AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಟ್ ಆ್ಯಂಡ್ ರನ್​ ಕೇಸ್​ನಿಂದ ಹೊರ ಬರಲು 25 ಕೋಟಿ ರೂ.​ ಖರ್ಚು ಮಾಡಿದ್ದ ಸಲ್ಮಾನ್ ಖಾನ್

2002ರಲ್ಲಿ ಸಲ್ಮಾನ್ ಖಾನ್​ಗೆ ಸೇರಿದ ಕಾರು ಮುಂಬೈನ ಬಾಂದ್ರಾದಲ್ಲಿ ಪಾದಾಚಾರಿ ರಸ್ತೆ ಮೇಲೆ ನುಗ್ಗಿತ್ತು. ಅಲ್ಲಿ ಮಲಗಿದ್ದ ಅನೇಕರು ಮೃತಪಟ್ಟಿದ್ದರು. ಆ ಕಾರನ್ನು ಸಲ್ಮಾನ್ ಖಾನ್ ಕುಡಿದು ಓಡಿಸುತ್ತಿದ್ದರು ಎಂಬ ಆರೋಪ ಇತ್ತು.

ಹಿಟ್ ಆ್ಯಂಡ್ ರನ್​ ಕೇಸ್​ನಿಂದ ಹೊರ ಬರಲು 25 ಕೋಟಿ ರೂ.​ ಖರ್ಚು ಮಾಡಿದ್ದ ಸಲ್ಮಾನ್ ಖಾನ್
ಸಲ್ಮಾನ್
TV9 Web
| Edited By: |

Updated on: Nov 26, 2022 | 1:50 PM

Share

ನಟ ಸಲ್ಮಾನ್ ಖಾನ್ (Salman Khan) ಅವರು ಹಲವು ವಿವಾದಗಳ ಮೂಲಕ ಸುದ್ದಿ ಆಗಿದ್ದಾರೆ. ಅದರಲ್ಲಿ ಹಿಟ್ ಆ್ಯಂಡ್ ರನ್ ಕೇಸ್ ಕೂಡ ಒಂದು. ಈ ಪ್ರಕರಣದಲ್ಲಿ ಅವರು ಸಾಕಷ್ಟು ತೊಂದರೆ ಅನುಭವಿಸಿದ್ದರು. ಸಲ್ಮಾನ್ ಖಾನ್ ಅವರಿಗೆ ಜೈಲು ಶಿಕ್ಷೆ ಕೂಡ ಆಯಿತು. ಆ ಬಳಿಕ ಮುಂಬೈ ಹೈಕೋರ್ಟ್​ನಿಂದ ಅವರಿಗೆ ರಿಲೀಫ್ ಸಿಕ್ಕಿತು. ಸಲ್ಮಾನ್ ಖಾನ್ ಅವರು ಈ ಪ್ರಕರಣದಲ್ಲಿ ಬರೋಬ್ಬರಿ 25 ಕೋಟಿ ರೂಪಾಯಿ ಖರ್ಚು ಮಾಡಿದ್ದರು. ಈ ವಿಚಾರವನ್ನು ಅವರ ತಂದೆ ಸಲಿಮ್ ಖಾನ್ (Salim Khan) ಹೇಳಿಕೊಂಡಿದ್ದರು.

2002ರಲ್ಲಿ ಸಲ್ಮಾನ್ ಖಾನ್​ಗೆ ಸೇರಿದ ಕಾರು ಮುಂಬೈನ ಬಾಂದ್ರಾದಲ್ಲಿ ಪಾದಾಚಾರಿ ರಸ್ತೆ ಮೇಲೆ ನುಗ್ಗಿತ್ತು. ಅಲ್ಲಿ ಮಲಗಿದ್ದ ಅನೇಕರು ಮೃತಪಟ್ಟಿದ್ದರು. ಆ ಕಾರನ್ನು ಸಲ್ಮಾನ್ ಖಾನ್ ಕುಡಿದು ಓಡಿಸುತ್ತಿದ್ದರು ಎಂಬ ಆರೋಪ ಇತ್ತು. ಸೆಷನ್​ ಕೋರ್ಟ್​ 2015ರಲ್ಲಿ ಸಲ್ಮಾನ್ ಖಾನ್​ಗೆ ಐದು ವರ್ಷ ಜೈಲು ಶಿಕ್ಷೆ ಘೋಷಿಸಿತು. ಕೆಲ ದಿನ ಸಲ್ಮಾನ್ ಖಾನ್ ಜೈಲಿನಲ್ಲಿ ಕಳೆದರು. ಆ ಬಳಿಕ ಡಿಸೆಂಬರ್ 2015ರಂದು ಬಾಂಬೆ ಹೈಕೋರ್ಟ್ ಸಲ್ಮಾನ್ ಖಾನ್​ಗೆ ರಿಲೀಫ್ ನೀಡಿತು.

ಈ ವೇಳೆ ಸಲಿಮ್​ ಖಾನ್ ಅವರು ಮಾತನಾಡಿದ್ದರು. ‘ಎಲ್ಲರಿಗೂ ಖುಷಿಯಾಗಿದೆ. ಸಲ್ಮಾನ್ ಖಾನ್​ಗೆ ಕ್ಲೋಸ್ ಆಗಿರುವ ಪ್ರತಿಯೊಬ್ಬರಿಗೂ ಸಂತಸ ಆಗಿದೆ. ಕೆಲ ದಿನ ಸಲ್ಮಾನ್ ಜೈಲಿನಲ್ಲಿದ್ದ. ಅವನು ಈ ಕೇಸ್​ಗಾಗಿ 20-25 ಕೋಟಿ ರೂಪಾಯಿ ಖರ್ಚು ಮಾಡಿದ್ದಾನೆ. ಇದರ ಜತೆ ಬೆಟ್ಟದಷ್ಟು ಒತ್ತಡ ಕೂಡ ಇತ್ತು’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ತೆಲುಗು ಚಿತ್ರರಂಗದಿಂದ ದೂರ ಉಳಿಯಲು ನಿರ್ಧರಿಸಿದ ಸಲ್ಮಾನ್ ಖಾನ್? ಸ್ಟಾರ್ ನಿರ್ದೇಶಕನ ಆಫರ್ ರಿಜೆಕ್ಟ್​

ಸಲ್ಮಾನ್ ಖಾನ್ ಅವರು ಕೃಷ್ಣ ಮೃಗ ಹತ್ಯೆ ಮಾಡಿದ ಪ್ರಕರಣದಲ್ಲೂ ವಿಚಾರಣೆ ಎದುರಿಸುತ್ತಿದ್ದಾರೆ. 1998ರಲ್ಲಿ ‘ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್​ಗಾಗಿ ​ರಾಜಸ್ಥಾನದ ಜೋಧ್‌ಪುರಕ್ಕೆ ತೆರಳಿದ್ದ ವೇಳೆ ಸಲ್ಮಾನ್​ ಖಾನ್ ಅವರು ಸಿನಿಮಾ ತಂಡದ ಕೆಲವರ ಜತೆ ಸಫಾರಿಗೆ ತೆರಳಿದ್ದರು. ಆ ಸಮಯದಲ್ಲಿ ಅವರು ಒಂದು ಕೃಷ್ಣ ಮೃಗವನ್ನು ಬೇಟೆಯಾಡಿದ್ದರು ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸೆಷನ್ಸ್​ ನ್ಯಾಯಾಲಯ ಅವರಿಗೆ ಐದು ವರ್ಷ ಶಿಕ್ಷೆಯನ್ನೂ ವಿಧಿಸಿತ್ತು. ಆ ಬಳಿಕ ಸಲ್ಮಾನ್ ಖಾನ್​ ಅವರು ಈ ಪ್ರಕರಣಲ್ಲಿ ಜಾಮೀನು ಪಡೆದು ಹೊರ ಬಂದಿದ್ದರು. ರಾಜಸ್ಥಾನ ಹೈಕೋರ್ಟ್​ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!