AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಿನ ದಿನಗಳನ್ನು ನೆನಪಿಸಿಕೊಂಡ ಬಾಲಿವುಡ್ ನಟ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಅವರು "ಡಬಂಗ್ ಬಿರಿಯಾನಿ"ಯಲ್ಲಿ ತಮ್ಮ ಜೈಲು ಅನುಭವವನ್ನು ಹಂಚಿಕೊಂಡಿದ್ದಾರೆ. ಜೈಲಿನಲ್ಲಿ ಅವರು ತೀವ್ರ ನಿದ್ದೆಯ ಕೊರತೆಯನ್ನು ಎದುರಿಸಿದರು ಮತ್ತು ಕೆಲಸದ ಒತ್ತಡವನ್ನು ನಿಭಾಯಿಸುವಲ್ಲಿ ತೊಂದರೆ ಅನುಭವಿಸಿದರು. ಕೆಲಸ ಮತ್ತು ವೈಯಕ್ತಿಕ ಜೀವನದ ನಡುವಿನ ಸಮತೋಲನದ ಪ್ರಾಮುಖ್ಯತೆಯನ್ನು ಅವರು ಒತ್ತಿ ಹೇಳಿದ್ದಾರೆ. ಅವರ ಜೈಲು ಶಿಕ್ಷೆ ಮತ್ತು ಅದರ ಪರಿಣಾಮಗಳ ಬಗ್ಗೆಯೂ ಚರ್ಚಿಸಲಾಗಿದೆ.

ಜೈಲಿನ ದಿನಗಳನ್ನು ನೆನಪಿಸಿಕೊಂಡ ಬಾಲಿವುಡ್ ನಟ ಸಲ್ಮಾನ್ ಖಾನ್
ಸಲ್ಮಾನ್
ರಾಜೇಶ್ ದುಗ್ಗುಮನೆ
|

Updated on: Feb 10, 2025 | 9:07 AM

Share

ನಟ ಸಲ್ಮಾನ್ ಖಾನ್ ಮೇಲೆ ಹಲವು ಕೇಸ್​ಗಳು ಇವೆ. ಇವರ ಪೈಕಿ ಕೆಲವು ಕೇಸ್​​ಗಳಲ್ಲಿ ಅವರು ಜೈಲಿಗೆ ಹೋಗಿ ಬಂದಿದ್ದಾರೆ. ಸದಾ ಕೆಲಸದಲ್ಲಿ ಬ್ಯುಸಿ ಇರೋ ಅವರು ಏಕಾ ಏಕಿ ಜೈಲಿನಲ್ಲಿ ಇರಬೇಕಾದ ಪರಿಸ್ಥಿತಿ ಬಂದಾಗ ಅದಕ್ಕೆ ಒಗ್ಗಿಕೊಲ್ಳೋಕೆ ಆಗಲಿಲ್ಲ. ಈ ಬಗ್ಗೆ ಅವರು ‘ದಂಬ್ ಬಿರಿಯಾನಿ’ಯಲ್ಲಿ ಭಾಗಿ ಆಗಿದ್ದಾರೆ. ಅಳಿಯ ಅರ್ಹಾನ್ ಖಾನ್ ಅವರು ಇದನ್ನು ಹೋಸ್ಟ್​ ಮಾಡಿದ್ದಾರೆ.

ಜೈಲಿನಲ್ಲಿ ಯಾವ ರೀತಿಯ ಕ್ಷಣಗಳು ಇದ್ದವು ಎಂದು ಸಲ್ಮಾನ್ ಖಾನ್ ಹೇಳಿದ್ದಾರೆ. ‘ನಾನು ಸುಸ್ತಾಗಿ ಹೋಗುತ್ತಿದ್ದೆ. ಆದರೆ, ಎದ್ದೇಳಿ ಕೆಲಸ ಮಾಡಲೇಬೇಕು ಎಂದು ಎಲ್ಲರೂ ಹೇಳುತ್ತಿದ್ದರು. ಕಷ್ಟಪಟ್ಟು ಕೆಲಸ ಮಾಡಿದರೆ ನಿದ್ದೆ ತಾನಾಗೇ ಬರುತ್ತದೆ ಎನ್ನುತ್ತಿದ್ದರು. ಇದೆಲ್ಲ ನನಗೆ ಅರ್ಥ ಆಗುತ್ತಾ ಇರಲಿಲ್ಲ. ನಾನು ನಿತ್ಯ ಒಂದರಿಂದ ಎರಡು ಗಂಟೆ ನಿದ್ದೆ ಮಾಡುತ್ತಿದ್ದೆ. ತಿಂಗಳಿಗೆ ಒಮ್ಮೆ ಏಳು ಗಂಟೆ ಮಲಗುತ್ತಿದ್ದೆ’ ಎಂದಿದ್ದಾರೆ ಸಲ್ಮಾನ್ ಖಾನ್.

‘ಸಿನಿಮಾ ಶೂಟ್ ಮಧ್ಯೆ ಐದು ನಿಮಿಷ ಗ್ಯಾಪ್ ಪಡೆದುಕೊಳ್ಳುತ್ತಿದ್ದೆ. ನಾನು ಕುರ್ಚಿ ಮೇಲೆ ಮಲಗುತ್ತಿದ್ದೆ. ಇಲ್ಲಿ ನಾನು ಏನು ಬೇಕಾದರೂ ಮಾಡಲು ಸಿದ್ಧನಿದ್ದೆ. ನಾನು ಜೈಲಿನಲ್ಲಿದ್ದಾಗ ಕೇವಲ ನಿದ್ದೆ ಮಾತ್ರ ಮಾಡುತ್ತಿದ್ದೆ ಅದನ್ನು ಬಿಟ್ಟು ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ. ನಿಮ್ಮ ಕೆಲಸ ಅಥವಾ ಕುಟುಂಬದ ವಿಷಯಕ್ಕೆ ಬಂದಾಗ, ನೀವು ನಿರಂತರವಾಗಿ ಮಾಡಬೇಕಾದ ಪ್ರಯತ್ನಗಳು ಹಲವು ಇರುತ್ತವೆ. ನೀವು ಸ್ನೇಹಿತರು ಮತ್ತು ಕುಟುಂಬ ಮತ್ತು ಕೆಲಸಕ್ಕಾಗಿ ಯಾವಾಗಲೂ ಇರಬೇಕಾಗುತ್ತದೆ’ ಎಂದಿದ್ದಾರೆ ಅವರು.

ಸಲ್ಮಾನ್ ಖಾನ್ ಅವರು 1998ರಲ್ಲಿ ನಡೆದ ಕೃಷ್ಣಮೃಗ ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದರು. 2006ರಲ್ಲಿ ಅವರಿಗೆ ಕೆಳಹಂತದ ಕೋರ್ಟ್ ​ ಐದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಆ ಬಳಿಕ ಕೆಲವೇ ದಿನಗಳಲ್ಲಿ ಜಾಮೀನು ಪಡೆದು ಅವರು ಹೊರ ಬಂದರು.

ಇದನ್ನೂ ಓದಿ: ಸಲ್ಮಾನ್ ಖಾನ್ ಸಹೋದರಿಗೆ ರಸ್ತೆ ಅಪಘಾತ; ಈಗ ಹೇಗಿದೆ ಪರಿಸ್ಥಿತಿ?

ಸಲ್ಮಾನ್ ಖಾನ್ ಅವರು ಸದ್ಯ ಎಆರ್ ಮುರುಗದಾಸ್ ನಿರ್ದೇಶನದ ‘ಸಿಖಂದರ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್​ಗೆ ಜೊತೆಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಈ ವರ್ಷ ಈದ್ ಪ್ರಯುಕ್ತ ಸಿನಿಮಾ ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!