Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಚಿತ್ರದಲ್ಲಿದೆ 8 ಹಾಡು; ಸಿನಿಮಾದ ಒಟ್ಟು ಅವಧಿ 2 ಗಂಟೆ 24 ನಿಮಿಷ

Kisi Ka Bhai Kisi Ki Jaan Songs: ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಚಿತ್ರದಲ್ಲಿ ಫ್ಯಾಮಿಲಿ ಕಹಾನಿ ಇದೆ. ಹೆಚ್ಚಿನ ಕಡೆಗಳಲ್ಲಿ ಕತ್ತರಿ ಹಾಕಲು ಸೆನ್ಸಾರ್​ ಮಂಡಳಿ ಸೂಚಿಸಿಲ್ಲ. ಈ ಚಿತ್ರಕ್ಕೆ ‘ಯು/ಎ’ ಪ್ರಮಾಣಪತ್ರ ಸಿಕ್ಕಿದೆ.

‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಚಿತ್ರದಲ್ಲಿದೆ 8 ಹಾಡು; ಸಿನಿಮಾದ ಒಟ್ಟು ಅವಧಿ 2 ಗಂಟೆ 24 ನಿಮಿಷ
ಸಲ್ಮಾನ್ ಖಾನ್
Follow us
ಮದನ್​ ಕುಮಾರ್​
|

Updated on:Apr 16, 2023 | 3:16 PM

ನಟ ಸಲ್ಮಾನ್​ ಖಾನ್​ (Salman Khan) ಅವರು ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾ ಮೂಲಕ ಒಂದು ಗೆಲುವು ಪಡೆಯಲು ಕಾದಿದ್ದಾರೆ. ಏಪ್ರಿಲ್​ 21ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈದ್​ ಹಬ್ಬದ ಪ್ರಯುಕ್ತ ರಿಲೀಸ್​ ಆಗುತ್ತಿರುವುದರಿಂದ ಭರ್ಜರಿ ಕಮಾಯಿ ಮಾಡುವ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಅನೇಕ ಇಂಟರೆಸ್ಟಿಂಗ್​ ವಿಚಾರಗಳಿವೆ. ಹಾಗಾಗಿ ಹೈಪ್​ ಹೆಚ್ಚಾಗಿದೆ. ಈಗ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ (Kisi Ka Bhai Kisi Ki Jaan) ಸಿನಿಮಾದ ಸೆನ್ಸಾರ್​ ಪ್ರಕ್ರಿಯೆ ಕೂಡ ಮುಕ್ತಾಯ ಆಗಿದ್ದು, ಚಿತ್ರದಲ್ಲಿ ಏನುಂಟು-ಏನಿಲ್ಲ ಎಂಬ ವಿವರ ಲಭ್ಯವಾಗಿದೆ. ‘ಪಿಂಕ್​ವಿಲ್ಲಾ’ ವರದಿ ಪ್ರಕಾರ ಈ ಸಿನಿಮಾದಲ್ಲಿ ಬರೋಬ್ಬರಿ 8 ಹಾಡುಗಳಿವೆ. ಇದು ಸಿನಿಮಾಗೆ ಹೊರೆಯಾಗಲೂಬಹುದು. ಚಿತ್ರದ ಒಟ್ಟು ಅವಧಿ 2 ಗಂಟೆ 24 ನಿಮಿಷ ಎನ್ನಲಾಗಿದೆ. ಈ ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಮತ್ತು ಪೂಜಾ ಹೆಗ್ಡೆ (Pooja Hegde) ಅವರು ಜೋಡಿಯಾಗಿ ನಟಿಸಿದ್ದಾರೆ. ಫರ್ಹಾದ್​ ಸಮ್ಜಿ ಅವರು ನಿರ್ದೇಶನ ಮಾಡಿದ್ದಾರೆ.

ಭಾರತೀಯ ಸಿನಿಮಾಗಳಲ್ಲಿ ಹಾಡಿಗೆ ಹೆಚ್ಚು ಮಹತ್ವ ಇರುತ್ತದೆ. ಹಾಡುಗಳಿಂದಲೇ ಸಿನಿಮಾ ಗೆದ್ದ ಉದಾಹರಣೆಗಳು ಸಾಕಷ್ಟಿವೆ. ಆದರೆ ಕೆಲವೊಮ್ಮೆ ಕಥೆಯ ಓಟಕ್ಕೆ ಹಾಡುಗಳಿಂದ ತೊಂದರೆ ಆಗಬಹುದು. ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾದಲ್ಲಿ 8 ಹಾಡುಗಳು ಇವೆ ಎಂಬುದು ಅಭಿಮಾನಿಗಳ ಚಿಂತೆಗೆ ಕಾರಣ ಆಗಿದೆ. 5 ಹಾಡುಗಳು ಕಥೆಯ ನಡುವೆ ಪ್ರತ್ಯೇಕವಾಗಿ ಬರಲಿವೆ. ಇನ್ನುಳಿದ ಮೂರು ಹಾಡುಗಳು ಹಿನ್ನೆಲೆಯಲ್ಲಿ ಸಾಗಲಿವೆ ಎಂದು ವರದಿ ಆಗಿದೆ.

Salman Khan: ಈದ್​ಗೆ ಸಲ್ಮಾನ್​ ಖಾನ್​ ಕಡೆಯಿಂದ ಮನರಂಜನೆಯ ರಸದೌತಣ; ಇಲ್ಲಿದೆ ನೋಡಿ ಸ್ಯಾಂಪಲ್​

ಇದನ್ನೂ ಓದಿ
Image
ಸೆಟ್​​ನಲ್ಲಿ ಸಲ್ಲುನ ಭೇಟಿ ಮಾಡೋಕೆ ಬಂದ ರಾಮ್​ ಚರಣ್​ಗೆ ಸಿಕ್ತು ಹಿಂದಿ ಸಿನಿಮಾ ಆಫರ್
Image
ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
Image
ಬಹಿರಂಗ ವೇದಿಕೆಯಲ್ಲಿ ಸಲ್ಲು ಇದೆಂಥಾ ಕೆಲಸ; ಪೂಜಾ ಹೆಗ್ಡೆ ವಿಚಾರದಲ್ಲಿ ಸಿಕ್ಕಾಪಟ್ಟೆ ಮುಜುಗರ
Image
ಸಲ್ಮಾನ್​ ಖಾನ್ ಫಾರ್ಮ್​ಹೌಸ್​ ಬೆಲೆ 80 ಕೋಟಿ ರೂ.! ಸಲ್ಲು ಮೆಚ್ಚಿನ ಈ ಸ್ಥಳದಲ್ಲಿ ಏನೆಲ್ಲ ಇದೆ?

ಈ ಬಾರಿ ಸಲ್ಮಾನ್ ಖಾನ್​ ಅವರು ಕೌಟುಂಬಿಕ ಪ್ರೇಕ್ಷಕರನ್ನು ಗಮನದಲ್ಲಿ ಇಟ್ಟುಕೊಂಡು ಸಿನಿಮಾ ಮಾಡಿದ್ದಾರೆ. ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಚಿತ್ರದಲ್ಲಿ ಫ್ಯಾಮಿಲಿ ಕಹಾನಿ ಇದೆ. ಆದರೆ ಮಾಸ್​ ಅಂಶಗಳು ಕೂಡ ಭರ್ಜರಿ ಆಗಿವೆ. ಅದಕ್ಕೆ ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಸಾಹಸ ದೃಶ್ಯಗಳನ್ನು ಇಷ್ಟಪಡುವವರಿಗೂ ಸಖತ್​ ಮನರಂಜನೆ ಸಿಗಲಿದೆ. ಹೆಚ್ಚಿನ ಯಾವುದೇ ದೃಶ್ಯಗಳಿಗೂ ಕತ್ತರಿ ಹಾಕಲು ಸೆನ್ಸಾರ್​ ಮಂಡಳಿ ಸೂಚಿಸಿಲ್ಲ. ಈ ಚಿತ್ರಕ್ಕೆ ‘ಯು/ಎ’ ಪ್ರಮಾಣಪತ್ರ ಸಿಕ್ಕಿದೆ.

ಸಲ್ಮಾನ್​ ಖಾನ್​ ಪಂಚೆ ಧರಿಸಿ ಕುಣಿದಿದ್ದಕ್ಕೆ ಎದುರಾಯ್ತು ಕಿರಿಕ್​; ಸಿನಿಮಾ ಬ್ಯಾನ್​ ಮಾಡಲು ಒತ್ತಾಯ

‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡುವುದರ ಜೊತೆಗೆ ನಿರ್ಮಾಣದ ಹೊಣೆಯನ್ನೂ ಸಲ್ಮಾನ್​ ಖಾನ್​ ಅವರೇ ನಿಭಾಯಿಸಿದ್ದಾರೆ. ಅವರ ಹೋಮ್​ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಿದೆ. ಟಾಲಿವುಡ್​ನ ಖ್ಯಾತ ನಟ ದಗ್ಗುಬಾಟಿ ವೆಂಕಟೇಶ್​ ಅವರು ಕೂಡ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ವಿಲನ್​ ಆಗಿ ಜಗಪತಿ ಬಾಬು ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:45 pm, Sun, 16 April 23

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ