Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ‘ಪವನ ಪುತ್ರ ಭಾಯಿಜಾನ್​’; ಸಲ್ಮಾನ್​ ಖಾನ್ ಹೊಸ ಸಿನಿಮಾದ ಶೀರ್ಷಿಕೆ ಬಹಿರಂಗ

Pawan Putra Bhaijaan: ಸಲ್ಮಾನ್ ಖಾನ್​ ನಟನೆಯ ‘ಬಜರಂಗಿ ಭಾಯಿಜಾನ್​’ ಚಿತ್ರಕ್ಕೆ ವಿಜಯೇಂದ್ರ ಪ್ರಸಾದ್ ಕಥೆ ಬರೆದಿದ್ದರು. ಈಗ ಅದರ ಸೀಕ್ವೆಲ್​ ‘ಪವನ ಪುತ್ರ ಭಾಯಿಜಾನ್​​’ ಚಿತ್ರಕ್ಕೂ ಅವರೇ ಕಥೆ ಬರೆಯುತ್ತಿದ್ದಾರೆ.

Salman Khan: ‘ಪವನ ಪುತ್ರ ಭಾಯಿಜಾನ್​’; ಸಲ್ಮಾನ್​ ಖಾನ್ ಹೊಸ ಸಿನಿಮಾದ ಶೀರ್ಷಿಕೆ ಬಹಿರಂಗ
ಸಲ್ಮಾನ್ ಖಾನ್
Follow us
TV9 Web
| Updated By: ಮದನ್​ ಕುಮಾರ್​

Updated on: Dec 27, 2021 | 12:35 PM

ನಟ ಸಲ್ಮಾನ್​ ಖಾನ್ (Salman Khan)​ ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಮುಂಬರುವ ಚಿತ್ರಗಳ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಇಂದು (ಡಿ.27) ಸಲ್ಮಾನ್​ ಖಾನ್​ ಜನ್ಮದಿನ (Salman Khan Birthday). ಆ ಪ್ರಯುಕ್ತ ಕೆಲವು ಇಂಟರೆಸ್ಟಿಂಗ್​ ವಿಚಾರಗಳನ್ನು ಸಲ್ಲು ಬಹಿರಂಗ ಪಡಿಸಿದ್ದಾರೆ. ಅವರ ಮುಂದಿನ ಚಿತ್ರಕ್ಕೆ ‘ಪವನ ಪುತ್ರ ಭಾಯಿಜಾನ್​’ ಎಂದು ಶೀರ್ಷಿಕೆ ಇಡಲಾಗಿದೆ. ಇದನ್ನು ಕೇಳಿ ಫ್ಯಾನ್ಸ್​ ಖುಷಿ ಆಗಿದ್ದಾರೆ. ಈ ಹಿಂದೆ ಸಲ್ಮಾನ್​ ಖಾನ್​ ನಟಿಸಿದ್ದ ‘ಬಜರಂಗಿ ಭಾಯಿಜಾನ್​’ (Bajrangi Bhaijaan) ಸಿನಿಮಾ ಸೂಪರ್ ಹಿಟ್​ ಆಗಿತ್ತು. ಅದರ ಸೀಕ್ವೆಲ್​ ಆಗಿ ‘ಪವನ ಪುತ್ರ ಭಾಯಿಜಾನ್​’ (Pawan Putra Bhaijaan) ಮೂಡಿಬರಲಿದೆ.

‘ಬಜರಂಗಿ ಭಾಯಿಜಾನ್​’ ಸಿನಿಮಾಗೆ ಸೀಕ್ವೆಲ್​ ಮಾಡುವ ಬಗ್ಗೆ ಕೆಲವೇ ದಿನಗಳ ಹಿಂದೆ ಸಲ್ಮಾನ್​ ಖಾನ್​ ಘೋಷಣೆ ಮಾಡಿದ್ದರು. ‘ಆರ್​ಆರ್​​ಆರ್​’ ಸಿನಿಮಾದ ಪ್ರಚಾರದ ಕಾರ್ಯದ ವೇಳೆ ಅವರು ಆ ಬಗ್ಗೆ ಹೇಳಿಕೊಂಡಿದ್ದರು. ಆ ಚಿತ್ರಕ್ಕೆ ಈಗ ಟೈಟಲ್​ ಫಿಕ್ಸ್​ ಆಗಿದೆ. ಖ್ಯಾತ ನಿರ್ದೇಶಕ ರಾಜಮೌಳಿ​ ಅವರ ತಂದೆ, ಕಥೆಗಾರ ವಿಜಯೇಂದ್ರ ಪ್ರಸಾದ್ ಅವರು ಈ ಶೀರ್ಷಿಕೆ ಇಟ್ಟಿದ್ದಾರೆ ಎಂದು ಸಲ್ಮಾನ್​ ಖಾನ್​ ತಿಳಿಸಿದ್ದಾರೆ.

‘ಬಜರಂಗಿ ಭಾಯಿಜಾನ್​’ ಚಿತ್ರಕ್ಕೆ ವಿಜಯೇಂದ್ರ ಪ್ರಸಾದ್ ಅವರು ಕಥೆ ಬರೆದಿದ್ದರು. ಈಗ ಅದರ ಸೀಕ್ವೆಲ್​ ‘ಪವನ ಪುತ್ರ ಭಾಯಿಜಾನ್​​’ ಚಿತ್ರಕ್ಕೂ ಅವರೇ ಕಥೆ ಬರೆಯುತ್ತಿದ್ದಾರೆ. ಸ್ಕ್ರಿಪ್ಟ್​ ಫೈನಲ್​ ಆಗಬೇಕಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ರಾಜಮೌಳಿ ಅವರು ‘ಬಜರಂಗಿ ಭಾಯಿಜಾನ್​’ ಚಿತ್ರಕ್ಕೆ ನಿರ್ದೇಶನ ಮಾಡಬೇಕಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. ನಂತರ ಆ ಅವಕಾಶ ಕಬೀರ್​ ಖಾನ್​ ಅವರಿಗೆ ಸಿಕ್ಕಿತ್ತು. ಈಗ ‘ಪವನ ಪುತ್ರ ಭಾಯಿಜಾನ್​’ಗೆ ಯಾರು ಆ್ಯಕ್ಷನ್​-ಕಟ್​ ಹೇಳುತ್ತಾರೆ ಎಂಬ ಕೌತುಕ ನಿರ್ಮಾಣ ಆಗಿದೆ.

ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಸಲ್ಮಾನ್​ ಖಾನ್​ ನಟಿಸುತ್ತಿದ್ದಾರೆ. ಬಹುನಿರೀಕ್ಷಿತ ‘ಟೈಗರ್​ 3’ ಚಿತ್ರದ ಶೂಟಿಂಗ್​ ನಡೆಯುತ್ತಿದೆ. ಆ ಸಿನಿಮಾದ ಚಿತ್ರೀಕರಣ ಮುಗಿದ ಬಳಿಕ ‘ನೋ ಎಂಟ್ರಿ’ ಸೀಕ್ವೆಲ್​ ಆರಂಭ ಆಗಲಿದೆ ಎಂದು ಸಲ್ಮಾನ್​ ಖಾನ್​ ಮಾಹಿತಿ ನೀಡಿದ್ದಾರೆ. ಪನ್ವೇಲ್​ ಫಾರ್ಮ್​ಹೌಸ್​ನಲ್ಲಿ ಸಲ್ಲು 56ನೇ ವರ್ಷದ ಬರ್ತ್​ಡೇ ಆಚರಣೆ ಮಾಡಿಕೊಂಡಿದ್ದಾರೆ. ಅದಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು ಈ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

ಹಾವು ಕಚ್ಚಿದ ಬಳಿಕ ಆಸ್ಪತ್ರೆಯಲ್ಲಿ ಸಲ್ಮಾನ್​ ಖಾನ್​ ಚಿಕಿತ್ಸೆ ಪಡೆಯುತ್ತಿರುವ ಫೋಟೋ ವೈರಲ್​

ಶರ್ಟ್​ ಬಟನ್​ ಹಾಕಿಕೊಳ್ಳಲು ಸಲ್ಲುಗೆ ಬೇಕಾಯ್ತು ಆಲಿಯಾ ಭಟ್​ ಸಹಾಯ; ವಿಡಿಯೋ ವೈರಲ್​

ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ