AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿರ್ ಖಾನ್ 60ನೇ ವರ್ಷದ ಬರ್ತ್​ಡೇ ಪಾರ್ಟಿಗೆ ಬಂದ ಶಾರುಖ್, ಸಲ್ಮಾನ್

ನಟ ಆಮಿರ್ ಖಾನ್ ಅವರು ಸಿನಿಮಾಗಳ ಆಯ್ಕೆಯಲ್ಲಿ ಗಡಿಬಿಡಿ ಮಾಡುತ್ತಿಲ್ಲ. ಖಾಸಗಿ ಬದುಕಿಗೆ ಅವರು ಹೆಚ್ಚು ಸಮಯ ನೀಡುತ್ತಿದ್ದಾರೆ. ಈಗ ಅವರು 60ನೇ ವರ್ಷದ ಹುಟ್ಟುಹಬ್ಬ ಆಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಬಾಂದ್ರದಲ್ಲಿರುವ ಆಮಿರ್ ಖಾನ್ ಅವರ ನಿವಾಸಕ್ಕೆ ಸಲ್ಮಾನ್ ಖಾನ್, ಶಾರುಖ್ ಖಾನ್ ಆಗಮಿಸಿದ್ದಾರೆ.

ಆಮಿರ್ ಖಾನ್ 60ನೇ ವರ್ಷದ ಬರ್ತ್​ಡೇ ಪಾರ್ಟಿಗೆ ಬಂದ ಶಾರುಖ್, ಸಲ್ಮಾನ್
Salman Khan, Shah Rukh Khan, Aamir Khan
ಮದನ್​ ಕುಮಾರ್​
|

Updated on: Mar 12, 2025 | 10:39 PM

Share

ಬಾಲಿವುಡ್ ನಟ ಆಮಿರ್ ಖಾನ್ (Aamir Khan) ಅವರು ಮಾರ್ಚ್​ 14ರಂದು 60ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಈ ವರ್ಷ 60ನೇ ಬರ್ತ್​ಡೇ ಆದ ಕಾರಣ ತುಂಬ ಸ್ಪೆಷಲ್. 2 ದಿನ ಮುಂಚಿತವಾಗಿಯೇ ಸೆಲೆಬ್ರೇಷನ್ ಶುರುವಾಗಿದೆ. ಆಮಿರ್ ಖಾನ್ ಅವರ ಮನೆಯಲ್ಲಿ ಬರ್ತ್​ಡೇ ಆಚರಣೆ ಮಾಡಲಾಗುತ್ತಿದೆ. ಚಿತ್ರರಂಗದ ಸ್ನೇಹಿತರೆಲ್ಲ ಒಂದೆಡೆ ಸೇರಿದ್ದಾರೆ. ಆಮಿರ್ ಖಾನ್ ಮನೆಗೆ ಶಾರುಖ್ ಖಾನ್, ಸಲ್ಮಾನ್ ಖಾನ್ (Salman Khan) ಅವರು ಆಗಮಿಸಿದ್ದಾರೆ. ಈ ಮೂವರು ಸೂಪರ್​ ಸ್ಟಾರ್​ಗಳು ಒಂದೆಡೆ ಸೇರುವುದು ಬಹಳ ಅಪರೂಪ. ಸೋಶಿಯಲ್ ಮೀಡಿಯಾದಲ್ಲಿ ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಮುಂಬೈನ ಬಾಂದ್ರಾದಲ್ಲಿ ಆಮಿರ್ ಖಾನ್ ಅವರ ಅಪಾರ್ಟ್​​ಮೆಂಟ್ ಇದೆ. ಇಲ್ಲಿ ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್​ಗೆ ಆಮಿರ್ ಖಾನ್ ಬರ್ತ್​ಡೇ ಪಾರ್ಟಿ ನೀಡಿದ್ದಾರೆ. ಮಾರ್ಚ್​ 14ರಂದು ಕೂಡ ಅವರು ಚಿತ್ರರಂಗದ ಸ್ನೇಹಿತರಿಗಾಗಿ ಅದ್ದೂರಿ ಔತಣಕೂಟ ಏರ್ಪಡಿಸಲಿದ್ದಾರೆ. ಆಮಿರ್ ಖಾನ್, ಸಲ್ಮಾನ್ ಖಾನ್, ಶಾರುಖ್ ಖಾನ್ ನಡುವೆ ಉತ್ತಮ ಗೆಳೆತನ ಇದೆ. ಇತ್ತೀಚೆಗೆ ಆಮಿರ್ ಖಾನ್ ಮಗನ ಸಿನಿಮಾಗೆ ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಬೆಂಬಲ ನೀಡಿದ್ದರು.

ಇದನ್ನೂ ಓದಿ
Image
ಆಮಿರ್ ಖಾನ್-ರಣ್​ಬೀರ್ ಕಪೂರ್ ಜಗಳ, ಮಧ್ಯಸ್ಥಿಕೆ ವಹಿಸಿದ ರೋಹಿತ್ ಶರ್ಮಾ
Image
ಹೊಸ ಪ್ರಾಜೆಕ್ಟ್​ಗಾಗಿ ಒಂದಾದ ಆಮಿರ್-ರಣಬೀರ್; ವಿಚಾರ ರಿವೀಲ್ ಮಾಡಿದ ಆಲಿಯಾ
Image
59ನೇ ವಯಸ್ಸಲ್ಲಿ ಬೆಂಗಳೂರು ಹುಡುಗಿ ಮೇಲೆ ಆಮಿರ್​​​ಗೆ ಲವ್? ಯಾರು ಈ ಗೌರಿ?
Image
ಆಮಿರ್ ಖಾನ್ ಈ ರೀತಿ ವೇಷ ಹಾಕಿದ್ದು ದುಡ್ಡಿಗಾಗಿ; ಅಸಲಿ ವಿಚಾರ ರಿವೀಲ್

ಇನ್ನೊಂದು ಇಂಟರೆಸ್ಟಿಂಗ್ ವಿಚಾರ ಏನೆಂದರೆ ಸಲ್ಮಾನ್ ಖಾನ್, ಶಾರುಖ್ ಖಾನ್ ಮತ್ತು ಆಮಿರ್ ಖಾನ್ ಅವರು ಜೊತೆಯಾಗಿ ಸಿನಿಮಾ ಮಾಡುವ ಪ್ಲ್ಯಾನ್ ಕೂಡ ದೆ. ಆ ಬಗ್ಗೆ ಆಮಿರ್ ಖಾನ್ ಅವರು ಇತ್ತೀಚೆಗೆ ಮಾತನಾಡಿದ್ದರು. ಈಗಾಗಲೇ ಈ ಮೂವರು ಕೂಡ ಒಟ್ಟಿಗೆ ಸಿನಿಮಾ ಮಾಡುವ ಬಗ್ಗೆ ಚರ್ಚೆ ಮಾಡಿದ್ದಾರೆ. ಇಂದಿನ ಭೇಟಿಯಲ್ಲಿ ಕೂಡ ಆ ವಿಚಾರಗಳನ್ನು ಅವರು ಮಾತನಾಡಿರುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಿನಿಮಾ ತಡವಾದರೂ ಚಾರ್ಮ್​ ಕಳೆದುಕೊಳ್ಳದ ಶಾರುಖ್ ಖಾನ್

‘ಆರು ತಿಂಗಳ ಹಿಂದೆ ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ನಾನು ಒಟ್ಟಿಗೆ ಇದ್ದಾಗ ಈ ಬಗ್ಗೆ ಚರ್ಚೆ ಮಾಡಿದೆವು. ನಾನೇ ಆ ವಿಷಯ ಪ್ರಸ್ತಾಪಿಸಿದ್ದು. ನಾವು ಮೂವರು ಒಟ್ಟಿಗೆ ಸಿನಿಮಾ ಮಾಡದೇ ಇದ್ದರೆ ಖಂಡಿತಾ ಬೇಸರ ಆಗುತ್ತದೆ ಅಂತ ಹೇಳಿದೆ. ಅದನ್ನು ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಕೂಡ ಒಪ್ಪಿದರು. ಶೀಘ್ರದಲ್ಲೇ ಇದು ನೆರವೇರುತ್ತದೆ ಎಂಬ ನಂಬಿಕೆ ಇದೆ. ನನಗೆ ಸರಿಯಾದ ಕಥೆ ಬೇಕು. ಅದಕ್ಕಾಗಿ ನಾವು ಕಾಯುತ್ತಿದ್ದೇವೆ’ ಎಂದು ಆಮಿರ್ ಖಾನ್ ಹೇಳಿದ್ದರು.

​ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ