AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ತಲಾದ್ರೂ ಕಾದಿದ್ದ ಜನಸಾಗರ; ಮನೆಯಿಂದ ಹೊರಬಂದು ವಿಶ್​ ಮಾಡಿದ ಶಾರುಖ್​, ಸಲ್ಲು

ದಿನವಿಡೀ ಹಬ್ಬದ ಖುಷಿಯಲ್ಲಿ ಬ್ಯುಸಿಯಾಗಿದ್ದ ಸಲ್ಮಾನ್​ ಖಾನ್​ ಸಂಜೆ ವೇಳೆಗೆ ಮನೆಯ ಬಾಲ್ಕನಿಗೆ ಬಂದರು. ಕತ್ತಲಾಗಿದ್ದರೂ ಅಭಿಮಾನಿಗಳ ಉತ್ಸಾಹ ಕಮ್ಮಿ ಆಗಿರಲಿಲ್ಲ. ಸಾವಿರಾರು ಜನರು ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಎದುರು ಮೊಬೈಲ್​ ಫೋನ್​ ಟಾರ್ಚ್​ ಆನ್​ ಮಾಡಿ ಅಭಿಮಾನ ಪ್ರದರ್ಶಿಸಿದರು. ಎಲ್ಲರ ಕಡೆಗೂ ಕೈ ಬೀಸಿ ಸಲ್ಮಾನ್​ ಖಾನ್​ ವಿಶ್​ ಮಾಡಿದರು. ಅದೇ ರೀತಿ ಶಾರುಖ್​ ಖಾನ್ ಅವರು ಸಂಜೆ ವೇಳೆಗೆ ಪುತ್ರ ಅಬ್ರಾಮ್​ ಜತೆ ‘ಮನ್ನತ್​’ ಬಾಲ್ಕನಿಗೆ ಬಂದು ಅಭಿಮಾನಿಗಳತ್ತ ಕೈ ಬೀಸಿದರು.

ಕತ್ತಲಾದ್ರೂ ಕಾದಿದ್ದ ಜನಸಾಗರ; ಮನೆಯಿಂದ ಹೊರಬಂದು ವಿಶ್​ ಮಾಡಿದ ಶಾರುಖ್​, ಸಲ್ಲು
ಶಾರುಖ್​ ಖಾನ್​, ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: Apr 11, 2024 | 10:32 PM

Share

ಬಾಲಿವುಡ್​ನ ಸ್ಟಾರ್​ ನಟರಾದ ಆಮಿರ್​ ಖಾನ್​, ಶಾರುಖ್​ ಖಾನ್​, ಸಲ್ಮಾನ್​ ಖಾನ್​ (Salman Khan) ಮುಂತಾದವರು ಅದ್ದೂರಿಯಾಗಿ ಈದ್​ (Eid 2024) ಹಬ್ಬ ಆಚರಿಸಿದ್ದಾರೆ. ಇಂದು (ಏಪ್ರಿಲ್​ 11) ಸಿನಿಮಾ ಕೆಲಸಗಳಿಗೆ ಬಿಡುವು ನೀಡಿ ಅವರು ಹಬ್ಬದ ಆಚರಣೆಯಲ್ಲಿ ಭಾಗಿ ಆಗಿದ್ದಾರೆ. ಈ ವಿಶೇಷ ದಿನದಂದು ಅವರನ್ನು ನೋಡಬೇಕು ಎಂಬುದು ಅಭಿಮಾನಿಗಳ ಆಸೆ. ಹಾಗಾಗಿ ಸಲ್ಮಾನ್​ ಖಾನ್​ ಹಾಗೂ ಶಾರುಖ್​ ಖಾನ್​ (Shah Rukh Khan) ಅವರ ಮನೆ ಎದುರು ಅಪಾರ ಸಂಖ್ಯೆಯ ಅಭಿಮಾನಿಗಳು ಕಾದಿದ್ದರು. ಅವರಿಗೆಲ್ಲ ಶಾರುಖ್​, ಸಲ್ಲು ದರ್ಶನ​ ನೀಡಿದ್ದಾರೆ. ಮನೆಯ ಬಾಲ್ಕನಿಗೆ ಬಂದು ಈದ್​ ಶುಭಾಶಯ ತಿಳಿಸಿದ್ದಾರೆ.

ಬರ್ತ್​ಡೇ ಹಾಗೂ ಈದ್​ ರೀತಿಯ ವಿಶೇಷ ದಿನದಂದು ಈ ಸ್ಟಾರ್​ ನಟರ ಮನೆ ಎದುರು ಅಭಿಮಾನಿಗಳು ಸೇರುತ್ತಾರೆ. ಇಂದು (ಏ.11) ಕೂಡ ಹಾಗೆಯೇ ಆಯಿತು. ಬೆಳಗ್ಗೆಯಿಂದಲೇ ಸಲ್ಮಾನ್​ ಖಾನ್​ ಮತ್ತು ಶಾರುಖ್​ ಖಾನ್​ ಅವರ ಮನೆ ಮುಂದೆ ಅಪಾರ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದರು. ಕತ್ತಲಾಗುವ ತನಕವೂ ಸಲ್ಮಾನ್​ ಖಾನ್​ ಅವರ ಮನೆ ಮುಂದೆ ಅಭಿಮಾನಿಗಳು ಜಮಾಯಿಸಿದ್ದರು.

ಬೆಳಗ್ಗೆಯಿಂದ ಹಬ್ಬದ ಖುಷಿಯಲ್ಲಿ ಬ್ಯುಸಿ ಆಗಿದ್ದ ಸಲ್ಮಾನ್​ ಖಾನ್​ ಅವರು ಸಂಜೆ ನಂತರ ಮನೆಯ ಬಾಲ್ಕನಿಗೆ ಬಂದರು. ಆಗಲೂ ಅಭಿಮಾನಿಗಳ ಉತ್ಸಾಹ ಕಡಿಮೆ ಆಗಿರಲಿಲ್ಲ. ಸಾವಿರಾರು ಅಭಿಮಾನಿಗಳು ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಎದುರು ಮೊಬೈಲ್​ ಟಾರ್ಚ್​ ಆನ್​ ಮಾಡಿ ಅಭಿಮಾನ ಪ್ರದರ್ಶಿಸಿದರು. ಎಲ್ಲರ ಕಡೆಗೂ ಕೈ ಬೀಸಿ ಸಲ್ಮಾನ್​ ಖಾನ್​ ವಿಶ್​ ಮಾಡಿದರು. ಅದೇ ರೀತಿ ಶಾರುಖ್​ ಖಾನ್ ಅವರು ಸಂಜೆ ವೇಳೆಗೆ ಪುತ್ರ ಅಬ್ರಾಮ್​ ಜೊತೆ ‘ಮನ್ನತ್​’ ಬಾಲ್ಕನಿಗೆ ಬಂದು ಅಭಿಮಾನಿಗಳತ್ತ ಕೈ ಬೀಸಿದರು.

ಇದನ್ನೂ ಓದಿ: ಸಲ್ಮಾನ್​ ಖಾನ್​ ಮನೆಗೆ ಪದೇಪದೇ ಭೇಟಿ ನೀಡುತ್ತಿರುವ ಅಟ್ಲಿ; ಏನು ಸಮಾಚಾರ?

ನಡೆಯಿತು ಲಾಠಿಚಾರ್ಚ್​

ಈದ್​ ಹಬ್ಬದ ಪ್ರಯುಕ್ತ ಮಧ್ಯಾಹ್ನ ಸಲ್ಮಾನ್​ ಖಾನ್​ ಅವರ ಮನೆ ಎದುರು ಜನಸಾಗರವೇ ಸೇರಿತ್ತು. ಅದರಿಂದ ಟ್ರಾಫಿಕ್​ ಜಾಮ್​ ಉಂಟಾಗಿತ್ತು. ವಾಹನಗಳ ಸಂಚಾರಕ್ಕೆ ಅಡಚಣೆ ಆಗಿದ್ದರಿಂದ ಪೊಲೀಸರು ಲಾಠಿಚಾರ್ಜ್​ ಮಾಡುವುದು ಅನಿವಾರ್ಯ ಆಯಿತು. ಹಾಗಿದ್ದರೂ ಕೂಡ ಜನರ ಉತ್ಸಾಹ ಕುಂದಲಿಲ್ಲ. ಸಂಜೆ ತನಕ ಕಾದಿದ್ದ ಅಭಿಮಾನಿಗಳು ಸಲ್ಮಾನ್​ ಖಾನ್​ ಅವರನ್ನು ನೋಡಿಕೊಂಡು ವಾಪಸ್​ ತೆರಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್