AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಖಾಸಗಿ ವಿಡಿಯೋ ವೈರಲ್; ‘ಇದಕ್ಕಿಂತ ಕೆಟ್ಟದ್ದು ಬೇರೇನೂ ಇಲ್ಲ’ ಎಂದ ಫ್ಯಾನ್ಸ್

ವೈರಲ್ ವಿಡಿಯೋದ ಸತ್ಯಾಸತ್ಯತೆಯ ಬಗ್ಗೆ ಸಲ್ಮಾನ್ ಖಾನ್ ಅಥವಾ ಅವರ ತಂಡ ಯಾವುದೇ ಹೇಳಿಕೆ ನೀಡಿಲ್ಲ. ಈ ಕ್ಲಿಪ್ ನಿಜವಾದದ್ದೇ ಅಥವಾ ಎಐ ಬಳಸಿ ಸೃಷ್ಟಿಸಲಾದ ವಿಡಿಯೋವೇ ಎಂಬ ಪ್ರಶ್ನೆ ಇದೆ. ಒಂದು ವೇಳೆ ಇದು ನಿಜವೇ ಆಗಿದ್ದಲ್ಲಿ, ಇದು ಒಬ್ಬ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ಗಡಿ ಮೀರಿದಂತೆ ಆಗುತ್ತದೆ.

ಸಲ್ಮಾನ್ ಖಾನ್ ಖಾಸಗಿ ವಿಡಿಯೋ ವೈರಲ್; ‘ಇದಕ್ಕಿಂತ ಕೆಟ್ಟದ್ದು ಬೇರೇನೂ ಇಲ್ಲ’ ಎಂದ ಫ್ಯಾನ್ಸ್
Salman Khan
ಮದನ್​ ಕುಮಾರ್​
|

Updated on: May 26, 2026 | 3:10 PM

Share

ಖ್ಯಾತ ನಟ ಸಲ್ಮಾನ್ ಖಾನ್ ಅವರನ್ನು ರಹಸ್ಯವಾಗಿ ಚಿತ್ರೀಕರಿಸಲಾದ ವಿಡಿಯೋವೊಂದು (Salman Khan Private Video) ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಇದರಿಂದ ಸೆಲೆಬ್ರಿಟಿಗಳ ಖಾಸಗಿತನ ಮತ್ತು ಭದ್ರತೆಯ ಕುರಿತು ಮತ್ತೊಮ್ಮೆ ದೊಡ್ಡ ಮಟ್ಟದ ಚರ್ಚೆ ಶುರುವಾಗಿದೆ. ಈ ಸಣ್ಣ ವಿಡಿಯೋ ಕ್ಲಿಪ್‌ನಲ್ಲಿ, ಸಲ್ಮಾನ್ ಖಾನ್ (Salman Khan) ಅವರು ತಮ್ಮ ಆಪ್ತ ಸ್ನೇಹಿತರೊಂದಿಗೆ ಊಟದ ಮೇಜಿನ ಬಳಿ ಊಟ ಮಾಡುತ್ತಿರುವುದನ್ನು ಕಾಣಬಹುದು. ವಿಡಿಯೋದ ಸ್ವರೂಪವನ್ನು ಗಮನಿಸಿದರೆ, ಇದು ಅವರಿಗೆ ತಿಳಿಯದಂತೆ ರಹಸ್ಯವಾಗಿ ಚಿತ್ರೀಕರಿಸಲಾಗಿದೆ ಎಂಬುದು ಸ್ಪಷ್ಟವಾಗುತ್ತದೆ.

ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಅಭಿಮಾನಿಗಳು ಸಲ್ಮಾನ್ ಅವರ ಸರಳತೆ ಮತ್ತು ಶಾಂತ ಸ್ವಭಾವವನ್ನು ಶ್ಲಾಘಿಸುತ್ತಿದ್ದಾರಾದರೂ, ಇನ್ನುಳಿದ ಬಹುತೇಕರು ಅವರ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ವಿಭಿನ್ನ ಕಾರಣಗಳಿಗಾಗಿ ಹಲವು ಭೂಗತ ಗ್ಯಾಂಗ್‌ಗಳ ಟಾರ್ಗೆಟ್ ಆಗಿರುವ ಸಲ್ಮಾನ್ ಖಾನ್ ಅವರ ಭದ್ರತೆ ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಸಲ್ಮಾನ್ ಖಾನ್ ಖಾಸಗಿ ವಿಡಿಯೋ:

‘ಈ ವಿಡಿಯೋ ನಿಜವಾಗಿದ್ದು, ಯಾರಾದರೂ ಇದನ್ನು ರಹಸ್ಯವಾಗಿ ರೆಕಾರ್ಡ್ ಮಾಡಿ ಲೀಕ್ ಮಾಡಿದ್ದರೆ, ಇದು ಗಂಭೀರವಾದ ಗೌಪ್ಯತೆ ಮತ್ತು ಭದ್ರತೆಯ ಉಲ್ಲಂಘನೆಯಾಗಿದೆ. ಇದಕ್ಕಿಂತ ಕೆಟ್ಟದ್ದು ಬೇರೇನೂ ಇಲ್ಲ’ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ಈ ವಿಡಿಯೋವನ್ನು ಲೀಕ್ ಮಾಡಿದವರು ಯಾರು ಮತ್ತು ಇದು ಹೇಗೆ ಹೊರಬಂತು ಎಂಬ ಪ್ರಶ್ನೆ ಉದ್ಭವ ಆಗಿದೆ.

ಈ ವಿಡಿಯೋ ಸೋರಿಕೆಯಿಂದ ಸಲ್ಮಾನ್ ಖಾನ್ ಅವರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳು ಹುಟ್ಟಿಕೊಂಡಿವೆ. ಆಶ್ಚರ್ಯದ ಸಂಗತಿಯೆಂದರೆ, ಇಂತಹ ಘಟನೆ ನಡೆಯುತ್ತಿರುವುದು ಇದೇ ಮೊದಲೇನಲ್ಲ. ಕಳೆದ ಕೆಲವು ತಿಂಗಳುಗಳಲ್ಲಿ ಸಲ್ಮಾನ್ ಖಾನ್ ಅವರ ಭದ್ರತೆಯಲ್ಲಿನ ನಿರ್ಲಕ್ಷ್ಯವನ್ನು ಎತ್ತಿ ತೋರಿಸುವ ಹಲವು ಘಟನೆಗಳು ಸರಣಿಯಾಗಿ ನಡೆದಿವೆ. ಕೆಲವೇ ದಿನಗಳ ಹಿಂದೆ, ಪಾಪರಾಜಿಗಳು ಸಲ್ಮಾನ್ ಅವರ ಕಾರನ್ನು ಆಸ್ಪತ್ರೆಯವರೆಗೂ ಹಿಂಬಾಲಿಸಿ, ಅವರ ಗಮನ ಸೆಳೆಯಲು ಜೋರಾಗಿ ಕೂಗಿದಾಗ ಸಲ್ಮಾನ್ ಖಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಮಾಯವಾಯ್ತು ಸಲ್ಮಾನ್ ಖಾನ್ ಇನ್​​ಸ್ಟಾಗ್ರಾಮ್ ಖಾತೆ; ಕಾರಣ ಏನು?

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಸಲ್ಮಾನ್ ಖಾನ್ ಅವರಿಗೆ ನಿರಂತರವಾಗಿ ಜೀವ ಬೆದರಿಕೆಗಳು ಬರುತ್ತಿರುವ ಇಂತಹ ಕಠಿಣ ಸಮಯದಲ್ಲಿ, ಈ ಘಟನೆಯನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಕೇವಲ ಸೋಶಿಯಲ್ ಮೀಡಿಯಾದಲ್ಲಿ ವೀವ್ಸ್ ಮತ್ತು ಲೈಕ್‌ಗಳಿಗಾಗಿ ಒಬ್ಬ ವ್ಯಕ್ತಿಯ ಗೌಪ್ಯತೆ ಮತ್ತು ಭದ್ರತೆಯ ಎಲ್ಲಾ ಗಡಿಗಳನ್ನು ದಾಟುವುದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ನೆಟ್ಟಿಗರು ಕೇಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಶಿವಮೊಗ್ಗ: ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಶಿವಮೊಗ್ಗ: ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಕಚ್ಚಾ ತೈಲ ಬೆಲೆ ಭಾರಿ ಕುಸಿತ! ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ
ಕಚ್ಚಾ ತೈಲ ಬೆಲೆ ಭಾರಿ ಕುಸಿತ! ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ