ಹಾವು ಕಚ್ಚಿದ ಬಳಿಕ ಆಸ್ಪತ್ರೆಯಲ್ಲಿ ಸಲ್ಮಾನ್​ ಖಾನ್​ ಚಿಕಿತ್ಸೆ ಪಡೆಯುತ್ತಿರುವ ಫೋಟೋ ವೈರಲ್​

ಸಲ್ಮಾನ್​ ಖಾನ್​ ಅವರಿಗೆ ಕಚ್ಚಿದ ಹಾವು ವಿಷಪೂರಿತ ಆಗಿರಲಿಲ್ಲ ಎಂದು ಅವರ ತಂದೆ ಸಲೀಮ್​ ಖಾನ್​ ತಿಳಿಸಿದ್ದಾರೆ. ಈ ವಿಷಯ ಕೇಳಿದ ಬಳಿಕ ಅವರ ಫ್ಯಾನ್ಸ್​ ನಿಟ್ಟುಸಿರು ಬಿಟ್ಟಿದ್ದಾರೆ.

ಹಾವು ಕಚ್ಚಿದ ಬಳಿಕ ಆಸ್ಪತ್ರೆಯಲ್ಲಿ ಸಲ್ಮಾನ್​ ಖಾನ್​ ಚಿಕಿತ್ಸೆ ಪಡೆಯುತ್ತಿರುವ ಫೋಟೋ ವೈರಲ್​
ಸಲ್ಮಾನ್ ಖಾನ್ ವೈರಲ್ ಫೋಟೋ
Follow us
| Updated By: ಮದನ್​ ಕುಮಾರ್​

Updated on: Dec 27, 2021 | 7:51 AM

ಸಲ್ಮಾನ್​ ಖಾನ್​ (Salman Khan) ಅಭಿಮಾನಿಗಳು ಭಾನುವಾರ (ಡಿ.26) ಒಂದು ಕ್ಷಣ ಆತಂಕಕ್ಕೆ ಒಳಗಾಗಿದ್ದರು. ತಮ್ಮ ನೆಚ್ಚಿನ ನಟನಿಗೆ ಹಾವು ಕಚ್ಚಿದೆ (Snake Bite) ಎಂಬ ಸುದ್ದಿ ತಿಳಿದು ಫ್ಯಾನ್ಸ್​ ಚಿಂತೆಗೀಡಾಗಿದ್ದರು. ಶನಿವಾರ (ಡಿ.25) ರಾತ್ರಿ ಫಾರ್ಮ್​ಹೌಸ್​ನಲ್ಲಿ ಇರುವಾಗ ಸಲ್ಮಾನ್​ ಖಾನ್​ಗೆ ಹಾವು ಕಚ್ಚಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆಸ್ಪತ್ರೆಯ ಬೆಡ್​ ಮೇಲೆ ಮಲಗಿ ಸಲ್ಲು ಚಿಕಿತ್ಸೆ ಪಡೆಯುತ್ತಿರುವ ಫೋಟೋ ವೈರಲ್​ ಆಗಿದೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಅಂದಹಾಗೆ, ಅವರ ಆರೋಗ್ಯ ಈಗ ಹೇಗಿದೆ ಎಂಬ ಅಪ್​​ಡೇಟ್​ ಕೂಡ ಸಿಕ್ಕಿದೆ. ಸಲ್ಮಾನ್​ ಖಾನ್​ ತಂದೆ ಸಲೀಮ್​ ಖಾನ್​ (Salim Khan) ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಶನಿವಾರವೇ ಸಲ್ಮಾನ್​ ಖಾನ್​ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಪುನಃ ಅವರು ಫಾರ್ಮ್​ಹೌಸ್​ಗೆ ತೆರಳಿದ್ದಾರೆ. ಸಲ್ಲುಗೆ ಕಚ್ಚಿದ ಹಾವು ವಿಷಪೂರಿತ ಆಗಿರಲಿಲ್ಲ ಎಂದು ಅವರ ತಂದೆ ಸಲೀಮ್​ ಖಾನ್​ ತಿಳಿಸಿದ್ದಾರೆ. ಈ ವಿಷಯ ಕೇಳಿದ ಬಳಿಕ ಅವರ ಫ್ಯಾನ್ಸ್​ ನಿಟ್ಟುಸಿರು ಬಿಟ್ಟಿದ್ದಾರೆ. ‘ಸಲ್ಮಾನ್​ ಖಾನ್​ಗೆ ಬೆಡ್​ ರೂಮ್​ನಲ್ಲಿಯೇ ಹಾವು ಕಚ್ಚಿತ್ತು. ಚಿತ್ರೀಕರಣ ಮುಗಿಸಿಕೊಂಡ ಬಂದು ಬೆಡ್​ ರೂಮ್​ಗೆ ತೆರಳಿದಾಗ ಈ ಘಟನೆ ನಡೆಯಿತು. ಈಗ ಸಲ್ಮಾನ್​ ಆರೋಗ್ಯ ಚೆನ್ನಾಗಿದೆ. ಫ್ಯಾನ್ಸ್​ ಆತಂಕ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಇಂಥ ಕಡೆಗಳಲ್ಲಿ ಈ ರೀತಿಯ ಹಾವುಗಳು ಕಾಣಿಸಿಕೊಳ್ಳುವುದು ಸಹಜ’ ಎಂದು ಸಲೀಮ್​ ಖಾನ್​ ಹೇಳಿದ್ದಾರೆ.

ಮಹಾರಾಷ್ಟ್ರದ ರಾಯಘಡ್​ ಜಿಲ್ಲೆಯಲ್ಲಿರುವ ಪನ್ವೇಲ್​ನಲ್ಲಿ ಸಲ್ಮಾನ್​ ಖಾನ್​ ಅವರು ಫಾರ್ಮ್​ಹೌಸ್​ ಹೊಂದಿದ್ದಾರೆ. ಶೂಟಿಂಗ್​ ಇಲ್ಲದಿರುವಾಗ ಅವರು ಹೆಚ್ಚಾಗಿ ತಮ್ಮ ಫಾರ್ಮ್​ಹೌಸ್​ನಲ್ಲಿಯೇ ಕಾಲ ಕಳೆಯುತ್ತಾರೆ. ಮೊದಲ ಬಾರಿ ಲಾಕ್​ಡೌನ್​ ಆದಾಗಲೂ ಅವರು ಈ ಫಾರ್ಮ್​ಹೌಸ್​ನಲ್ಲಿ ವಾಸವಾಗಿದ್ದರು. ಶನಿವಾರ (ಡಿ.25) ಕೂಡ ಸಲ್ಲು ಅಲ್ಲಿದ್ದರು.

ಇಂದು (ಡಿ.27) ಸಲ್ಮಾನ್​ ಖಾನ್​ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಆ ಪ್ರಯುಕ್ತ ಶನಿವಾರ ಸಂಜೆಯೇ ಅವರ ಫಾರ್ಮ್​ಹೌಸ್​ಗೆ ಅತಿಥಿಗಳು ತೆರಳಿದ್ದಾರೆ. ಅದರ ಕೆಲವು ಫೋಟೋಗಳು ಕೂಡ ವೈರಲ್​ ಆಗಿವೆ. ಬರ್ತ್​ಡೇ ಸಂಭ್ರಮಕ್ಕಾಗಿ ಇಡೀ ಫಾರ್ಮ್​ಹೌಸ್​ ಅನ್ನು ಸಿಂಗರಿಸಲಾಗಿದೆ. ಸಲ್ಲು ಆಪ್ತರು ಈ ಪಾರ್ಟಿಯಲ್ಲಿ ಭಾಗಿ ಆಗಿದ್ದಾರೆ.

ಇದನ್ನೂ ಓದಿ:

‘ನಾನು ದೊಡ್ಡವನಾದ್ಮೇಲೆ ರಾಮ್​ ಚರಣ್​, ಜ್ಯೂ. ಎನ್​ಟಿಆರ್​ ರೀತಿ ಡ್ಯಾನ್ಸ್​ ಮಾಡ್ತೀನಿ’: ಸಲ್ಮಾನ್​ ಖಾನ್​

ಶರ್ಟ್​ ಬಟನ್​ ಹಾಕಿಕೊಳ್ಳಲು ಸಲ್ಲುಗೆ ಬೇಕಾಯ್ತು ಆಲಿಯಾ ಭಟ್​ ಸಹಾಯ; ವಿಡಿಯೋ ವೈರಲ್​

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ