AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೆಡೆ ಸೇರಿದ ಆಮಿರ್, ಸಲ್ಮಾನ್ ಹಾಗೂ ಶಾರುಖ್ ಖಾನ್; ಮುಂಜಾನೆ ನಾಲ್ಕು ಗಂಟೆವರೆಗೆ ಪಾರ್ಟಿ

ಸೆಲೆಬ್ರಿಟಿಗಳ ಮನೆಯಲ್ಲಿ ಆಗಾಗ ಪಾರ್ಟಿ ನಡೆಯುತ್ತಿರುತ್ತದೆ. ಆದರೆ, ಈ ವಿಚಾರ ಗುಟ್ಟಾಗಿ ಇಡಲಾಗುತ್ತದೆ. ಈಗ ಸಲ್ಮಾನ್ ಖಾನ್ ಆಯೋಜಿಸಿದ್ದ ಪಾರ್ಟಿ ವಿಚಾರ ಲೀಕ್ ಆಗಿದೆ.

ಒಂದೆಡೆ ಸೇರಿದ ಆಮಿರ್, ಸಲ್ಮಾನ್ ಹಾಗೂ ಶಾರುಖ್ ಖಾನ್; ಮುಂಜಾನೆ ನಾಲ್ಕು ಗಂಟೆವರೆಗೆ ಪಾರ್ಟಿ
ಶಾರುಖ್​, ಶಾರುಖ್​, ಆಮಿರ್ ಖಾನ್
ರಾಜೇಶ್ ದುಗ್ಗುಮನೆ
|

Updated on: May 26, 2023 | 8:21 AM

Share

ಆಮಿರ್ ಖಾನ್, ಸಲ್ಮಾನ್ ಖಾನ್ (Salman Khan) ಹಾಗೂ ಶಾರುಖ್ ಖಾನ್ ಬಾಲಿವುಡ್​ನ ಸಕ್ಸಸ್​ಫುಲ್ ಹೀರೋಗಳು. ಇವರ ಮಧ್ಯೆ ಆಗಾಗ ಭಿನ್ನಾಭಿಪ್ರಾಯ ಬಂದು ಒಬ್ಬರ ಮುಖ ಒಬ್ಬರು ನೋಡಿಕೊಳ್ಳದೇ ಇರುವ ಪರಿಸ್ಥಿತಿ ಬಂದಿದ್ದೂ ಇದೆ. ಆದರೆ, ಈಗ ಕಾಲ ಬದಲಾಗಿದೆ. ಮೂವರ ಮಧ್ಯೆ ಅನ್ಯೋನ್ಯತೆ ಇದೆ. ಇತ್ತೀಚೆಗೆ ಈ ಮೂವರು ಒಂದೆಡೆ ಸೇರಿದ್ದಾರೆ. ಒಟ್ಟಾಗಿ ಮೂವರು ಪಾರ್ಟಿ ಮಾಡಿದ್ದಾರೆ. ಮುಂಜಾನೆ ನಾಲ್ಕು ಗಂಟೆವರೆಗೆ ಈ ಪಾರ್ಟಿ ನಡೆದಿದೆ ಎನ್ನಲಾಗಿದೆ.

ಸೆಲೆಬ್ರಿಟಿಗಳ ಮನೆಯಲ್ಲಿ ಆಗಾಗ ಪಾರ್ಟಿ ನಡೆಯುತ್ತಿರುತ್ತದೆ. ಆದರೆ, ಈ ವಿಚಾರ ಗುಟ್ಟಾಗಿ ಇಡಲಾಗುತ್ತದೆ. ಈಗ ಸಲ್ಮಾನ್ ಖಾನ್ ಆಯೋಜಿಸಿದ್ದ ಪಾರ್ಟಿ ವಿಚಾರ ಲೀಕ್ ಆಗಿದೆ. ಮೂಲಗಳ ಪ್ರಕಾರ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದಲ್ಲಿರುವ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ನಲ್ಲಿ ಈ ಮೂವರು ಸೇರಿದ್ದಾರೆ. ಮೇ 16ರಂದು ಈ ಗೆಟ್​​ಟುಗೆದರ್ ನಡೆದಿದೆ.

ಆಮಿರ್ ಖಾನ್ ಅವರು ಈ ಪಾರ್ಟಿಗೆ ಮೊದಲು ಬಂದರು. ಸಲ್ಮಾನ್ ಖಾನ್ ಹಾಗೂ ಶಾರುಖ್ ಖಾನ್ ‘ಟೈಗರ್ 3’ ಸೆಟ್​ನಿಂದ ನೇರವಾಗಿ ಈ ಪಾರ್ಟಿಗೆ ತೆರಳಿದ್ದಾರೆ. ಈ ಪಾರ್ಟಿ ವೇಳೆ ತಮ್ಮ ವೃತ್ತಿ ಜೀವನಗಳ ಬಗ್ಗೆ ಇವರು ಚರ್ಚೆ ಮಾಡಿದ್ದಾರೆ.

ಸಲ್ಲು, ಶಾರುಖ್​ ಹಾಗೂ ಆಮಿರ್​ಗೆ ಇತ್ತೀಚಿನ ವರ್ಷಗಳಲ್ಲಿ ಸತತ ಸೋಲು ಕಾಣುತ್ತಿದ್ದರು. ಈ ಪೈಕಿ ಶಾರುಖ್ ಖಾನ್​ ‘ಟೈಗರ್’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಸಾಧಾರಣ ಗೆಲುವು ಕಂಡಿದೆ. ಆಮಿರ್ ಖಾನ್ ಅವರು ನಟನೆಯಿಂದ ಬ್ರೇಕ್ ಪಡೆದುಕೊಂಡಿದ್ದಾರೆ. ಅವರು ಸದ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

ಇದನ್ನೂ ಓದಿ: Salman Khan: ಸಲ್ಲುನ ಓಡಿ ಬಂದು ತಬ್ಬಿದ ಅಭಿಮಾನಿ; ನಟನ ರಿಯಾಕ್ಷನ್ ಹೇಗಿತ್ತು?

ರಂಜಾನ್ ಸಂದರ್ಭದಲ್ಲಿ ಆಮಿರ್ ಖಾನ್ ಹಾಗೂ ಸಲ್ಮಾನ್ ಖಾನ್ ಒಂದೆಡೆ ಸೇರಿದ್ದರು. ಈ ವೇಳೆ ಶಾರುಖ್ ಖಾನ್ ಮಿಸ್ ಆಗಿದ್ದರು. ಶಾರುಖ್ ಖಾನ್ ಮಿಸ್ಸಿಂಗ್ ಎಂದು ಅನೇಕರು ಕಮೆಂಟ್ ಮಾಡಿದ್ದರು. ಈಗ ಈ ಮೂವರು ಒಂದೆಡೆ ಸೇರಿದ್ದಾರೆ. ಈ ಫೋಟೋನ ಅವರು ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ