AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಗನಕ್ಕೇರಿದ ಸಲ್ಮಾನ್ ಖಾನ್ ಸಿನಿಮಾ ಟಿಕೆಟ್ ದರ, ಬೆಂಗಳೂರಿನಲ್ಲಿ ಎಷ್ಟು?

Salman Khan: ಸಲ್ಮಾನ್ ಖಾನ್ ನಟನೆಯ ‘ಸಿಖಂಧರ್’ ಸಿನಿಮಾ ಮಾರ್ಚ್ 30ರಂದು ಬಿಡುಗಡೆ ಆಗಲಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಈಗಾಗಲೇ ಆರಂಭವಾಗಿದೆ. ಸಿನಿಮಾದ ಟಿಕೆಟ್ ದರದ ಬಗ್ಗೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂಬೈ ಸೇರಿದಂತೆ ಕೆಲವು ಪ್ರಮುಖ ನಗರಗಳಲ್ಲಿ ‘ಸಿಖಂಧರ್’ ಟಿಕೆಟ್ ಬೆಲೆ ಗಗನಕ್ಕೇರಿದೆ.

ಗಗನಕ್ಕೇರಿದ ಸಲ್ಮಾನ್ ಖಾನ್ ಸಿನಿಮಾ ಟಿಕೆಟ್ ದರ, ಬೆಂಗಳೂರಿನಲ್ಲಿ ಎಷ್ಟು?
Sikandar
ಮಂಜುನಾಥ ಸಿ.
|

Updated on: Mar 28, 2025 | 12:38 PM

Share

ಸಲ್ಮಾನ್ ಖಾನ್ (Salman Khan) ನಟನೆಯ ‘ಸಿಖಂಧರ್’ ಸಿನಿಮಾ ಮಾರ್ಚ್ 30 ರಂದು ಬಿಡುಗಡೆ ಆಗುತ್ತಿದೆ. ಕೆಲ ದಿನಗಳ ಹಿಂದೆಯೇ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದ್ದು, 50 ಸಾವಿರಕ್ಕೂ ಹೆಚ್ಚು ಟಿಕೆಟ್​ಗಳು ಮುಂಚಿತವಾಗಿ ಬುಕಿಂಗ್ ಆಗಿವೆ. ಈ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ‘ಸಿಖಂಧರ್’ ಸಿನಿಮಾದ ಟಿಕೆಟ್ ಬೆಲೆಯ ಬಗ್ಗೆ ಕೆಲ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಮುಂಬೈನಲ್ಲಿ ‘ಸಿಖಂಧರ್’ ಸಿನಿಮಾ ಟಿಕೆಟ್ ಬೆಲೆಗಳು ಗಗನಕ್ಕೇರಿವೆ ಎಂಬ ದೂರು ಕೇಳಿ ಬರುತ್ತಿವೆ. ಬೆಂಗಳೂರಿನಲ್ಲಿಯೂ ಕೆಲ ಚಿತ್ರಮಂದಿರಗಳಲ್ಲಿ ಟಿಕೆಟ್ ಬೆಲೆ ಬಲು ದುಬಾರಿಯಾಗಿದೆ.

ಮುಂಬೈನಲ್ಲಿ ‘ಸಿಖಂಧರ್’ ಸಿನಿಮಾದ ಗರಿಷ್ಟ ಟಿಕೆಟ್ ಬೆಲೆ ಬರೋಬ್ಬರಿ 2200 ರೂಪಾಯಿಗಳಿವೆ. ಕನಿಷ್ಟ ಟಿಕೆಟ್ ಬೆಲೆ ಮಲ್ಟಿಪ್ಲೆಕ್ಸ್​ಗಳಲ್ಲಿ 350 ರಿಂದ ಪ್ರಾರಂಭವಾಗುತ್ತಿದೆ. ಈದ್ ಹಬ್ಬದ ಪ್ರಯುಕ್ತ ‘ಸಿಖಂಧರ್’ ಸಿನಿಮಾ ಬಿಡುಗಡೆ ಆಗುತ್ತಿದ್ದು, ಈ ಟಿಕೆಟ್ ದರಗಳು ಬಲು ದುಬಾರಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಕೆಲ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಮಾತ್ರ 200-250 ರೂಪಾಯಿಗೆ ಟಿಕೆಟ್ ಮಾರಾಟ ಮಾಡಲಾಗುತ್ತಿದೆ.

ಬೆಂಗಳೂರಿನಲ್ಲಿಯೂ ಸಹ ಹಲವೆಡೆ ದುಬಾರಿ ಬೆಲೆಗೆ ಟಿಕೆಟ್ ಮಾರಾಟ ಆಗುತ್ತಿದೆ. ಬೆಂಗಳೂರಿನಲ್ಲಿ ‘ಸಿಖಂಧರ್’ ಸಿನಿಮಾದ ಗರಿಷ್ಠ ಟಿಕೆಟ್ ಬೆಲೆ 1050 ರೂಪಾಯಿಗಳಿವೆ. ಬೆಂಗಳೂರಿನ ಬಹುತೇಕ ಮಲ್ಟಿಪ್ಲೆಕ್ಸ್​ಗಳಲ್ಲಿ ಟಿಕೆಟ್ ಬೆಲೆ 250-300-500 ರವರೆಗೆ ಇವೆ. ಕೆಲವು ಚಿತ್ರಮಂದಿರದಲ್ಲಿ 190-200 ಕ್ಕೂ ಟಿಕೆಟ್​ ಮಾರಾಟವಾಗುತ್ತಿವೆ. ಬೆಂಗಳೂರಿನಲ್ಲಿ ‘ಸಿಖಂಧರ್’ ಸಿನಿಮಾಕ್ಕೆ ಭಾರಿ ಸಂಖ್ಯೆಯ ಸ್ಕ್ರೀನ್​ಗಳನ್ನು ನೀಡಲಾಗಿದ್ದು, ಅಡ್ವಾನ್ಸ್ ಬುಕಿಂಗ್ ಸಹ ಜೋರಾಗಿಯೇ ನಡೆದಿದೆ.

ಇದನ್ನೂ ಓದಿ:ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ, ದೇವರಿಗೆ ಬಿಟ್ಟಿದ್ದು: ಸಲ್ಮಾನ್ ಖಾನ್

ಇದೇ ಸಮಯದಲ್ಲಿ ಮಾಧ್ಯಮಗಳೊಟ್ಟಿಗೆ ಸಿನಿಮಾಗಳ ಟಿಕೆಟ್ ದರಗಳ ಬಗ್ಗೆ ಮಾತನಾಡಿರುವ ಸಲ್ಮಾನ್ ಖಾನ್, ಇಡೀ ದೇಶದಲ್ಲಿ ಸಿನಿಮಾ ಟಿಕೆಟ್ ದರದಲ್ಲಿ ಏಕರೂಪತೆ ಬರಬೇಕು ಅದು ಮಾತ್ರವೇ ಅಲ್ಲದೆ ಮಾಲ್​ಗಳಲ್ಲಿ ಸಿಗುವ ಆಹಾರ ಮತ್ತು ಪಾನೀಯಗಳ ಬೆಲೆಗಳ ಇಳಿಕೆ ಆಗಬೇಕು ಎಂದಿದ್ದಾರೆ. ಕರ್ನಾಟಕ ಸರ್ಕಾರದ ಇತ್ತೀಚೆಗಿನ ಆದೇಶವನ್ನು ಸಹ ಅವರು ಉಲ್ಲೇಖಿಸಿದ್ದು, ಅದು ಒಳ್ಳೆಯದೇ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಸಿಖಂಧರ್’ ಸಿನಿಮಾನಲ್ಲಿ ಸಲ್ಮಾನ್ ಖಾನ್ ಜೊತೆಗೆ ರಶ್ಮಿಕಾ ಮಂದಣ್ಣ ಸಹ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ತಮಿಳಿನ ಖ್ಯಾತ ನಿರ್ದೇಶಕ ಎಆರ್ ಮುರುಗದಾಸ್, ಸಾಜಿದ್ ನಾಡಿಯಾವಾಲ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸಿನಿಮಾದಲ್ಲಿ ಕಾಜಲ್ ಅಗರ್ವಾಲ್, ಕಟ್ಟಪ್ಪ ಸತ್ಯರಾಜ್, ಸುನಿಲ್ ಶೆಟ್ಟಿ ಇನ್ನೂ ಹಲವರು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ