AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೆಡೆ ಸೇರಿದ ಆಮಿರ್, ಸಲ್ಮಾನ್ ಹಾಗೂ ಶಾರುಖ್ ಖಾನ್; ಮುಂಜಾನೆ ನಾಲ್ಕು ಗಂಟೆವರೆಗೆ ಪಾರ್ಟಿ

ಸೆಲೆಬ್ರಿಟಿಗಳ ಮನೆಯಲ್ಲಿ ಆಗಾಗ ಪಾರ್ಟಿ ನಡೆಯುತ್ತಿರುತ್ತದೆ. ಆದರೆ, ಈ ವಿಚಾರ ಗುಟ್ಟಾಗಿ ಇಡಲಾಗುತ್ತದೆ. ಈಗ ಸಲ್ಮಾನ್ ಖಾನ್ ಆಯೋಜಿಸಿದ್ದ ಪಾರ್ಟಿ ವಿಚಾರ ಲೀಕ್ ಆಗಿದೆ.

ಒಂದೆಡೆ ಸೇರಿದ ಆಮಿರ್, ಸಲ್ಮಾನ್ ಹಾಗೂ ಶಾರುಖ್ ಖಾನ್; ಮುಂಜಾನೆ ನಾಲ್ಕು ಗಂಟೆವರೆಗೆ ಪಾರ್ಟಿ
ಶಾರುಖ್​, ಶಾರುಖ್​, ಆಮಿರ್ ಖಾನ್
ರಾಜೇಶ್ ದುಗ್ಗುಮನೆ
|

Updated on: May 26, 2023 | 8:21 AM

Share

ಆಮಿರ್ ಖಾನ್, ಸಲ್ಮಾನ್ ಖಾನ್ (Salman Khan) ಹಾಗೂ ಶಾರುಖ್ ಖಾನ್ ಬಾಲಿವುಡ್​ನ ಸಕ್ಸಸ್​ಫುಲ್ ಹೀರೋಗಳು. ಇವರ ಮಧ್ಯೆ ಆಗಾಗ ಭಿನ್ನಾಭಿಪ್ರಾಯ ಬಂದು ಒಬ್ಬರ ಮುಖ ಒಬ್ಬರು ನೋಡಿಕೊಳ್ಳದೇ ಇರುವ ಪರಿಸ್ಥಿತಿ ಬಂದಿದ್ದೂ ಇದೆ. ಆದರೆ, ಈಗ ಕಾಲ ಬದಲಾಗಿದೆ. ಮೂವರ ಮಧ್ಯೆ ಅನ್ಯೋನ್ಯತೆ ಇದೆ. ಇತ್ತೀಚೆಗೆ ಈ ಮೂವರು ಒಂದೆಡೆ ಸೇರಿದ್ದಾರೆ. ಒಟ್ಟಾಗಿ ಮೂವರು ಪಾರ್ಟಿ ಮಾಡಿದ್ದಾರೆ. ಮುಂಜಾನೆ ನಾಲ್ಕು ಗಂಟೆವರೆಗೆ ಈ ಪಾರ್ಟಿ ನಡೆದಿದೆ ಎನ್ನಲಾಗಿದೆ.

ಸೆಲೆಬ್ರಿಟಿಗಳ ಮನೆಯಲ್ಲಿ ಆಗಾಗ ಪಾರ್ಟಿ ನಡೆಯುತ್ತಿರುತ್ತದೆ. ಆದರೆ, ಈ ವಿಚಾರ ಗುಟ್ಟಾಗಿ ಇಡಲಾಗುತ್ತದೆ. ಈಗ ಸಲ್ಮಾನ್ ಖಾನ್ ಆಯೋಜಿಸಿದ್ದ ಪಾರ್ಟಿ ವಿಚಾರ ಲೀಕ್ ಆಗಿದೆ. ಮೂಲಗಳ ಪ್ರಕಾರ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದಲ್ಲಿರುವ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ನಲ್ಲಿ ಈ ಮೂವರು ಸೇರಿದ್ದಾರೆ. ಮೇ 16ರಂದು ಈ ಗೆಟ್​​ಟುಗೆದರ್ ನಡೆದಿದೆ.

ಆಮಿರ್ ಖಾನ್ ಅವರು ಈ ಪಾರ್ಟಿಗೆ ಮೊದಲು ಬಂದರು. ಸಲ್ಮಾನ್ ಖಾನ್ ಹಾಗೂ ಶಾರುಖ್ ಖಾನ್ ‘ಟೈಗರ್ 3’ ಸೆಟ್​ನಿಂದ ನೇರವಾಗಿ ಈ ಪಾರ್ಟಿಗೆ ತೆರಳಿದ್ದಾರೆ. ಈ ಪಾರ್ಟಿ ವೇಳೆ ತಮ್ಮ ವೃತ್ತಿ ಜೀವನಗಳ ಬಗ್ಗೆ ಇವರು ಚರ್ಚೆ ಮಾಡಿದ್ದಾರೆ.

ಸಲ್ಲು, ಶಾರುಖ್​ ಹಾಗೂ ಆಮಿರ್​ಗೆ ಇತ್ತೀಚಿನ ವರ್ಷಗಳಲ್ಲಿ ಸತತ ಸೋಲು ಕಾಣುತ್ತಿದ್ದರು. ಈ ಪೈಕಿ ಶಾರುಖ್ ಖಾನ್​ ‘ಟೈಗರ್’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಸಾಧಾರಣ ಗೆಲುವು ಕಂಡಿದೆ. ಆಮಿರ್ ಖಾನ್ ಅವರು ನಟನೆಯಿಂದ ಬ್ರೇಕ್ ಪಡೆದುಕೊಂಡಿದ್ದಾರೆ. ಅವರು ಸದ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

ಇದನ್ನೂ ಓದಿ: Salman Khan: ಸಲ್ಲುನ ಓಡಿ ಬಂದು ತಬ್ಬಿದ ಅಭಿಮಾನಿ; ನಟನ ರಿಯಾಕ್ಷನ್ ಹೇಗಿತ್ತು?

ರಂಜಾನ್ ಸಂದರ್ಭದಲ್ಲಿ ಆಮಿರ್ ಖಾನ್ ಹಾಗೂ ಸಲ್ಮಾನ್ ಖಾನ್ ಒಂದೆಡೆ ಸೇರಿದ್ದರು. ಈ ವೇಳೆ ಶಾರುಖ್ ಖಾನ್ ಮಿಸ್ ಆಗಿದ್ದರು. ಶಾರುಖ್ ಖಾನ್ ಮಿಸ್ಸಿಂಗ್ ಎಂದು ಅನೇಕರು ಕಮೆಂಟ್ ಮಾಡಿದ್ದರು. ಈಗ ಈ ಮೂವರು ಒಂದೆಡೆ ಸೇರಿದ್ದಾರೆ. ಈ ಫೋಟೋನ ಅವರು ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ