AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಕಂದರ್’ ಸಿನಿಮಾ ಲೀಕ್ ಮಾಡಿದ್ದು ಯಾರು? ಶಾರುಖ್ ಸಂಸ್ಥೆ ಮೇಲೆ ಅನುಮಾನ

ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಸಿನಿಮಾಗೆ ಸೋಲು ಉಂಟಾಗಿದೆ. ಚಿತ್ರದ ಸೋಲಿಗೆ ಪೈರಸಿ ಕೂಡ ಪ್ರಮುಖ ಕಾರಣ ಆಗಿದೆ. ಈ ಕೃತ್ಯದ ಹಿಂದಿರುವ ವ್ಯಕ್ತಿಗಳು ಯಾರು ಎಂದು ಹುಡುಕಾಟ ನಡೆಸಲಾಗುತ್ತಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮಾಡಿದವರಲ್ಲಿ ಯಾರೋ ಪೈರಸಿಗೆ ಕಾರಣ ಆಗಿದ್ದಾರೆ ಎಂಬ ಶಂಕೆ ಮೂಡಿದೆ.

‘ಸಿಕಂದರ್’ ಸಿನಿಮಾ ಲೀಕ್ ಮಾಡಿದ್ದು ಯಾರು? ಶಾರುಖ್ ಸಂಸ್ಥೆ ಮೇಲೆ ಅನುಮಾನ
Salman Khan, Shah Rukh Khan
ಮದನ್​ ಕುಮಾರ್​
|

Updated on: Apr 03, 2025 | 5:41 PM

Share

ಬಹುಕೋಟಿ ರೂಪಾಯಿ ವೆಚ್ಚದಲ್ಲಿ ತಯಾರಾದ ‘ಸಿಕಂದರ್’ (Sikandar) ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಸೋತಿದೆ. ಅಂದುಕೊಂಡ ಮಟ್ಟಕ್ಕೆ ಈ ಸಿನಿಮಾ ಕಲೆಕ್ಷನ್ ಮಾಡಿಲ್ಲ. ನಟ ಸಲ್ಮಾನ್ ಖಾನ್ (Salman Khan) ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ಅವರು ನಾಯಕಿಯಾಗಿ ನಟಿಸಿದ್ದಾರೆ. ಪೋಷಕ ಪಾತ್ರಗಳಲ್ಲಿ ಕೂಡ ಸ್ಟಾರ್ ಕಲಾವಿದರು ಇದ್ದಾರೆ. ನಿರ್ದೇಶನ ಮಾಡಿರುವುದು ಹಿರಿಯ ನಿರ್ದೇಶಕ ಎ.ಆರ್. ಮುರುಗದಾಸ್. ಇಂಥ ಘಟಾನುಘಟಿಗಳು ಇದ್ದರೂ ಕೂಡ ‘ಸಿಕಂದರ್’ ಸಿನಿಮಾಗೆ ಸೋಲು ಉಂಟಾಗಿದೆ. ಬಾಕ್ಸ್ ಆಫೀಸ್​ನಲ್ಲಿ ಕಲೆಕ್ಷನ್ ತಗ್ಗಲು ಪೈರಸಿ ಕೂಡ ಕಾರಣ. ಹಾಗಾದ್ರೆ ಈ ಪೈರಸಿ ಹಿಂದೆ ಇರುವ ವ್ಯಕ್ತಿಗಳು ಯಾರು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಶಾರುಖ್ ಖಾನ್ (Shah Rukh Khan) ಒಡೆತನದ ‘ರೆಡ್ ಚಿಲ್ಲೀಸ್ ವಿಎಫ್​ಎಕ್ಸ್​’ ಸಂಸ್ಥೆಯ ಮೇಲೂ ಅನುಮಾನ ಮೂಡಿದೆ.

ಸಾಮಾನ್ಯವಾಗಿ ಇಂಥ ಸಿನಿಮಾಗಳು ವಿದೇಶದಲ್ಲಿ ಬಿಡುಗಡೆ ಆದಾಗ ಅಲ್ಲಿಂದಲೇ ಲೀಕ್ ಆಗುವ ಸಾಧ್ಯತೆ ಇರುತ್ತದೆ. ಆದರೆ ‘ಸಿಕಂದರ್’ ವಿಚಾರದಲ್ಲಿ ಆ ರೀತಿ ಆಗಿಲ್ಲ. ಯಾಕೆಂದರೆ, ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ‘ಸಿಕಂದರ್’ ಸಿನಿಮಾಗೂ ಪೈರಸಿ ಕಾಪಿಗೂ ಕೆಲವು ವ್ಯತ್ಯಾಸ ಇದೆ. ಥಿಯೆಟ್ರಿಕಲ್ ರಿಲೀಸ್​ನಲ್ಲಿ ಇಲ್ಲದ ಕೆಲವು ದೃಶ್ಯಗಳು ಕೂಡ ಪೈರಸಿ ವರ್ಷನ್​ನಲ್ಲಿ ಇವೆ! ಹಾಗಾಗಿ ಇದು ಪೋಸ್ಟ್ ಪ್ರೊಡಕ್ಷನ್ ತಂಡದಲ್ಲಿರುವವರಿಂದ ಆಗಿರುವ ಲೀಕ್ ಎಂದು ಶಂಕೆ ವ್ಯಕ್ತಪಡಿಸಲಾಗುತ್ತಿದೆ.

ಶಾರುಖ್ ಖಾನ್ ಅವರ ಒಡೆತನದ ‘ರೆಡ್ ಚಿಲ್ಲೀಸ್ ವಿಎಫ್​ಎಕ್ಸ್’ ಸಂಸ್ಥೆಯಲ್ಲಿ ‘ಸಿಕಂದರ್’ ಸಿನಿಮಾದ ಕೆಲಸ ಮಾಡಿಸಲಾಗಿದೆ. ಈ ಸಂಸ್ಥೆಯಲ್ಲಿನ ಸೆಕ್ಯುರಿಟಿ ಲೋಪದಿಂದಲೇ ಸಿನಿಮಾ ಲೀಕ್ ಆಗಿರುವ ಸಾಧ್ಯತೆ ಇದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಆದರೆ ಸಂಸ್ಥೆಯ ಕಡೆಯಿಂದ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಒಟ್ಟಿನಲ್ಲಿ, ಸಲ್ಮಾನ್ ಖಾನ್ ಅವರಿಗೆ ಪೈರಸಿಯಿಂದ ದೊಡ್ಡ ಪೆಟ್ಟು ಬಿದ್ದಂತಾಗಿದೆ.

ಇದನ್ನೂ ಓದಿ: ಕೊರಿಯನ್ ಹಾರ್ಟ್ ಮಾಡಲು ರಶ್ಮಿಕಾ ಒತ್ತಾಯ; ಮುಲಾಜಿಲ್ಲದೇ ನಿರಾಕರಿಸಿದ ಸಲ್ಮಾನ್

ಮಾರ್ಚ್​ 30ರಂದು ‘ಸಿಕಂದರ್’ ಸಿನಿಮಾ ಬಿಡುಗಡೆ ಆಯಿತು. ಮೊದಲ ದಿನ ಈ ಚಿತ್ರಕ್ಕೆ 30 ಕೋಟಿ ರೂಪಾಯಿ ಕಲೆಕ್ಷನ್ ಆಯಿತು. 2ನೇ ದಿನ 33.36 ಕೋಟಿ ರೂಪಾಯಿ ಗಳಿಸಿತು. ಮೂರನೇ ದಿನ 18.75 ಕೋಟಿ ರೂಪಾಯಿಗೆ ಕುಸಿಯಿತು. 4ನೇ ದಿನ ಕೇವಲ 8.50 ಕೋಟಿ ರೂಪಾಯಿ ಸಂಗ್ರಹ ಆಗಿದೆ. ಪೈರಸಿ ಆಗಿದ್ದರಿಂದಲೇ ಈ ಸಿನಿಮಾಗೆ ಇಂಥ ಹೀನಾಯ ಸ್ಥಿತಿ ಬಂದಿದೆ. ಅಲ್ಲದೇ, ಜನರಿಂದ ನೆಗೆಟಿವ್ ಪ್ರತಿಕ್ರಿಯೆ ಸಿಕ್ಕಿದ್ದು ಕೂಡ ಸಿನಿಮಾ ಸೋಲಿಗೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?