Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೆಡೆ ಸೇರಿದ ಆಮಿರ್, ಸಲ್ಮಾನ್ ಹಾಗೂ ಶಾರುಖ್ ಖಾನ್; ಮುಂಜಾನೆ ನಾಲ್ಕು ಗಂಟೆವರೆಗೆ ಪಾರ್ಟಿ

ಸೆಲೆಬ್ರಿಟಿಗಳ ಮನೆಯಲ್ಲಿ ಆಗಾಗ ಪಾರ್ಟಿ ನಡೆಯುತ್ತಿರುತ್ತದೆ. ಆದರೆ, ಈ ವಿಚಾರ ಗುಟ್ಟಾಗಿ ಇಡಲಾಗುತ್ತದೆ. ಈಗ ಸಲ್ಮಾನ್ ಖಾನ್ ಆಯೋಜಿಸಿದ್ದ ಪಾರ್ಟಿ ವಿಚಾರ ಲೀಕ್ ಆಗಿದೆ.

ಒಂದೆಡೆ ಸೇರಿದ ಆಮಿರ್, ಸಲ್ಮಾನ್ ಹಾಗೂ ಶಾರುಖ್ ಖಾನ್; ಮುಂಜಾನೆ ನಾಲ್ಕು ಗಂಟೆವರೆಗೆ ಪಾರ್ಟಿ
ಶಾರುಖ್​, ಶಾರುಖ್​, ಆಮಿರ್ ಖಾನ್
Follow us
ರಾಜೇಶ್ ದುಗ್ಗುಮನೆ
|

Updated on: May 26, 2023 | 8:21 AM

ಆಮಿರ್ ಖಾನ್, ಸಲ್ಮಾನ್ ಖಾನ್ (Salman Khan) ಹಾಗೂ ಶಾರುಖ್ ಖಾನ್ ಬಾಲಿವುಡ್​ನ ಸಕ್ಸಸ್​ಫುಲ್ ಹೀರೋಗಳು. ಇವರ ಮಧ್ಯೆ ಆಗಾಗ ಭಿನ್ನಾಭಿಪ್ರಾಯ ಬಂದು ಒಬ್ಬರ ಮುಖ ಒಬ್ಬರು ನೋಡಿಕೊಳ್ಳದೇ ಇರುವ ಪರಿಸ್ಥಿತಿ ಬಂದಿದ್ದೂ ಇದೆ. ಆದರೆ, ಈಗ ಕಾಲ ಬದಲಾಗಿದೆ. ಮೂವರ ಮಧ್ಯೆ ಅನ್ಯೋನ್ಯತೆ ಇದೆ. ಇತ್ತೀಚೆಗೆ ಈ ಮೂವರು ಒಂದೆಡೆ ಸೇರಿದ್ದಾರೆ. ಒಟ್ಟಾಗಿ ಮೂವರು ಪಾರ್ಟಿ ಮಾಡಿದ್ದಾರೆ. ಮುಂಜಾನೆ ನಾಲ್ಕು ಗಂಟೆವರೆಗೆ ಈ ಪಾರ್ಟಿ ನಡೆದಿದೆ ಎನ್ನಲಾಗಿದೆ.

ಸೆಲೆಬ್ರಿಟಿಗಳ ಮನೆಯಲ್ಲಿ ಆಗಾಗ ಪಾರ್ಟಿ ನಡೆಯುತ್ತಿರುತ್ತದೆ. ಆದರೆ, ಈ ವಿಚಾರ ಗುಟ್ಟಾಗಿ ಇಡಲಾಗುತ್ತದೆ. ಈಗ ಸಲ್ಮಾನ್ ಖಾನ್ ಆಯೋಜಿಸಿದ್ದ ಪಾರ್ಟಿ ವಿಚಾರ ಲೀಕ್ ಆಗಿದೆ. ಮೂಲಗಳ ಪ್ರಕಾರ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದಲ್ಲಿರುವ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ನಲ್ಲಿ ಈ ಮೂವರು ಸೇರಿದ್ದಾರೆ. ಮೇ 16ರಂದು ಈ ಗೆಟ್​​ಟುಗೆದರ್ ನಡೆದಿದೆ.

ಆಮಿರ್ ಖಾನ್ ಅವರು ಈ ಪಾರ್ಟಿಗೆ ಮೊದಲು ಬಂದರು. ಸಲ್ಮಾನ್ ಖಾನ್ ಹಾಗೂ ಶಾರುಖ್ ಖಾನ್ ‘ಟೈಗರ್ 3’ ಸೆಟ್​ನಿಂದ ನೇರವಾಗಿ ಈ ಪಾರ್ಟಿಗೆ ತೆರಳಿದ್ದಾರೆ. ಈ ಪಾರ್ಟಿ ವೇಳೆ ತಮ್ಮ ವೃತ್ತಿ ಜೀವನಗಳ ಬಗ್ಗೆ ಇವರು ಚರ್ಚೆ ಮಾಡಿದ್ದಾರೆ.

ಸಲ್ಲು, ಶಾರುಖ್​ ಹಾಗೂ ಆಮಿರ್​ಗೆ ಇತ್ತೀಚಿನ ವರ್ಷಗಳಲ್ಲಿ ಸತತ ಸೋಲು ಕಾಣುತ್ತಿದ್ದರು. ಈ ಪೈಕಿ ಶಾರುಖ್ ಖಾನ್​ ‘ಟೈಗರ್’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಸಾಧಾರಣ ಗೆಲುವು ಕಂಡಿದೆ. ಆಮಿರ್ ಖಾನ್ ಅವರು ನಟನೆಯಿಂದ ಬ್ರೇಕ್ ಪಡೆದುಕೊಂಡಿದ್ದಾರೆ. ಅವರು ಸದ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

ಇದನ್ನೂ ಓದಿ: Salman Khan: ಸಲ್ಲುನ ಓಡಿ ಬಂದು ತಬ್ಬಿದ ಅಭಿಮಾನಿ; ನಟನ ರಿಯಾಕ್ಷನ್ ಹೇಗಿತ್ತು?

ರಂಜಾನ್ ಸಂದರ್ಭದಲ್ಲಿ ಆಮಿರ್ ಖಾನ್ ಹಾಗೂ ಸಲ್ಮಾನ್ ಖಾನ್ ಒಂದೆಡೆ ಸೇರಿದ್ದರು. ಈ ವೇಳೆ ಶಾರುಖ್ ಖಾನ್ ಮಿಸ್ ಆಗಿದ್ದರು. ಶಾರುಖ್ ಖಾನ್ ಮಿಸ್ಸಿಂಗ್ ಎಂದು ಅನೇಕರು ಕಮೆಂಟ್ ಮಾಡಿದ್ದರು. ಈಗ ಈ ಮೂವರು ಒಂದೆಡೆ ಸೇರಿದ್ದಾರೆ. ಈ ಫೋಟೋನ ಅವರು ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್