Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ‘ತಪ್ಪೆಲ್ಲ ನನ್ನದೇ’; ಐಶ್ವರ್ಯಾ ರೈ, ಕತ್ರಿನಾ ಕೈಫ್ ವಿಚಾರದಲ್ಲಿ ಮೌನ ಮುರಿದ ಸಲ್ಮಾನ್ ಖಾನ್

ಇಂದು ನನ್ನ ಎಲ್ಲಾ ಎಕ್ಸ್​​ಗಳು ಒಳ್ಳೆಯ ಸ್ಥಾನದಲ್ಲಿದ್ದಾರೆ, ಖುಷಿಯಾಗಿದ್ದಾರೆ. ಅವರು ಇಂದು ನನ್ನ ಜೊತೆ ಇರದೇ ಇರಲು ನನ್ನ ತಪ್ಪೇ ಕಾರಣ’ ಎಂದಿದ್ದಾರೆ ಸಲ್ಲು.

Salman Khan: ‘ತಪ್ಪೆಲ್ಲ ನನ್ನದೇ’; ಐಶ್ವರ್ಯಾ ರೈ, ಕತ್ರಿನಾ ಕೈಫ್ ವಿಚಾರದಲ್ಲಿ ಮೌನ ಮುರಿದ ಸಲ್ಮಾನ್ ಖಾನ್
ಕತ್ರಿನಾ-ಸಲ್ಮಾನ್-ಐಶ್ವರ್ಯಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:May 01, 2023 | 2:45 PM

ಸಲ್ಮಾನ್ ಖಾನ್ (Salman Khan) ಅವರು ಬಾಲಿವುಡ್​ನ ಬೇಡಿಕೆಯ ಹೀರೋ. ಅವರು ಚಿತ್ರರಂಗದಲ್ಲಿ ದೊಡ್ಡ ಯಶಸ್ಸು ಕಂಡಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ. ಆದರೆ, ಸಲ್ಮಾನ್ ಖಾನ್​ಗೆ ಪ್ರೀತಿ ವಿಚಾರದಲ್ಲಿ ಯಶಸ್ಸು ಸಿಗಲೇ ಇಲ್ಲ. ಅನೇಕರನ್ನು ಸಲ್ಮಾನ್ ಅವರು ಪ್ರೀತಿಸಿದರು. ಆದರೆ, ಯಾರೂ ಮದುವೆ ಆಗಲು ಆಸಕ್ತಿ ತೋರಿಸಿಲ್ಲ. ಹೀಗೇಕೆ ಎನ್ನುವ ಪ್ರಶ್ನೆಗೆ ಸಲ್ಮಾನ್ ಖಾನ್ ಉತ್ತರ ಕೊಟ್ಟಿದ್ದು ಕಡಿಮೆ. ಈಗ ಸಲ್ಮಾನ್ ಖಾನ್ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಪ್ರೀತಿ ವಿಚಾರದಲ್ಲಿ ತಾವು ಎಡವಿದ್ದು ಎಲ್ಲಿ ಎಂಬುದನ್ನು ಹೇಳಿದ್ದಾರೆ.

ರಜತ್ ಶರ್ಮಾ ನಡೆಸಿಕೊಡುವ ‘ಆಪ್​ ಕಿ ಅದಾಲತ್​’ಗೆ ಸಲ್ಮಾನ್ ಖಾನ್ ಅತಿಥಿ ಆಗಿ ಬಂದಿದ್ದರು. ಅವರು ಜೀವನದ ಎಲ್ಲಾ ಹಂತ ಹಾಗೂ ಎಲ್ಲಾ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಹಳೆಯ ರಿಲೇಶನ್​ಶಿಪ್ ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ. ‘ಇಂದು ನನ್ನ ಎಲ್ಲಾ ಎಕ್ಸ್​​ಗಳು ಒಳ್ಳೆಯ ಸ್ಥಾನದಲ್ಲಿದ್ದಾರೆ, ಖುಷಿಯಾಗಿದ್ದಾರೆ. ಅವರು ಇಂದು ನನ್ನ ಜೊತೆ ಇರದೇ ಇರಲು ನನ್ನ ತಪ್ಪೇ ಕಾರಣ’ ಎಂದಿದ್ದಾರೆ ಸಲ್ಲು.

‘ಪ್ರೀತಿಯಲ್ಲಿ ನಾನು ದುರಾದೃಷ್ಟವಂತ. ಎಲ್ಲರೂ ಒಳ್ಳೆಯವರಾಗಿದ್ದರು. ಆದರೆ, ತಪ್ಪು ನನ್ನದೇ. ಮೊದಲ ವ್ಯಕ್ತಿ ಬಿಟ್ಟು ಹೋದಾಗ ತಪ್ಪು ಅವರದ್ದು ಅನಿಸುತ್ತದೆ. ಇದು ಪದೇಪದೇ ರಿಪೀಟ್ ಆದಾಗ ಅನುಮಾನ ಬರುತ್ತದೆ. ತಪ್ಪು ಅವರದ್ದೋ ಅಥವಾ ನನ್ನದೋ ಎನ್ನುವ ಪ್ರಶ್ನೆ ಮೂಡುತ್ತದೆ. ನನ್ನ ಜೀವನದಲ್ಲಿ ವಿಶೇಷವಾದ ಯಾರಾದರೂ ಬರಬಹುದು ಎಂಬ ಭರವಸೆಯನ್ನು ಹೊಂದಿದ್ದೇನೆ’ ಎನ್ನುತ್ತಾರೆ ಸಲ್ಮಾನ್ ಖಾನ್.

‘ಹೆಚ್ಚೆಚ್ಚು ಮಂದಿ ನಮ್ಮನ್ನು ಬಿಟ್ಟು ಹೋದರು ಎಂದರೆ ಆಗ ತಪ್ಪು ನಮ್ಮದೇ ಅನ್ನೋದು ಖಚಿತವಾಗುತ್ತದೆ. ಅವರಲ್ಲಿ ಯಾವುದೇ ತಪ್ಪಿರಲಿಲ್ಲ. ತಪ್ಪೆಲ್ಲ ನನ್ನದೇ. ಅವರು ಅಂದುಕೊಂಡ ರೀತಿಯ ಜೀವನ, ಖುಷಿಯನ್ನು ನನಗೆ ನೀಡಲು ಆಗದಿದ್ದರೆ ಎನ್ನುವ ಭಯ ಇದ್ದೇ ಇತ್ತು. ನನ್ನನ್ನು ಬಿಟ್ಟು ಹೋದ ಎಲ್ಲರೂ ಖುಷಿಯಿಂದ ಇದ್ದಾರೆ’ ಎಂದಿದ್ದಾರೆ.  ಸಲ್ಮಾನ್ ಖಾನ್ ಕತ್ರಿನಾ ಕೈಫ್, ಐಶ್ವರ್ಯಾ ರೈ ಮೊದಲಾದವರ ಜೊತೆ ರಿಲೇಶನ್​ಶಿಪ್​ನಲ್ಲಿದ್ದರು.

ಇದನ್ನೂ ಓದಿ: ಕುಗ್ಗಿತು ಸಲ್ಮಾನ್ ಖಾನ್ ಚಾರ್ಮ್​; ಕಳಪೆ ಕಲೆಕ್ಷನ್ ಮಾಡಿದ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ

ಸಲ್ಮಾನ್ ಖಾನ್ ಅವರು ಡ್ರೆಸ್ ವಿಚಾರವಾಗಿಯೂ ‘ಆಪ್​ ಕಿ ಅದಾಲತ್’ನಲ್ಲಿ ಮಾತನಾಡಿದ್ದರು. ‘ಒಂದು ಡೀಸೆಂಟ್​ ಸಿನಿಮಾ ಮಾಡಿದಾಗ ಇಡೀ ಕುಟುಂಬದವರು ಬಂದು ನೋಡುತ್ತಾರೆ. ಅದರಲ್ಲಿ ಯಾವುದೇ ದ್ವಂದ್ವ ನೀತಿ ಇಲ್ಲ. ಮಹಿಳೆಯ ದೇಹ ಬಹಳ ಮೌಲ್ಯಯುತವಾದ್ದದ್ದು ಅಂತ ನಾನು ಭಾವಿಸಿದ್ದೇನೆ. ಹಾಗಾಗಿ ಹೆಚ್ಚು ದೇಹ ಮುಚ್ಚಿಕೊಂಡಷ್ಟೂ ಒಳ್ಳೆಯದು ಎಂದು ನನಗೆ ಅನಿಸುತ್ತದೆ’ ಎಂದು ಸಲ್ಮಾನ್​ ಖಾನ್​ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:44 pm, Mon, 1 May 23

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ