಗತಿಕ ಮಟ್ಟದ ರಾಜತಾಂತ್ರಿಕ ವಿಘ್ನಗಳು ಎದುರಾಗಿವೆ. ಆದ್ದರಿಂದ ಸಿನಿಮಾದ ರಿಲೀಸ್ ದಿನಾಂಕವು 2027ಕ್ಕೆ ಶಿಫ್ಟ್ ಆಗಬಹುದು ಎನ್ನಲಾಗುತ್ತಿದೆ.

ರಕ್ಷಣಾ ಸಚಿವಾಲಯದ ಆಕ್ಷೇಪ?

ಈ ಚಿತ್ರವು 2020ರಲ್ಲಿ ಭಾರತ ಮತ್ತು ಚೀನಾ ನಡುವೆ ನಡೆದ ಗಲ್ವಾನ್ ಕಣಿವೆ ಸಂಘರ್ಷದ ಕಥಾಹಂದರವನ್ನು ಹೊಂದಿದೆ. ಇತ್ತೀಚಿನ ದಿನಗಳಲ್ಲಿ ಭಾರತ ಮತ್ತು ಚೀನಾ ನಡುವಿನ ರಾಜತಾಂತ್ರಿಕ ಸಂಬಂಧಗಳು ಸುಧಾರಿಸುತ್ತಿರುವ ಹಿನ್ನೆಲೆಯಲ್ಲಿ, ಚಿತ್ರದಲ್ಲಿರುವ ಕೆಲವು ಸೂಕ್ಷ್ಮ ವಿಷಯಗಳು ಮತ್ತು ಚೀನಾದ ನೇರ ಉಲ್ಲೇಖಗಳ ಕುರಿತು ಭಾರತೀಯ ರಕ್ಷಣಾ ಸಚಿವಾಲಯವು ಕೆಲವು ಆಕ್ಷೇಪಣೆಗಳನ್ನು ಎತ್ತಿದೆ ಎಂದು ವರದಿಯಾಗಿದೆ. ಈ ಕಾರಣದಿಂದಾಗಿ ಚಿತ್ರಕ್ಕೆ ಅಗತ್ಯವಿರುವ ಕ್ಲಿಯರೆನ್ಸ್ ಸಿಗುವುದು ತಡವಾಗುತ್ತಿದೆ.

ವರ್ಷಾಂತ್ಯಕ್ಕೆ ಬರಲಿದೆಯೇ ಸಿನಿಮಾ?

ಚಿತ್ರದ ನಿರ್ಮಾಪಕರು ಈ ವರ್ಷದ ಅಂತ್ಯದೊಳಗೆ ಚಿತ್ರವನ್ನು ಹೇಗಾದರೂ ಮಾಡಿ ಚಿತ್ರಮಂದಿರಗಳಿಗೆ ತರಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಅನುಮತಿ ಸಿಗುವುದು ಮತ್ತಷ್ಟು ವಿಳಂಬವಾದರೆ ಸಿನಿಮಾ ಬಿಡುಗಡೆ 2027ಕ್ಕೆ ಮುಂದೂಡಲ್ಪಡುವುದು ಅನಿವಾರ್ಯವಾಗಲಿದೆ. ಸಿನಿಮಾದ ವಿವಾದಾತ್ಮಕ ಅಂಶಗಳ ಕುರಿತಾದ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ. ಒಂದು ವೇಳೆ ಶೀಘ್ರದಲ್ಲೇ ಇದು ಇತ್ಯರ್ಥವಾದರೂ, ಬಾಲಿವುಡ್‌ನಲ್ಲಿ ಈಗಾಗಲೇ ಪ್ರಮುಖ ರಿಲೀಸ್ ಡೇಟ್‌ಗಳನ್ನು ಬೇರೆ ದೊಡ್ಡ ಸಿನಿಮಾಗಳು ಕಾಯ್ದಿರಿಸಿವೆ. ಹೀಗಾಗಿ ‘ಮಾತೃಭೂಮಿ’ ಚಿತ್ರಕ್ಕೆ ಉತ್ತಮ ಸ್ಲಾಟ್ ಸಿಗುವುದು ಕಷ್ಟ ಎಂಬ ಅಭಿಪ್ರಾಯ ಇದೆ.

ದಸರಾ ರಜೆಯ ಮೇಲೆ ಕಣ್ಣು:

ಒಂದು ವೇಳೆ ಈ ವರ್ಷವೇ ಸಿನಿಮಾ ಬಿಡುಗಡೆಯಾಗುವುದಾದರೆ, ಅಕ್ಟೋಬರ್ 20ರಂದು (ಮಂಗಳವಾರ) ದಸರಾ ಹಬ್ಬ ಇರುವುದರಿಂದ, ಚಿತ್ರಕ್ಕೆ 5 ದಿನಗಳ ಸುದೀರ್ಘ ವೀಕೆಂಡ್ ಸಿಗುವ ಅವಕಾಶವಿದೆ. ಇದಲ್ಲದೆ, ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಅಕ್ಟೋಬರ್ 30ಕ್ಕೆ ಪ್ರೀಪೋನ್ ಆಗುವ ಸಾಧ್ಯತೆ ಇದೆ. ಅದರ ನಂತರ ನವೆಂಬರ್ ಕೊನೆಯ ವಾರದವರೆಗೂ ಯಾವುದೇ ದೊಡ್ಡ ಸಿನಿಮಾಗಳು ಇಲ್ಲದಿರುವುದರಿಂದ, ಅದು ಕೂಡ ‘ಮಾತೃಭೂಮಿ’ ಚಿತ್ರಕ್ಕೆ ಪ್ಲಸ್ ಪಾಯಿಂಟ್ ಆಗಬಹುದು.

ಇದನ್ನೂ ಓದಿ: 52 ವರ್ಷಗಳಿಂದ ಸಲ್ಮಾನ್ ಖಾನ್ ಕೇವಲ 1 ಬಿಎಚ್​​ಕೆ ಮನೆಯಲ್ಲಿ ವಾಸಿಸುತ್ತಿರುವುದೇಕೆ ಗೊತ್ತಾ?

ಅಪೂರ್ವ ಲಖಿಯಾ ನಿರ್ದೇಶನದ, ಚಿತ್ರಾಂಗದಾ ಸಿಂಗ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಆರಂಭದಲ್ಲಿ ಏಪ್ರಿಲ್ 17ರಂದು ಬಿಡುಗಡೆಯಾಗಬೇಕಿತ್ತು. ಆದರೆ ಸಾಲು ಸಾಲು ಅಡೆತಡೆಗಳಿಂದಾಗಿ ಮುಂದೂಡಲ್ಪಡುತ್ತಲೇ ಸಾಗಿದೆ. ಒಂದು ವೇಳೆ ಈ ವರ್ಷ ಈ ಸಿನಿಮಾ ಬರದಿದ್ದರೆ, 2026ರಲ್ಲಿ ಸಲ್ಮಾನ್ ಖಾನ್ ಅವರ ಯಾವುದೇ ಚಿತ್ರಗಳು ತೆರೆಕಂಡಂತಾಗುವುದಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ