AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮದುವೆ ಮಾಡಿಕೊಳ್ಳಿ: 58ರ ಸಲ್ಮಾನ್ ಖಾನ್​ಗೆ 25ರ ಸುಂದರಿ ಪ್ರಪೋಸ್; ‘ನೋ’ ಎಂದ ಸಲ್ಲು

ಸಲ್ಮಾನ್​ ಖಾನ್​ ಅವರಿಗೆ 58 ವರ್ಷ ಆಗಿದ್ದರೂ ಕೂಡ ಮದುವೆ ಆಗಿಲ್ಲ. ಈಗ ಅವರಿಗೆ ಮದುವೆ ಪ್ರಪೋಸ್ ಮಾಡಲಾಗಿದೆ. ಆದರೆ ಸದ್ಯಕ್ಕಂತೂ ಸಲ್ಮಾನ್ ಖಾನ್ ಅವರು ಮದುವೆಯ ಬಗ್ಗೆ ಯೋಚಿಸಿಲ್ಲ. ಹಾಗಾಗಿ ಅವರು ಮದುವೆ ಪ್ರಪೋಸ್​ ತಿರಸ್ಕರಿಸಿದ್ದಾರೆ. ‘ಬಿಗ್ ಬಾಸ್​ 18’ ಶೋನಲ್ಲಿ ಈ ಪ್ರಸಂಗ ನಡೆದಿದೆ.

ನನ್ನ ಮದುವೆ ಮಾಡಿಕೊಳ್ಳಿ: 58ರ ಸಲ್ಮಾನ್ ಖಾನ್​ಗೆ 25ರ ಸುಂದರಿ ಪ್ರಪೋಸ್; ‘ನೋ’ ಎಂದ ಸಲ್ಲು
ಚಾಹತ್ ಪಾಂಡೆ, ಸಲ್ಮಾನ್​ ಖಾನ್
ಮದನ್​ ಕುಮಾರ್​
|

Updated on: Oct 23, 2024 | 4:51 PM

Share

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಈಗ 58 ವರ್ಷ ವಯಸ್ಸು. ಕೆಲವು ನಟಿಯರ ಜೊತೆ ಅವರಿಗೆ ಈ ಮೊದಲು ಪ್ರೀತಿ ಚಿಗುರಿತ್ತು. ಆದರೆ ಮದುವೆ ಆಗಲೇ ಇಲ್ಲ. ಈಗಲೂ ಸಲ್ಮಾನ್ ಖಾನ್ ಅವರಿಗೆ ಮದುವೆ ಬಗ್ಗೆ ಪದೇ ಪದೇ ಪ್ರಶ್ನೆ ಎದುರಾಗುತ್ತಲೇ ಇದೆ. ಸದ್ಯಕ್ಕಂತಲೂ ಸಿಂಗಲ್ ಆಗಿರುವ ಅವರಿಗೆ 25ರ ಪ್ರಾಯದ ಸುಂದರಿಯೊಬ್ಬರು ಪ್ರಪೋಸ್ ಮಾಡಿದ್ದಾರೆ. ಅದು ಕೂಡ ಬಿಗ್ ಬಾಸ್ ವೇದಿಕೆಯಲ್ಲಿ. ಆದರೆ ನಟಿ ಮಾಡಿದ ಪ್ರಪೋಸ್​ ಅನ್ನು ಸಲ್ಮಾನ್​ ಖಾನ್ ರಿಜೆಕ್ಟ್ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಹಿಂದಿ ಕಿರುತೆರೆಯಲ್ಲಿ ನಟಿ ಚಾಹತ್ ಪಾಂಡೆ ಅವರು ಖ್ಯಾತಿ ಗಳಿಸಿದ್ದಾರೆ. ಈಗ ಅವರು ‘ಬಿಗ್ ಬಾಸ್​ 18’ ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಇತ್ತೀಚೆಗಿನ ಸಂಚಿಕೆಯಲ್ಲಿ ಸಲ್ಮಾನ್​ ಖಾನ್​ ಅವರು ‘ನಿಮಗೆ ಯಾವ ರೀತಿಯ ಹುಡುಗ ಬೇಕು’ ಎಂದು ಚಾಹತ್ ಪಾಂಡೆಯನ್ನು ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಚಾಹತ್ ಅವರು, ‘ಕರಣ್ ವೀರ್ ಮೆಹ್ತಾ ರೀತಿ ಜಿಮ್​ಗೆ ಹೋಗಿ ತಮ್ಮ ಆರೋಗ್ಯ ಕಾಪಾಡಿಕೊಳ್ಳುವವರು, ಅವಿನಾಶ್ ಮಿಶ್ರಾ ರೀತಿ ಡ್ಯಾನ್ಸ್ ಮಾಡುವವರು, ವಿವಿಯನ್ ಡಿಸೇನಾ ರೀತಿ ಹೇರ್​ಸ್ಟೈಲ್ ಇರುವವರು ಬೇಕು’ ಎಂದು ಹೇಳಿದ್ದಾರೆ.

‘ಸರ್ ನೀವೇ ನನ್ನ ಮದುವೆ ಮಾಡಿಕೊಳ್ಳಿ’ ಎಂದು ಸಲ್ಮಾನ್ ಖಾನ್​ಗೆ ಚಾಹತ್ ಹೇಳಿದ್ದಾರೆ. ಆದರೆ ನಟಿಯ ಕಡೆಯಿಂದ ಬಂದ ಈ ಮದುವೆ ಪ್ರಪೋಸ್ ಅನ್ನು ಸಲ್ಮಾನ್​ ಖಾನ್​ ಅವರು ಒಪ್ಪಿಕೊಂಡಿಲ್ಲ. ‘ನೀವು ಹೇಳಿದ ಯಾವುದೇ ಗುಣಗಳು ನನ್ನಲ್ಲಿ ಇಲ್ಲ’ ಎಂದು ಸಲ್ಮಾನ್​ ಖಾನ್​ ಹೇಳಿದ್ದಾರೆ. ಆ ಮೂಲಕ ಅವರು ತಮಗೆ ಚಾಹತ್ ಪಾಂಡೆಯನ್ನು ಮದುವೆ ಆಗುವ ಆಸೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಜೀವ ಬೆದರಿಕೆ ನಡುವೆಯೂ ‘ಸಿಂಘಂ ಅಗೇನ್’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಅವರ ಆಪ್ತ ಗೆಳೆಯ ಬಾಬಾ ಸಿದ್ಧಿಕಿ ಅವರನ್ನು ಕೆಲವೇ ದಿನಗಳ ಹಿಂದೆ ಗುಂಡಿಕ್ಕಿ ಸಾಯಿಸಲಾಯಿತು. ಅಲ್ಲದೇ ಸಲ್ಮಾನ್​ ಖಾನ್​ ಅವರಿಗೆ ಸಹಾಯ ಮಾಡುವ ಎಲ್ಲರಿಗೂ ಹಂತಕರಿಂದ ಬೆದರಿಕೆ ಇದೆ. ಸ್ವತಃ ಸಲ್ಮಾನ್ ಖಾನ್​ಗೂ ಜೀವ ಬೆದರಿಕೆ ಹಾಕಲಾಗಿದೆ. ಅದರ ನಡುವೆಯೂ ಅವರು ಸಿನಿಮಾ ಮತ್ತು ಬಿಗ್ ಬಾಸ್ ಶೂಟಿಂಗ್​ನಲ್ಲಿ ಭಾಗಿ ಆಗಿದ್ದಾರೆ. ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ