AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಮೋಹನ್ ಸಿಂಗ್ ನಿಧನದ ಬಳಿಕ ಪ್ರಮುಖ ನಿರ್ಧಾರ ತೆಗೆದುಕೊಂಡ ಸಲ್ಮಾನ್ ಖಾನ್

ಡಿಸೆಂಬರ್​ 26ರಂದು ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆತ್ಮಕ್ಕೆ ಶಾಂತಿ ಕೋರಿ ಅನೇಕರು ಪೋಸ್ಟ್ ಮಾಡಿದ್ದಾರೆ. ಸಲ್ಮಾನ್ ಖಾನ್ ಅಭಿನಯದ ‘ಸಿಕಂದರ್​’ ಸಿನಿಮಾ ತಂಡ ಕೂಡ ಮಾಜಿ ಪ್ರಧಾನಿಯ ಅಗಲಿಕೆಗೆ ಸಂತಾಪ ಸೂಚಿಸಿದೆ. ಡಿಸೆಂಬರ್​ 27ರಂದು ರಿಲೀಸ್​ ಆಗಿಬೇಕಿದ್ದ ‘ಸಿಕಂದರ್​’ ಟೀಸರ್​ ವಿಚಾರದಲ್ಲಿ ಬದಲಾವಣೆ ಆಗಿದೆ.

ಮನಮೋಹನ್ ಸಿಂಗ್ ನಿಧನದ ಬಳಿಕ ಪ್ರಮುಖ ನಿರ್ಧಾರ ತೆಗೆದುಕೊಂಡ ಸಲ್ಮಾನ್ ಖಾನ್
Salman Khan, Manmohan Singh
Follow us
ಮದನ್​ ಕುಮಾರ್​
|

Updated on: Dec 27, 2024 | 8:32 PM

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ. ರಾಜಕೀಯ ಕ್ಷೇತ್ರದ ಮಂದಿ ಮಾತ್ರವಲ್ಲದೇ ಸಿನಿಮಾ ಸೆಲೆಬ್ರಿಟಿಗಳು ಕೂಡ ಕಂಬನಿ ಮಿಡಿದಿದ್ದಾರೆ. ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಎಲ್ಲ ಬಗೆಯ ಸಂಭ್ರಮಾಚರಣೆಗಳಿಗೆ ಬ್ರೇಕ್​ ಹಾಕಲಾಗಿದೆ. ಈ ಮೊದಲೇ ನಿಗದಿ ಆಗಿದ್ದ ಕಾರ್ಯಕ್ರಮಗಳು ಕೂಡ ರದ್ದಾಗಿವೆ. ನಟ ಸಲ್ಮಾನ್ ಖಾನ್ ಸಹ ಒಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದ್ದಾರೆ. ಇದು ಅವರ ‘ಸಿಕಂದರ್​’ ಸಿನಿಮಾಗೆ ಸಂಬಂಧಿಸಿದ ವಿಷಯ.

‘ಸಿಕಂದರ್​’ ಸಿನಿಮಾದಲ್ಲಿ ಸಲ್ಮಾನ್​ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿದ್ದಾರೆ. ಖ್ಯಾತ ನಿರ್ದೇಶಕ ಮುರುಗದಾಸ್ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಚಿತ್ರದ ಟೀಸರ್​ ನೋಡಲು ಎಲ್ಲರೂ ಕಾದಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಡಿಸೆಂಬರ್​ 27ರಂದು ‘ಸಿಕಂದರ್​’ ಟೀಸರ್​ ರಿಲೀಸ್ ಆಗಬೇಕಿತ್ತು. ಆದರೆ ಚಿತ್ರತಂಡ ಪ್ಲ್ಯಾನ್ ಬದಲಾಯಿಸಿದೆ.

ಹೌದು, ಮನಮೋಹನ್ ಸಿಂಗ್ ಅವರ ನಿಧನದಿಂದಾಗಿ ‘ಸಿಕಂದರ್’ ಸಿನಿಮಾದ ಟೀಸರ್​ ಬಿಡುಗಡೆಯನ್ನು ರದ್ದು ಮಾಡಲಾಗಿದೆ. ಹಾಗಂತ ಅಭಿಮಾನಿಗಳಿಗೆ ನಿರಾಸೆ ಮಾಡಲು ಕೂಡ ಸಾಧ್ಯವಿಲ್ಲ. ಹಾಗಾಗಿ, ಹೆಚ್ಚು ಕಾಯಿಸದೇ ಕೇವಲ ಒಂದು ದಿನಕ್ಕೆ ಟೀಸರ್​ ಬಿಡುಗಡೆ ದಿನಾಂಕವನ್ನು ಮುಂದೂಡಲು ಸಲ್ಮಾನ್​ ಖಾನ್​ ಮತ್ತು ಚಿತ್ರತಂಡದವರು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿದ್ದಾರೆ ಡಾ. ಮನಮೋಹನ್ ಸಿಂಗ್ ಹತ್ತಿರದ ಸಂಬಂಧಿಗಳು

ಹೊಸ ಪ್ಲ್ಯಾನ್ ಪ್ರಕಾರ, ‘ಸಿಕಂದರ್’ ಸಿನಿಮಾದ ಟೀಸರ್​ ಡಿಸೆಂಬರ್​ 28ರಂದು ರಿಲೀಸ್ ಮಾಡಲಾಗುವುದು. ಈ ಬಗ್ಗೆ ಚಿತ್ರತಂಡದಿಂದ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಸಾಜಿದ್ ನಾಡಿಯದ್ವಾಲಾ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅವರ ನಿರ್ಮಾಣ ಸಂಸ್ಥೆಯ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಟೀಸರ್​ ಬಗ್ಗೆ ಅಪ್​ಡೇಡ್​ ನೀಡಲಾಗಿದೆ.

‘ಗೌರವಾನ್ವಿತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ನಮ್ಮ ಸಿಕಂದರ್ ಚಿತ್ರದ ಟೀಸರ್​ ರಿಲೀಸ್ ಸಮಯವನ್ನು ಡಿಸೆಂಬರ್​ 28ರ ಬೆಳಗ್ಗೆ 11 ಗಂಟೆ 7 ನಿಮಿಷಕ್ಕೆ ಮುಂದೂಡಲಾಗಿದೆ. ಅವರ ನಿಧನದ ನೋವಿನಲ್ಲಿ ನಾವು ಸಹ ಇದ್ದೇವೆ. ಅರ್ಥಮಾಡಿಕೊಂಡಿದ್ದಕ್ಕೆ ಧನ್ಯವಾದಗಳು’ ಎಂದು ಪೋಸ್ಟ್​ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!