AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಮೋಹನ್ ಸಿಂಗ್ ನಿಧನದ ಬಳಿಕ ಪ್ರಮುಖ ನಿರ್ಧಾರ ತೆಗೆದುಕೊಂಡ ಸಲ್ಮಾನ್ ಖಾನ್

ಡಿಸೆಂಬರ್​ 26ರಂದು ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆತ್ಮಕ್ಕೆ ಶಾಂತಿ ಕೋರಿ ಅನೇಕರು ಪೋಸ್ಟ್ ಮಾಡಿದ್ದಾರೆ. ಸಲ್ಮಾನ್ ಖಾನ್ ಅಭಿನಯದ ‘ಸಿಕಂದರ್​’ ಸಿನಿಮಾ ತಂಡ ಕೂಡ ಮಾಜಿ ಪ್ರಧಾನಿಯ ಅಗಲಿಕೆಗೆ ಸಂತಾಪ ಸೂಚಿಸಿದೆ. ಡಿಸೆಂಬರ್​ 27ರಂದು ರಿಲೀಸ್​ ಆಗಿಬೇಕಿದ್ದ ‘ಸಿಕಂದರ್​’ ಟೀಸರ್​ ವಿಚಾರದಲ್ಲಿ ಬದಲಾವಣೆ ಆಗಿದೆ.

ಮನಮೋಹನ್ ಸಿಂಗ್ ನಿಧನದ ಬಳಿಕ ಪ್ರಮುಖ ನಿರ್ಧಾರ ತೆಗೆದುಕೊಂಡ ಸಲ್ಮಾನ್ ಖಾನ್
Salman Khan, Manmohan Singh
ಮದನ್​ ಕುಮಾರ್​
|

Updated on: Dec 27, 2024 | 8:32 PM

Share

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ. ರಾಜಕೀಯ ಕ್ಷೇತ್ರದ ಮಂದಿ ಮಾತ್ರವಲ್ಲದೇ ಸಿನಿಮಾ ಸೆಲೆಬ್ರಿಟಿಗಳು ಕೂಡ ಕಂಬನಿ ಮಿಡಿದಿದ್ದಾರೆ. ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಎಲ್ಲ ಬಗೆಯ ಸಂಭ್ರಮಾಚರಣೆಗಳಿಗೆ ಬ್ರೇಕ್​ ಹಾಕಲಾಗಿದೆ. ಈ ಮೊದಲೇ ನಿಗದಿ ಆಗಿದ್ದ ಕಾರ್ಯಕ್ರಮಗಳು ಕೂಡ ರದ್ದಾಗಿವೆ. ನಟ ಸಲ್ಮಾನ್ ಖಾನ್ ಸಹ ಒಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದ್ದಾರೆ. ಇದು ಅವರ ‘ಸಿಕಂದರ್​’ ಸಿನಿಮಾಗೆ ಸಂಬಂಧಿಸಿದ ವಿಷಯ.

‘ಸಿಕಂದರ್​’ ಸಿನಿಮಾದಲ್ಲಿ ಸಲ್ಮಾನ್​ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿದ್ದಾರೆ. ಖ್ಯಾತ ನಿರ್ದೇಶಕ ಮುರುಗದಾಸ್ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಚಿತ್ರದ ಟೀಸರ್​ ನೋಡಲು ಎಲ್ಲರೂ ಕಾದಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಡಿಸೆಂಬರ್​ 27ರಂದು ‘ಸಿಕಂದರ್​’ ಟೀಸರ್​ ರಿಲೀಸ್ ಆಗಬೇಕಿತ್ತು. ಆದರೆ ಚಿತ್ರತಂಡ ಪ್ಲ್ಯಾನ್ ಬದಲಾಯಿಸಿದೆ.

ಹೌದು, ಮನಮೋಹನ್ ಸಿಂಗ್ ಅವರ ನಿಧನದಿಂದಾಗಿ ‘ಸಿಕಂದರ್’ ಸಿನಿಮಾದ ಟೀಸರ್​ ಬಿಡುಗಡೆಯನ್ನು ರದ್ದು ಮಾಡಲಾಗಿದೆ. ಹಾಗಂತ ಅಭಿಮಾನಿಗಳಿಗೆ ನಿರಾಸೆ ಮಾಡಲು ಕೂಡ ಸಾಧ್ಯವಿಲ್ಲ. ಹಾಗಾಗಿ, ಹೆಚ್ಚು ಕಾಯಿಸದೇ ಕೇವಲ ಒಂದು ದಿನಕ್ಕೆ ಟೀಸರ್​ ಬಿಡುಗಡೆ ದಿನಾಂಕವನ್ನು ಮುಂದೂಡಲು ಸಲ್ಮಾನ್​ ಖಾನ್​ ಮತ್ತು ಚಿತ್ರತಂಡದವರು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿದ್ದಾರೆ ಡಾ. ಮನಮೋಹನ್ ಸಿಂಗ್ ಹತ್ತಿರದ ಸಂಬಂಧಿಗಳು

ಹೊಸ ಪ್ಲ್ಯಾನ್ ಪ್ರಕಾರ, ‘ಸಿಕಂದರ್’ ಸಿನಿಮಾದ ಟೀಸರ್​ ಡಿಸೆಂಬರ್​ 28ರಂದು ರಿಲೀಸ್ ಮಾಡಲಾಗುವುದು. ಈ ಬಗ್ಗೆ ಚಿತ್ರತಂಡದಿಂದ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಸಾಜಿದ್ ನಾಡಿಯದ್ವಾಲಾ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅವರ ನಿರ್ಮಾಣ ಸಂಸ್ಥೆಯ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಟೀಸರ್​ ಬಗ್ಗೆ ಅಪ್​ಡೇಡ್​ ನೀಡಲಾಗಿದೆ.

‘ಗೌರವಾನ್ವಿತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ನಮ್ಮ ಸಿಕಂದರ್ ಚಿತ್ರದ ಟೀಸರ್​ ರಿಲೀಸ್ ಸಮಯವನ್ನು ಡಿಸೆಂಬರ್​ 28ರ ಬೆಳಗ್ಗೆ 11 ಗಂಟೆ 7 ನಿಮಿಷಕ್ಕೆ ಮುಂದೂಡಲಾಗಿದೆ. ಅವರ ನಿಧನದ ನೋವಿನಲ್ಲಿ ನಾವು ಸಹ ಇದ್ದೇವೆ. ಅರ್ಥಮಾಡಿಕೊಂಡಿದ್ದಕ್ಕೆ ಧನ್ಯವಾದಗಳು’ ಎಂದು ಪೋಸ್ಟ್​ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ