AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವು ಮುಗಿದು ಹೋದ ದಿನಗಳು, ಆ ಬಗ್ಗೆ ಯೋಚಿಸಲ್ಲ’; ನೇರ ಮಾತಲ್ಲಿ ಹೇಳಿದ ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಸಲ್ಮಾನ್ ನಿಮಾಗಳು ಭರ್ಜರಿ ಬಿಸ್ನೆಸ್ ಮಾಡುತ್ತವೆ. ಅವರನ್ನು ಎದುರು ಹಾಕಿಕೊಂಡು ಇಂಡಸ್ಟ್ರಿಯಲ್ಲಿ ಮುಂದುವರಿಯೋದು ಅಷ್ಟು ಸುಲಭವಿಲ್ಲ. ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.

‘ಅವು ಮುಗಿದು ಹೋದ ದಿನಗಳು, ಆ ಬಗ್ಗೆ ಯೋಚಿಸಲ್ಲ’; ನೇರ ಮಾತಲ್ಲಿ ಹೇಳಿದ ಸಲ್ಮಾನ್ ಖಾನ್
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
|

Updated on: Mar 12, 2024 | 10:18 AM

Share

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರು ಆಗಾಗ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಅವರು ಈ ಮೊದಲು ಸಿನಿಮಾ ಜೊತೆ ಕ್ರಿಕೆಟ್​ ಕೂಡ ಆಡುತ್ತಿದ್ದರು. ಆದರೆ, ಈಗ ಅವರು ಕ್ರಿಕೆಟ್ ಆಡುವುದರಿಂದ ದೂರವೇ ಇದ್ದಾರೆ. ಸದ್ಯ ಅವರು ‘ಸೆಲೆಬ್ರಿಟಿ ಕ್ರಿಕೆಟ್ ಲೀಗ್​’ನಲ್ಲಿ ಸಹೋದರ ಸೋಹೈಲ್ ಖಾನ್ ತಂಡ ‘ಮುಂಬೈ ಹೀರೋಸ್’ನ ಬೆಂಬಲಿಸುತ್ತಿದ್ದಾರೆ. ಈಗ ಸಲ್ಮಾನ್ ಮತ್ತೆ ಕ್ರಿಕೆಟ್ ಆಡುವ ವಿಚಾರದ ಕುರಿತು ಮಾತನಾಡಿದ್ದಾರೆ.

ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಕಳೆದ ತಿಂಗಳು ದುಬೈನಲ್ಲಿ ಆರಂಭ ಆಗಿದೆ. ಹೈದರಾಬಾದ್​ನಲ್ಲಿ ಸದ್ಯ ಮ್ಯಾಚ್​ಗಳು ನಡೆಯುತ್ತಿವೆ. ಕನ್ನಡ, ಹಿಂದಿ, ತಮಿಳು ಮೊದಲಾದ ಚಿತ್ರರಂಗದ ಕಲಾವಿದರು ಆಟ ಆಡುತ್ತಿದ್ದಾರೆ. ಕನ್ನಡದ ‘ಕರ್ನಾಟಕ ಬುಲ್ಡೋಜರ್ಸ್’ ಉತ್ತಮ ಪ್ರದರ್ಶನ ನೀಡುತ್ತಿದೆ. ಸಲ್ಮಾನ್ ಖಾನ್ ಅವರು ಕ್ರಿಕೆಟ್ ಆಡುವುದರಿಂದ ದೂರವೇ ಇದ್ದಾರೆ. ಹೀಗೇಕೆ ಎಂಬ ಬಗ್ಗೆ ಅವರು ಮಾತನಾಡಿದ್ದಾರೆ. ‘ಕ್ರಿಕೆಟ್ ಆಡುವ ದಿನಗಳು ಮುಗಿದು ಹೋಗಿವೆ. ನಾನು ಕ್ರಿಕೆಟ್ ಆಡುತ್ತಿದ್ದೇ ಹೌದಾದರೆ ಕಾಮೆಂಟರಿ ಕೂಡ ಮಾಡುತ್ತಿರಲಿಲ್ಲ. ಆ ವಯಸ್ಸು ಕೂಡ ಮುಗಿದಿದೆ. ನಿಮ್ಮ ಆಶೀರ್ವಾದದಿಂದ ಸಿನಿಮಾ ರಂಗದಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಅಭಿಮಾನಿಗಳಿಗೆ ಧನ್ಯವಾದ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಸಲ್ಮಾನ್​ ಖಾನ್​ಗೆ ಕತ್ರಿನಾ ಮೇಲಿರೋ ಪ್ರೀತಿ ಎಂಥದ್ದು? ಈ ಘಟನೆಯೇ ಸಾಕ್ಷಿ

ಸಲ್ಮಾನ್ ಖಾನ್ ಅವರು ಚಿತ್ರರಂಗದಲ್ಲಿ ಸಾಕಷ್ಟು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ. ಅವರ ಸಿನಿಮಾಗಳು ಭರ್ಜರಿ ಬಿಸ್ನೆಸ್ ಮಾಡುತ್ತವೆ. ಅವರನ್ನು ಎದುರು ಹಾಕಿಕೊಂಡು ಇಂಡಸ್ಟ್ರಿಯಲ್ಲಿ ಮುಂದುವರಿಯೋದು ಅಷ್ಟು ಸುಲಭವಿಲ್ಲ. ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಆದರೆ, ಸಿನಿಮಾ ದೊಡ್ಡಮಟ್ಟದಲ್ಲಿ ಕಮಾಯಿ ಮಾಡಿಲ್ಲ.

ಇದನ್ನೂ ಓದಿ: ಸಲ್ಮಾನ್ ಖಾನ್ ದಿನದ ಸಂಪಾದನೆ ಕೋಟಿ ಕೋಟಿ; ಇದರಲ್ಲಿ ದಾನ ಮಾಡೋದು ಎಷ್ಟು?

ಸಲ್ಮಾನ್ ಖಾನ್ ಅವರ ಕೈಯಲ್ಲಿ ಕೆಲವು ಸಿನಿಮಾಗಳಿವೆ. ಅವರು ಮುಂದಿನ ವರ್ಷ ‘ಶೇರ್ ಖಾನ್’ ಸಿನಿಮಾ ಮಾಡಲಿದ್ದಾರಂತೆ. ‘ಟೈಗರ್ vs ಪಠಾಣ್’ ಚಿತ್ರದ ಸ್ಕ್ರಿಪ್ಟ್ ಕೆಲಸ ಕೂಡ ನಡೆಯುತ್ತಿದೆ. 2027ರಲ್ಲಿ ಈ ಚಿತ್ರ ರಿಲೀಸ್ ಆಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು