ಒಂದೆಡೆ ಸೇರಿದ ಆಮಿರ್, ಸಲ್ಮಾನ್ ಹಾಗೂ ಶಾರುಖ್ ಖಾನ್; ಮುಂಜಾನೆ ನಾಲ್ಕು ಗಂಟೆವರೆಗೆ ಪಾರ್ಟಿ

ಸೆಲೆಬ್ರಿಟಿಗಳ ಮನೆಯಲ್ಲಿ ಆಗಾಗ ಪಾರ್ಟಿ ನಡೆಯುತ್ತಿರುತ್ತದೆ. ಆದರೆ, ಈ ವಿಚಾರ ಗುಟ್ಟಾಗಿ ಇಡಲಾಗುತ್ತದೆ. ಈಗ ಸಲ್ಮಾನ್ ಖಾನ್ ಆಯೋಜಿಸಿದ್ದ ಪಾರ್ಟಿ ವಿಚಾರ ಲೀಕ್ ಆಗಿದೆ.

ಒಂದೆಡೆ ಸೇರಿದ ಆಮಿರ್, ಸಲ್ಮಾನ್ ಹಾಗೂ ಶಾರುಖ್ ಖಾನ್; ಮುಂಜಾನೆ ನಾಲ್ಕು ಗಂಟೆವರೆಗೆ ಪಾರ್ಟಿ
ಶಾರುಖ್​, ಶಾರುಖ್​, ಆಮಿರ್ ಖಾನ್
Follow us
|

Updated on: May 26, 2023 | 8:21 AM

ಆಮಿರ್ ಖಾನ್, ಸಲ್ಮಾನ್ ಖಾನ್ (Salman Khan) ಹಾಗೂ ಶಾರುಖ್ ಖಾನ್ ಬಾಲಿವುಡ್​ನ ಸಕ್ಸಸ್​ಫುಲ್ ಹೀರೋಗಳು. ಇವರ ಮಧ್ಯೆ ಆಗಾಗ ಭಿನ್ನಾಭಿಪ್ರಾಯ ಬಂದು ಒಬ್ಬರ ಮುಖ ಒಬ್ಬರು ನೋಡಿಕೊಳ್ಳದೇ ಇರುವ ಪರಿಸ್ಥಿತಿ ಬಂದಿದ್ದೂ ಇದೆ. ಆದರೆ, ಈಗ ಕಾಲ ಬದಲಾಗಿದೆ. ಮೂವರ ಮಧ್ಯೆ ಅನ್ಯೋನ್ಯತೆ ಇದೆ. ಇತ್ತೀಚೆಗೆ ಈ ಮೂವರು ಒಂದೆಡೆ ಸೇರಿದ್ದಾರೆ. ಒಟ್ಟಾಗಿ ಮೂವರು ಪಾರ್ಟಿ ಮಾಡಿದ್ದಾರೆ. ಮುಂಜಾನೆ ನಾಲ್ಕು ಗಂಟೆವರೆಗೆ ಈ ಪಾರ್ಟಿ ನಡೆದಿದೆ ಎನ್ನಲಾಗಿದೆ.

ಸೆಲೆಬ್ರಿಟಿಗಳ ಮನೆಯಲ್ಲಿ ಆಗಾಗ ಪಾರ್ಟಿ ನಡೆಯುತ್ತಿರುತ್ತದೆ. ಆದರೆ, ಈ ವಿಚಾರ ಗುಟ್ಟಾಗಿ ಇಡಲಾಗುತ್ತದೆ. ಈಗ ಸಲ್ಮಾನ್ ಖಾನ್ ಆಯೋಜಿಸಿದ್ದ ಪಾರ್ಟಿ ವಿಚಾರ ಲೀಕ್ ಆಗಿದೆ. ಮೂಲಗಳ ಪ್ರಕಾರ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದಲ್ಲಿರುವ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ನಲ್ಲಿ ಈ ಮೂವರು ಸೇರಿದ್ದಾರೆ. ಮೇ 16ರಂದು ಈ ಗೆಟ್​​ಟುಗೆದರ್ ನಡೆದಿದೆ.

ಆಮಿರ್ ಖಾನ್ ಅವರು ಈ ಪಾರ್ಟಿಗೆ ಮೊದಲು ಬಂದರು. ಸಲ್ಮಾನ್ ಖಾನ್ ಹಾಗೂ ಶಾರುಖ್ ಖಾನ್ ‘ಟೈಗರ್ 3’ ಸೆಟ್​ನಿಂದ ನೇರವಾಗಿ ಈ ಪಾರ್ಟಿಗೆ ತೆರಳಿದ್ದಾರೆ. ಈ ಪಾರ್ಟಿ ವೇಳೆ ತಮ್ಮ ವೃತ್ತಿ ಜೀವನಗಳ ಬಗ್ಗೆ ಇವರು ಚರ್ಚೆ ಮಾಡಿದ್ದಾರೆ.

ಸಲ್ಲು, ಶಾರುಖ್​ ಹಾಗೂ ಆಮಿರ್​ಗೆ ಇತ್ತೀಚಿನ ವರ್ಷಗಳಲ್ಲಿ ಸತತ ಸೋಲು ಕಾಣುತ್ತಿದ್ದರು. ಈ ಪೈಕಿ ಶಾರುಖ್ ಖಾನ್​ ‘ಟೈಗರ್’ ಸಿನಿಮಾ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಸಾಧಾರಣ ಗೆಲುವು ಕಂಡಿದೆ. ಆಮಿರ್ ಖಾನ್ ಅವರು ನಟನೆಯಿಂದ ಬ್ರೇಕ್ ಪಡೆದುಕೊಂಡಿದ್ದಾರೆ. ಅವರು ಸದ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

ಇದನ್ನೂ ಓದಿ: Salman Khan: ಸಲ್ಲುನ ಓಡಿ ಬಂದು ತಬ್ಬಿದ ಅಭಿಮಾನಿ; ನಟನ ರಿಯಾಕ್ಷನ್ ಹೇಗಿತ್ತು?

ರಂಜಾನ್ ಸಂದರ್ಭದಲ್ಲಿ ಆಮಿರ್ ಖಾನ್ ಹಾಗೂ ಸಲ್ಮಾನ್ ಖಾನ್ ಒಂದೆಡೆ ಸೇರಿದ್ದರು. ಈ ವೇಳೆ ಶಾರುಖ್ ಖಾನ್ ಮಿಸ್ ಆಗಿದ್ದರು. ಶಾರುಖ್ ಖಾನ್ ಮಿಸ್ಸಿಂಗ್ ಎಂದು ಅನೇಕರು ಕಮೆಂಟ್ ಮಾಡಿದ್ದರು. ಈಗ ಈ ಮೂವರು ಒಂದೆಡೆ ಸೇರಿದ್ದಾರೆ. ಈ ಫೋಟೋನ ಅವರು ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ