AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ‘ಪವನ ಪುತ್ರ ಭಾಯಿಜಾನ್​’; ಸಲ್ಮಾನ್​ ಖಾನ್ ಹೊಸ ಸಿನಿಮಾದ ಶೀರ್ಷಿಕೆ ಬಹಿರಂಗ

Pawan Putra Bhaijaan: ಸಲ್ಮಾನ್ ಖಾನ್​ ನಟನೆಯ ‘ಬಜರಂಗಿ ಭಾಯಿಜಾನ್​’ ಚಿತ್ರಕ್ಕೆ ವಿಜಯೇಂದ್ರ ಪ್ರಸಾದ್ ಕಥೆ ಬರೆದಿದ್ದರು. ಈಗ ಅದರ ಸೀಕ್ವೆಲ್​ ‘ಪವನ ಪುತ್ರ ಭಾಯಿಜಾನ್​​’ ಚಿತ್ರಕ್ಕೂ ಅವರೇ ಕಥೆ ಬರೆಯುತ್ತಿದ್ದಾರೆ.

Salman Khan: ‘ಪವನ ಪುತ್ರ ಭಾಯಿಜಾನ್​’; ಸಲ್ಮಾನ್​ ಖಾನ್ ಹೊಸ ಸಿನಿಮಾದ ಶೀರ್ಷಿಕೆ ಬಹಿರಂಗ
ಸಲ್ಮಾನ್ ಖಾನ್
TV9 Web
| Edited By: |

Updated on: Dec 27, 2021 | 12:35 PM

Share

ನಟ ಸಲ್ಮಾನ್​ ಖಾನ್ (Salman Khan)​ ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಮುಂಬರುವ ಚಿತ್ರಗಳ ಬಗ್ಗೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಇಂದು (ಡಿ.27) ಸಲ್ಮಾನ್​ ಖಾನ್​ ಜನ್ಮದಿನ (Salman Khan Birthday). ಆ ಪ್ರಯುಕ್ತ ಕೆಲವು ಇಂಟರೆಸ್ಟಿಂಗ್​ ವಿಚಾರಗಳನ್ನು ಸಲ್ಲು ಬಹಿರಂಗ ಪಡಿಸಿದ್ದಾರೆ. ಅವರ ಮುಂದಿನ ಚಿತ್ರಕ್ಕೆ ‘ಪವನ ಪುತ್ರ ಭಾಯಿಜಾನ್​’ ಎಂದು ಶೀರ್ಷಿಕೆ ಇಡಲಾಗಿದೆ. ಇದನ್ನು ಕೇಳಿ ಫ್ಯಾನ್ಸ್​ ಖುಷಿ ಆಗಿದ್ದಾರೆ. ಈ ಹಿಂದೆ ಸಲ್ಮಾನ್​ ಖಾನ್​ ನಟಿಸಿದ್ದ ‘ಬಜರಂಗಿ ಭಾಯಿಜಾನ್​’ (Bajrangi Bhaijaan) ಸಿನಿಮಾ ಸೂಪರ್ ಹಿಟ್​ ಆಗಿತ್ತು. ಅದರ ಸೀಕ್ವೆಲ್​ ಆಗಿ ‘ಪವನ ಪುತ್ರ ಭಾಯಿಜಾನ್​’ (Pawan Putra Bhaijaan) ಮೂಡಿಬರಲಿದೆ.

‘ಬಜರಂಗಿ ಭಾಯಿಜಾನ್​’ ಸಿನಿಮಾಗೆ ಸೀಕ್ವೆಲ್​ ಮಾಡುವ ಬಗ್ಗೆ ಕೆಲವೇ ದಿನಗಳ ಹಿಂದೆ ಸಲ್ಮಾನ್​ ಖಾನ್​ ಘೋಷಣೆ ಮಾಡಿದ್ದರು. ‘ಆರ್​ಆರ್​​ಆರ್​’ ಸಿನಿಮಾದ ಪ್ರಚಾರದ ಕಾರ್ಯದ ವೇಳೆ ಅವರು ಆ ಬಗ್ಗೆ ಹೇಳಿಕೊಂಡಿದ್ದರು. ಆ ಚಿತ್ರಕ್ಕೆ ಈಗ ಟೈಟಲ್​ ಫಿಕ್ಸ್​ ಆಗಿದೆ. ಖ್ಯಾತ ನಿರ್ದೇಶಕ ರಾಜಮೌಳಿ​ ಅವರ ತಂದೆ, ಕಥೆಗಾರ ವಿಜಯೇಂದ್ರ ಪ್ರಸಾದ್ ಅವರು ಈ ಶೀರ್ಷಿಕೆ ಇಟ್ಟಿದ್ದಾರೆ ಎಂದು ಸಲ್ಮಾನ್​ ಖಾನ್​ ತಿಳಿಸಿದ್ದಾರೆ.

‘ಬಜರಂಗಿ ಭಾಯಿಜಾನ್​’ ಚಿತ್ರಕ್ಕೆ ವಿಜಯೇಂದ್ರ ಪ್ರಸಾದ್ ಅವರು ಕಥೆ ಬರೆದಿದ್ದರು. ಈಗ ಅದರ ಸೀಕ್ವೆಲ್​ ‘ಪವನ ಪುತ್ರ ಭಾಯಿಜಾನ್​​’ ಚಿತ್ರಕ್ಕೂ ಅವರೇ ಕಥೆ ಬರೆಯುತ್ತಿದ್ದಾರೆ. ಸ್ಕ್ರಿಪ್ಟ್​ ಫೈನಲ್​ ಆಗಬೇಕಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ರಾಜಮೌಳಿ ಅವರು ‘ಬಜರಂಗಿ ಭಾಯಿಜಾನ್​’ ಚಿತ್ರಕ್ಕೆ ನಿರ್ದೇಶನ ಮಾಡಬೇಕಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. ನಂತರ ಆ ಅವಕಾಶ ಕಬೀರ್​ ಖಾನ್​ ಅವರಿಗೆ ಸಿಕ್ಕಿತ್ತು. ಈಗ ‘ಪವನ ಪುತ್ರ ಭಾಯಿಜಾನ್​’ಗೆ ಯಾರು ಆ್ಯಕ್ಷನ್​-ಕಟ್​ ಹೇಳುತ್ತಾರೆ ಎಂಬ ಕೌತುಕ ನಿರ್ಮಾಣ ಆಗಿದೆ.

ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಸಲ್ಮಾನ್​ ಖಾನ್​ ನಟಿಸುತ್ತಿದ್ದಾರೆ. ಬಹುನಿರೀಕ್ಷಿತ ‘ಟೈಗರ್​ 3’ ಚಿತ್ರದ ಶೂಟಿಂಗ್​ ನಡೆಯುತ್ತಿದೆ. ಆ ಸಿನಿಮಾದ ಚಿತ್ರೀಕರಣ ಮುಗಿದ ಬಳಿಕ ‘ನೋ ಎಂಟ್ರಿ’ ಸೀಕ್ವೆಲ್​ ಆರಂಭ ಆಗಲಿದೆ ಎಂದು ಸಲ್ಮಾನ್​ ಖಾನ್​ ಮಾಹಿತಿ ನೀಡಿದ್ದಾರೆ. ಪನ್ವೇಲ್​ ಫಾರ್ಮ್​ಹೌಸ್​ನಲ್ಲಿ ಸಲ್ಲು 56ನೇ ವರ್ಷದ ಬರ್ತ್​ಡೇ ಆಚರಣೆ ಮಾಡಿಕೊಂಡಿದ್ದಾರೆ. ಅದಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು ಈ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

ಹಾವು ಕಚ್ಚಿದ ಬಳಿಕ ಆಸ್ಪತ್ರೆಯಲ್ಲಿ ಸಲ್ಮಾನ್​ ಖಾನ್​ ಚಿಕಿತ್ಸೆ ಪಡೆಯುತ್ತಿರುವ ಫೋಟೋ ವೈರಲ್​

ಶರ್ಟ್​ ಬಟನ್​ ಹಾಕಿಕೊಳ್ಳಲು ಸಲ್ಲುಗೆ ಬೇಕಾಯ್ತು ಆಲಿಯಾ ಭಟ್​ ಸಹಾಯ; ವಿಡಿಯೋ ವೈರಲ್​

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ