AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಸಲ್ಮಾನ್ ಖಾನ್ ಕಾರು; ಚಾಲಕನ ಮೇಲೆ ಗರಂ

ಈ ಘಟನೆ ನಡೆದಾಗ ಸಲ್ಮಾನ್ ಖಾನ್ ಅವರು ಗರಂ ಆದರು. ಚಾಲಕನಿಗೆ ಅವರು ಗದರಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಸಲ್ಮಾನ್ ಖಾನ್ ಅವರ ನಡವಳಿಕೆಯನ್ನು ಕಂಡು ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ಸಲ್ಮಾನ್ ಖಾನ್ ಕೋಪಿಷ್ಟ ಹಾಗೂ ಅಹಂಕಾರಿ’ ಎಂದು ಕೆಲವರು ಕಮೆಂಟ್ ಮಾಡುತ್ತಿದ್ದಾರೆ.

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಸಲ್ಮಾನ್ ಖಾನ್ ಕಾರು; ಚಾಲಕನ ಮೇಲೆ ಗರಂ
Salman Khan
ಮದನ್​ ಕುಮಾರ್​
|

Updated on: Sep 18, 2026 | 7:06 PM

Share

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಮುಂಬೈನಲ್ಲಿ ಗಣೇಶೋತ್ಸವದ ಅಂಗವಾಗಿ ರಾಜಕಾರಣಿ ಆಶಿಶ್ ಶೆಲಾರ್ ಅವರ ನಿವಾಸಕ್ಕೆ ಗಣಪತಿ ದರ್ಶನಕ್ಕಾಗಿ ತೆರಳಿದ್ದ ವೇಳೆ, ಅಭಿಮಾನಿಗಳ ನೂಕುನುಗ್ಗಲು ಉಂಟಾಗಿ ವಿಕೋಪಕ್ಕೆ ತಿರುಗಿದೆ. ಈ ಸಂದರ್ಭದಲ್ಲಿ ಅಭಿಮಾನಿಯೊಬ್ಬರ ಕಾಲಿನ ಮೇಲೆ ಕಾರು ಹರಿದಿದ್ದಕ್ಕೆ ಕೋಪಗೊಂಡ ಸಲ್ಮಾನ್ ಖಾನ್ ಅವರು ತಮ್ಮ ಚಾಲಕನಿಗೆ ಗದರಿ ಪೆಟ್ಟು ನೀಡಿರುವ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗಣೇಶೋತ್ಸವದ ಕಾರ್ಯಕ್ರಮ ಮುಗಿಸಿ ಸಲ್ಮಾನ್ ಖಾನ್ ಹೊರಬರುತ್ತಿದ್ದಂತೆ, ಅವರನ್ನು ಹತ್ತಿರದಿಂದ ನೋಡಲು ಹಾಗೂ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಭದ್ರತಾ ಸಿಬ್ಬಂದಿ ಜನರನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು. ಈ ವೇಳೆ ಸಲ್ಮಾನ್ ಅವರು ತಮ್ಮ ಕಾರನ್ನು ತಲುಪುವುದೇ ದೊಡ್ಡ ಸವಾಲಾಗಿ ಪರಿಣಮಿಸಿತು. ಆರಂಭದಲ್ಲಿ ಸಲ್ಮಾನ್ ಖಾನ್ ಕೈಮುಗಿದು ದಾರಿ ಬಿಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡರು. ಆದರೆ ಪರಿಸ್ಥಿತಿ ಹದಗೆಟ್ಟಾಗ, ಭದ್ರತಾ ಸಿಬ್ಬಂದಿಯ ನೆರವಿನಿಂದ ಹೆಣಗಾಡುತ್ತಾ ಕಾರಿನೊಳಗೆ ಕುಳಿತರು.

ಚಾಲಕನಿಗೆ ಸಲ್ಮಾನ್ ಗದರಿದ್ದೇಕೆ?

ಸಲ್ಮಾನ್ ಕಾರಿನಲ್ಲಿ ಕುಳಿತ ನಂತರವೂ ಅಭಿಮಾನಿಗಳ ಗುಂಪು ಕಾರನ್ನು ಸುತ್ತುವರಿದಿತ್ತು. ಈ ಗೊಂದಲದ ನಡುವೆ ಚಾಲಕ ಕಾರನ್ನು ಮುಂದೆ ಚಲಾಯಿಸಲು ಯತ್ನಿಸಿದಾಗ, ಅಭಿಮಾನಿಯೊಬ್ಬರ ಕಾಲು ಕಾರಿನ ಚಕ್ರದ ಅಡಿಗೆ ಸಿಲುಕಿದೆ. ನೋವಿನಿಂದ ಆ ಅಭಿಮಾನಿ ಕಿರುಚಾಡಿದಾಗ ಹಾಗೂ ಅಲ್ಲಿದ್ದ ಫೋಟೋಗ್ರಾಫರ್‌ಗಳು ಕಾರನ್ನು ಸ್ವಲ್ಪ ಹಿಂದೆ ತೆಗೆಯುವಂತೆ ಕೂಗಿಕೊಂಡರು.

ಇದನ್ನು ಕಂಡು ತೀವ್ರ ಆಕ್ರೋಶಗೊಂಡ ಸಲ್ಮಾನ್ ಖಾನ್ ಅವರು ಕಾರಿನಲ್ಲೇ ಕುಳಿತು ಚಾಲಕನ ಕೈಗೆ ಹೊಡೆದು, ಗದರಿದ್ದಾರೆ. ತಕ್ಷಣವೇ ಕಾರನ್ನು ಜನರಿಂದ ದೂರ ಒಯ್ಯುವಂತೆ ಚಾಲಕನಿಗೆ ಸೂಚಿಸಿದರು. ಸಲ್ಮಾನ್ ಖಾನ್ ಅವರು ತಮ್ಮ ಚಾಲಕನಿಗೆ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಜೊತೆ ಶಿವಣ್ಣ ಸಿನಿಮಾ ಮಾಡ್ತಾರಾ? ಶಿವರಾಜ್​ಕುಮಾರ್ ಕೊಟ್ಟರು ಉತ್ತರ

ಒಂದೆಡೆ ಈ ಗೊಂದಲ ನಡೆಯುತ್ತಿದ್ದರೆ, ಇನ್ನೊಂದೆಡೆ ಸಲ್ಮಾನ್ ಖಾನ್ ಅವರ ಮಾನವೀಯತೆಯೂ ಕಂಡುಬಂತು. ನೂಕುನುಗ್ಗಲಿನ ನಡುವೆ ಸಣ್ಣ ಬಾಲಕನೊಬ್ಬ ಸಲ್ಮಾನ್ ಖಾನ್ ಅವರತ್ತ ಕೈ ಕುಲುಕಲು ಬಂದಾಗ, ಭದ್ರತಾ ಸಿಬ್ಬಂದಿ ಆತನನ್ನು ತಳ್ಳಲು ಯತ್ನಿಸಿದರು. ಇದನ್ನು ತಡೆದ ಸಲ್ಮಾನ್, ಬಾಲಕನೊಂದಿಗೆ ಹಸ್ತಲಾಘವ ಮಾಡಿ, ಆತನನ್ನು ಸುರಕ್ಷಿತವಾಗಿ ಜನಸಂದಣಿಯಿಂದ ಹೊರಗೆ ಕಳುಹಿಸಿದ ನಂತರವೇ ಕಾರು ಏರಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ