Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್-ರಶ್ಮಿಕಾ ಸಿನಿಮಾ ಬಿಡುಗಡೆ ದಿನಾಂಕ ಪ್ರಕಟ, ಹಬ್ಬಗಳೇ ಟಾರ್ಗೆಟ್

Salman Khan: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ ಹೊಸ ಸಿನಿಮಾ ‘ಸಿಕಂಧರ್’ ಇತ್ತೀಚೆಗಷ್ಟೆ ಚಿತ್ರೀಕರಣ ಮುಗಿಸಿದೆ. ಈಗಾಗಲೇ ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಲಾಗಿದೆ. ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಸಿನಿಮಾ ಬಿಡುಗಡೆ ದಿನಾಂಕ ನಿಗದಿಪಡಿಸಿದೆ ಚಿತ್ರತಂಡ. ರಶ್ಮಿಕಾ ಮಂದಣ್ಣ, ಮೊದಲ ಬಾರಿಗೆ ಸಲ್ಮಾನ್ ಖಾನ್ ಜೊತೆಗೆ ನಟಿಸಿದ್ದಾರೆ ಈ ಸಿನಿಮಾನಲ್ಲಿ.

ಸಲ್ಮಾನ್-ರಶ್ಮಿಕಾ ಸಿನಿಮಾ ಬಿಡುಗಡೆ ದಿನಾಂಕ ಪ್ರಕಟ, ಹಬ್ಬಗಳೇ ಟಾರ್ಗೆಟ್
Sikandar Movie
Follow us
ಮಂಜುನಾಥ ಸಿ.
|

Updated on:Mar 19, 2025 | 8:41 PM

ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣ ಒಟ್ಟಿಗೆ ನಟಿಸಿರುವ ‘ಸಿಕಂಧರ್’ ಸಿನಿಮಾದ ಚಿತ್ರೀಕರಣ ಕೆಲ ದಿನಗಳ ಹಿಂದಷ್ಟೆ ಮುಗಿದಿದೆ. ಸಲ್ಮಾನ್ ಖಾನ್, ಜೀವ ಬೆದರಿಕೆ ಬೆನ್ನಲ್ಲೆ ಈ ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಂಡು ಸಿನಿಮಾ ಮುಗಿಸಿಕೊಟ್ಟಿದ್ದಾರೆ. ಮೊದಲ ಬಾರಿಗೆ ರಶ್ಮಿಕಾ ಮಂದಣ್ಣ ಸಲ್ಮಾನ್ ಖಾನ್ ಜೊತೆಗೆ ನಟಿಸಿದ್ದಾರೆ. ಇದೀಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಈದ್ ಮಾತ್ರವೇ ಅಲ್ಲದೆ ಹಿಂದೂ ಹಬ್ಬವನ್ನೂ ಸಹ ಗಮನದಲ್ಲಿಟ್ಟುಕೊಂಡು ಸಿನಿಮಾದ ಬಿಡುಗಡೆ ದಿನಾಂಕ ನಿಗದಿ ಮಾಡಲಾಗಿದೆ.

ಈದ್, ರಂಜಾನ್ ಹಬ್ಬಗಳಿಗೆ ಸಲ್ಮಾನ್ ಖಾನ್​ ನಟನೆಯ ಸಿನಿಮಾ ಬಿಡುಗಡೆ ಆಗುವುದು ಸಾಮಾನ್ಯ. ‘ಸಿಕಂಧರ್’ ಸಿನಿಮಾ ಚಿತ್ರೀಕರಣ ಆರಂಭದ ಸಮಯದಲ್ಲಿಯೇ ಈ ಸಿನಿಮಾ ಈದ್ ಹಬ್ಬಕ್ಕೆ ಬಿಡುಗಡೆ ಆಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಅಂತೆಯೇ ‘ಸಿಕಂಧರ್’ ಸಿನಿಮಾವನ್ನು ಈದ್​​ಗೆ ಮುಂಚಿತವಾಗಿ ಬಿಡುಗಡೆ ಮಾಡಲಾಗುತ್ತಿದೆ. ಈದ್ ಮಾತ್ರವೇ ಅಲ್ಲದೆ ಯುಗಾದಿ ಹಬ್ಬವನ್ನೂ ಸಹ ಗಣನೆಗೆ ತೆಗೆದುಕೊಂಡು ಬಿಡುಗಡೆ ದಿನಾಂಕ ನಿರ್ಧರಿಸಿದೆ ಚಿತ್ರತಂಡ.

‘ಸಿಕಂಧರ್’ ಸಿನಿಮಾ ಮಾರ್ಚ್ 30 ರಂದು ತೆರೆಗೆ ಬರಲಿದೆ. ಅದೇ ದಿನ ಯುಗಾದಿ ಹಬ್ಬವೂ ಸಹ ಇದೆ. ಯುಗಾದಿ ಹಬ್ಬವನ್ನು ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ಹೆಸರುಗಳಲ್ಲಿ ಆಚರಣೆ ಮಾಡಲಾಗುತ್ತದೆ. ಹಲವು ರಾಜ್ಯಗಳಲ್ಲಿ ಯುಗಾದಿ ಹಬ್ಬಕ್ಕೆ ರಜೆ ಸಹ ಇದೆ. ಗುಡಿ ಪಡವಾ ಎಂಬ ಹಬ್ಬವೂ ಅದೇ ದಿನ ಇದೆ. ಅದರ ಮಾರನೇಯ ದಿನ ಅಂದರೆ ಮಾರ್ಚ್ 31 ರಂದು ಈದ್ ಹಬ್ಬ ಆಚರಣೆ ಮಾಡಲಾಗುತ್ತದೆ. ಕೆಲವೆಡೆ ಏಪ್ರಿಲ್ 1 ರಂದು ಸಹ ಈದ್ ಹಬ್ಬದ ಆಚರಣೆ ಮಾಡಲಾಗುತ್ತದೆ.

ಇದನ್ನೂ ಓದಿ:ಸಲ್ಮಾನ್ ಖಾನ್ ಹತ್ಯೆ ಪ್ರಕರಣದಲ್ಲಿ ಹೊಸ ಹೆಸರು ಮುನ್ನಲೆಗೆ

‘ಸಿಕಂಧರ್’ ಸಿನಿಮಾ ಅನ್ನು ತಮಿಳಿನ ಮುರುಗದಾಸ್ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ‘ಘಜಿನಿ’, ‘ಕತ್ತಿ’, ‘ತುಪಾಕಿ’, ‘ಸರ್ಕಾರ್’, ‘ದರ್ಬಾರ್’ ಇನ್ನೂ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇದೀಗ ಮೊದಲ ಬಾರಿಗೆ ಸಲ್ಮಾನ್ ಖಾನ್​ಗಾಗಿ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಸಿನಿಮಾ ನಿರ್ಮಾಣ ಮಾಡಿರುವುದು ಸಲ್ಮಾನ್ ಖಾನ್​ರ ಆತ್ಮೀಯ ಗೆಳೆಯ ಸಾಜಿದ್ ನಾಡಿಯಾವಾಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:40 pm, Wed, 19 March 25

ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಯಾರು ಮಾಡಿಸುತ್ತಿದ್ದಾರೆ ಅಂತ ಹೇಳಿದರೆ ರಾಜಕೀಯ ಆರೋಪವಾಗುತ್ತದೆ: ಸಚಿವ
ಯಾರು ಮಾಡಿಸುತ್ತಿದ್ದಾರೆ ಅಂತ ಹೇಳಿದರೆ ರಾಜಕೀಯ ಆರೋಪವಾಗುತ್ತದೆ: ಸಚಿವ
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್
ಸಚಿವ ಸತೀಶ್ ಜಾರಕಿಹೊಳಿ ಬಾಂಬ್​: ನಮ್ಮ ಮಂತ್ರಿ ಮೇಲೆ ಹನಿಟ್ರ್ಯಾಪ್ ಆಗಿದೆ​
ಸಚಿವ ಸತೀಶ್ ಜಾರಕಿಹೊಳಿ ಬಾಂಬ್​: ನಮ್ಮ ಮಂತ್ರಿ ಮೇಲೆ ಹನಿಟ್ರ್ಯಾಪ್ ಆಗಿದೆ​
ಸಾರ್ವಜನಿಕ ಹಣ ಪೋಲು ಮಾಡುವ ವಿಷಯದಲ್ಲಿ ಕಾಂಗ್ರೆಸ್ ವಿವಿ ಆರಂಭಿಸಿದೆ: ಅಶೋಕ
ಸಾರ್ವಜನಿಕ ಹಣ ಪೋಲು ಮಾಡುವ ವಿಷಯದಲ್ಲಿ ಕಾಂಗ್ರೆಸ್ ವಿವಿ ಆರಂಭಿಸಿದೆ: ಅಶೋಕ
ನಮ್ಮ ನಡತೆ ಸರಿಯಾಗಿದ್ದರೆ ಯಾರೂ ಟಾರ್ಗೆಟ್ ಮಾಡಲ್ಲ: ಬಾಲಕೃಷ್ಣ
ನಮ್ಮ ನಡತೆ ಸರಿಯಾಗಿದ್ದರೆ ಯಾರೂ ಟಾರ್ಗೆಟ್ ಮಾಡಲ್ಲ: ಬಾಲಕೃಷ್ಣ
ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಜೋಶಿ ಏನಂದ್ರು?
ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಜೋಶಿ ಏನಂದ್ರು?