AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್​ ರಕ್ಷಣೆಗೆ 70 ಜನರ ನೇಮಕ; 4 ಹಂತಗಳಲ್ಲಿ ಭದ್ರತೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಲ್ಮಾನ್ ಖಾನ್​ ಅವರು ‘ಸಿಕಂದರ್’ ಸಿನಿಮಾದ ಶೂಟಿಂಗ್​ನಲ್ಲಿ ಭಾಗಿ ಆಗಿದ್ದು, ಅವರ ರಕ್ಷಣೆಗೆ ಅಂದಾಜು 70 ಜನರನ್ನು ನೇಮಿಸಲಾಗಿದೆ. ಒಟ್ಟು ನಾಲ್ಕು ಹಂತಗಳಲ್ಲಿ ಅವರಿಗೆ ಭದ್ರತೆ ನೀಡಲಾಗಿದೆ. ಸಿನಿಮಾ ತಂಡ ಬಹಳ ಎಚ್ಚರಿಕೆ ವಹಿಸುತ್ತಿದೆ.

ಸಲ್ಮಾನ್ ಖಾನ್​ ರಕ್ಷಣೆಗೆ 70 ಜನರ ನೇಮಕ; 4 ಹಂತಗಳಲ್ಲಿ ಭದ್ರತೆ
ಸಲ್ಮಾನ್ ಖಾನ್
ಮದನ್​ ಕುಮಾರ್​
|

Updated on: Nov 08, 2024 | 5:03 PM

Share

ಕೆಲವು ದಿನಗಳ ಹಿಂದೆ ಸಲ್ಮಾನ್ ಖಾನ್ ಅವರ ಆಪ್ತ ಬಾಬಾ ಸಿದ್ಧಿಕಿ ಹತ್ಯೆ ಆಯಿತು. ಆ ಬಳಿಕ ಸಲ್ಮಾನ್ ಖಾನ್ ಅವರಿಗೂ ಕೊಲೆ ಬೆದರಿಕೆ ಹಾಕಲಾಯಿತು. ಈ ಕಾರಣದಿಂದ ಸಲ್ಮಾನ್ ಖಾನ್ ಅವರ ಆಪ್ತರಿಗೆ, ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಆತಂಕ ಹೆಚ್ಚಾಗಿದೆ. ಜೀವ ಬೆದರಿಕೆ ಇದೆ ಎಂದ ಮಾತ್ರಕ್ಕೆ ಸಲ್ಮಾನ್ ಖಾನ್ ಅವರು ಸುಮ್ಮನೆ ಮನೆಯಲ್ಲಿ ಕುಳಿತಿರಲು ಸಾಧ್ಯವಿಲ್ಲ. ಅವರು ಸಿನಿಮಾ ಹಾಗೂ ಬಿಗ್ ಬಾಸ್​ ಶೂಟಿಂಗ್​ನಲ್ಲಿ ಭಾಗವಹಿಸಲೇಬೇಕು. ಹಾಗಾಗಿ ಅವರ ಭದ್ರತೆಯನ್ನು ಹೆಚ್ಚು ಮಾಡಲಾಗಿದೆ. ವರದಿಗಳ ಪ್ರಕಾರ, ಒಟ್ಟು 70 ಜನರು ಸಲ್ಮಾನ್ ಖಾನ್​ ಅವರ ರಕ್ಷಣೆಗೆ ನಿಂತಿದ್ದಾರೆ.

ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಸಿನಿಮಾಗೆ ರಶ್ಮಿಕಾ ಮಂದಣ್ಣ ಅವರು ನಾಯಕಿ ಆಗಿದ್ದಾರೆ. ಖ್ಯಾತ ನಿರ್ದೇಶಕ ಮುರುಗದಾಸ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್​ ಹೇಳುತ್ತಿದ್ದಾರೆ. ಮುಂದಿನ ಹಂತದ ಚಿತ್ರೀಕರಣ ಹೈದರಾಬಾದ್​ನಲ್ಲಿ ನಡೆಯಲಿದೆ. ನಗರದಲ್ಲಿ 2 ಸೆಟ್​ ಹಾಕಲಾಗಿದೆ. ಇನ್ನುಳಿದ ಭಾಗದ ಚಿತ್ರೀಕರಣ ಖಾಸಗಿ ಹೋಟೆಲ್​ನಲ್ಲಿ ನಡೆಯಲಿದೆ. ಈ ಎಲ್ಲ ಜಾಗಗಳಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.

ಖಾಸಗಿ ಹೋಟೆಲ್​ನ ಒಂದು ಭಾಗದಲ್ಲಿ ಮಾತ್ರ ಶೂಟಿಂಗ್ ನಡೆಯಲಿದೆ. ಆದರೆ ಭದ್ರತೆಯ ದೃಷ್ಟಿಯಿಂದ ಇಡೀ ಹೋಟೆಲ್​ ಅನ್ನು ಸಲ್ಮಾನ್ ಖಾನ್ ಅವರ ಸೆಕ್ಯೂರಿಟಿ ಟೀಮ್​ ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಹೋಟೆಲ್​ಗೆ ಬರುವ ಎಲ್ಲರ ಗುರುತು ಮತ್ತು ಹಿನ್ನೆಲೆಯನ್ನು ಸೂಕ್ತವಾಗಿ ಪರಿಶೀಲಿಸಲಾಗುತ್ತದೆ. ಹೋಟೆಲ್​ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ ನಂತರ ಎರಡನೇ ಹಂತದಲ್ಲಿ ಸಲ್ಮಾನ್ ಖಾನ್ ಅವರ ಖಾಸಗಿ ಭದ್ರತಾ ತಂಡ ಕೂಡ ತಪಾಸಣೆ ಮಾಡಲಿದೆ.

ಇದನ್ನೂ ಓದಿ: ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ನಿಂದ ನಟ ಸಲ್ಮಾನ್​ ಖಾನ್​ಗೆ ಮತ್ತೆ ಕೊಲೆ ಬೆದರಿಕೆ

ಶೂಟಿಂಗ್​ ಸಂದರ್ಭದಲ್ಲಿ ಏನಾದರೂ ಅವಘಡ ಸಂಭವಿಸಿದರೆ ‘ಸಿಕಂದರ್’ ಚಿತ್ರತಂಡಕ್ಕೆ ಕಪ್ಪು ಚುಕ್ಕಿ ಆಗಲಿದೆ. ಆ ಕಾರಣದಿಂದ ಚಿತ್ರತಂಡದವರು ಹೆಚ್ಚಿನ ಜಾಗ್ರತೆ ವಹಿಸುತ್ತಿದ್ದಾರೆ. ಎನ್​ಎಸ್​ಜಿ ಕಮಾಂಡೋಗಳು, ಪೊಲೀಸ್ ಅಧಿಕಾರಿಗಳು, ಖಾಸಗಿ ಸೆಕ್ಯೂರಿಟಿ ಸಿಬ್ಬಂದಿ ಸೇರಿದಂತೆ ಒಟ್ಟು 70 ಜನರು ಸಲ್ಮಾನ್ ಖಾನ್ ಅವರ ರಕ್ಷಣೆಗೆ ನಿಂತಿದ್ದಾರೆ. ಇನ್ನು, ಸಲ್ಮಾನ್ ಖಾನ್ ಅವರ ಬಾಡಿಗಾರ್ಡ್​ ಶೇರ ಕೂಡ ಕೆಲವು ಅತ್ಯುತ್ತಮ ಬಾಡಿಗಾರ್ಡ್​ಗಳನ್ನು ಆಯ್ಕೆ ಮಾಡಿ ತಮ್ಮ ತಂಡಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಸುದ್ದಿ ಆಗಿದೆ. ಲಾರೆನ್ಸ್ ಬಿಷ್ಣೋಯ್ ಕಡೆಯಿಂದ ಸಲ್ಮಾನ್ ಖಾನ್ ಅವರಿಗೆ ಅಪಾಯ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ