AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ‘ಮಹಿಳೆಯರು ದೇಹ ಮುಚ್ಚಿಕೊಂಡಷ್ಟೂ ಉತ್ತಮ’: ಚರ್ಚೆ ಹುಟ್ಟುಹಾಕಿದ ಸಲ್ಮಾನ್​ ಖಾನ್​ ಹೇಳಿಕೆ

Aap ki Adalat: ‘ಒಂದು ಡೀಸೆಂಟ್​ ಸಿನಿಮಾ ಮಾಡಿದಾಗ ಇಡೀ ಕುಟುಂಬದವರು ಬಂದು ನೋಡುತ್ತಾರೆ. ಅದರಲ್ಲಿ ಯಾವುದೇ ದ್ವಂದ್ವ ನೀತಿ ಇಲ್ಲ’ ಎಂದು ಸಲ್ಮಾನ್​ ಖಾನ್​ ಹೇಳಿದ್ದಾರೆ.

Salman Khan: ‘ಮಹಿಳೆಯರು ದೇಹ ಮುಚ್ಚಿಕೊಂಡಷ್ಟೂ ಉತ್ತಮ’: ಚರ್ಚೆ ಹುಟ್ಟುಹಾಕಿದ ಸಲ್ಮಾನ್​ ಖಾನ್​ ಹೇಳಿಕೆ
ಸಲ್ಮಾನ್ ಖಾನ್
ಮದನ್​ ಕುಮಾರ್​
|

Updated on: Apr 30, 2023 | 1:59 PM

Share

ಬೇರೆ ನಟರಿಗಿಂತ ಸಲ್ಮಾನ್​ ಖಾನ್ (Salman Khan)​ ಭಿನ್ನ. ತಮ್ಮ ಸಿನಿಮಾಗಳ ಶೂಟಿಂಗ್​ ಸೆಟ್​ನಲ್ಲಿ ಅವರು ಒಂದಷ್ಟು ನಿಯಮಗಳನ್ನು ವಿಧಿಸುತ್ತಾರೆ ಎಂಬ ಮಾತಿದೆ. ಅದರಲ್ಲೂ ಮಹಿಳೆಯರ ಬಟ್ಟೆ ವಿಚಾರದಲ್ಲಿ ಅವರು ಕೊಂಚ ಕಟ್ಟುನಿಟ್ಟು ಎಂಬ ಸುದ್ದಿ ಕೂಡ ಹರಡಿದೆ. ಕೆಲವೇ ದಿನಗಳ ಹಿಂದೆ ನಟಿ ಪಲಕ್​ ತಿವಾರಿ (Palak Tiwari) ಅವರು ಈ ಕುರಿತು ನೀಡಿದ ಹೇಳಿಕೆ ವೈರಲ್​ ಆಗಿತ್ತು. ಆದರೆ ನಂತರದ ದಿನಗಳಲ್ಲಿ ಅವರು ತಮ್ಮ ಹೇಳಿಕೆಗೆ ಬೇರೆ ರೀತಿಯ ಸಮರ್ಥನೆ ನೀಡಲು ಪ್ರಯತ್ನಿಸಿದ್ದರು. ಆದರೆ ಈಗ ಸ್ವತಃ ಸಲ್ಮಾನ್​ ಖಾನ್​ ಅವರು ಈ ವಿಚಾರದ ಬಗ್ಗೆ ಮೌನ ಮುರಿದಿದ್ದಾರೆ. ಮಹಿಳೆಯರ ಬಟ್ಟೆ (Dress Code) ಬಗ್ಗೆ ತಮಗೆ ಇರುವ ಅಭಿಪ್ರಾಯ ಏನು ಎಂಬುದನ್ನು ಅವರು ಬಹಿರಂಗವಾಗಿ ಹೇಳಿದ್ದಾರೆ. ಅವರ ಈ ಹೇಳಿಕೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಇತ್ತೀಚೆಗೆ ಸಲ್ಮಾನ್​ ಖಾನ್​ ಅವರು ‘ಆಪ್​ ಕಿ ಅದಾಲತ್​’ ಶೋನಲ್ಲಿ ಭಾಗವಹಿಸಿದ್ದರು. ಆಗ ಅವರಿಗೆ ಈ ಬಗ್ಗೆ ಪ್ರಶ್ನೆ ಎದುರಾಯಿತು. ಅದಕ್ಕೆ ಅವರು ನೇರವಾಗಿ ಉತ್ತರ ನೀಡಿದ್ದಾರೆ. ‘ಒಂದು ಡೀಸೆಂಟ್​ ಸಿನಿಮಾ ಮಾಡಿದಾಗ ಇಡೀ ಕುಟುಂಬದವರು ಬಂದು ನೋಡುತ್ತಾರೆ. ಅದರಲ್ಲಿ ಯಾವುದೇ ದ್ವಂದ್ವ ನೀತಿ ಇಲ್ಲ. ಮಹಿಳೆಯ ದೇಹ ಬಹಳ ಮೌಲ್ಯಯುತವಾದ್ದದ್ದು ಅಂತ ನಾನು ಭಾವಿಸಿದ್ದೇನೆ. ಹಾಗಾಗಿ ಹೆಚ್ಚು ದೇಹ ಮುಚ್ಚಿಕೊಂಡಷ್ಟೂ ಒಳ್ಳೆಯದು ಎಂದು ನನಗೆ ಅನಿಸುತ್ತದೆ’ ಎಂದಿ​ದ್ದಾರೆ ಸಲ್ಮಾನ್​ ಖಾನ್​.

Salman Khan: ಒಂದು ದಿನದ ಮಟ್ಟಿಗೆ ತಮ್ಮ ಪ್ರೀತಿಯ ವಸ್ತುವನ್ನು ಆಮಿರ್​ ಖಾನ್​ಗೆ ನೀಡಿದ ಸಲ್ಮಾನ್​ ಖಾನ್​

ಇದನ್ನೂ ಓದಿ
Image
ಸಲ್ಮಾನ್ ಖಾನ್​ಗೆ ಹ್ಯಾಂಡ್​​ಶೇಕ್ ಮಾಡಲು ಬಂದ ಅಭಿಮಾನಿ; ಸಿಟ್ಟಿನಿಂದ ತಳ್ಳಿದ ಸಲ್ಲು ಬಾಡಿಗಾರ್ಡ್​
Image
Ayush Sharma: ಅರ್ಪಿತಾ ಖಾನ್​ ರೀತಿ ಇರುವ ಹುಡುಗಿಯನ್ನು ಸಲ್ಲು ಹೀರೋಯಿನ್​ ಮಾಡಿಕೊಳ್ತಾರಾ? ನೆಟ್ಟಿಗರ ಪ್ರಶ್ನೆ
Image
Kisi Ka Bhai Kisi Ki Jaan: ಸೋಮವಾರದ ಪರೀಕ್ಷೆಯಲ್ಲಿ ಸಲ್ಲು ಸಿನಿಮಾ ಪಾಸ್​; 100 ಕೋಟಿ ರೂ. ಗಡಿ ಮುಟ್ಟಲು ಇನ್ನೆಷ್ಟು ಬಾಕಿ?
Image
Salman Khan: ‘ಫ್ಯಾಮಿಲಿ ಎಂಟರ್​ಟೇನರ್​’; ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

‘ಸಮಸ್ಯೆ ಇರುವುದು ಹುಡುಗಿಯರಲ್ಲಿ ಅಲ್ಲ. ಸಮಸ್ಯೆ ಇರುವುದು ಹುಡುಗರಲ್ಲಿ. ನಿಮ್ಮ ತಾಯಿ, ತಂಗಿ, ಪತ್ನಿಯನ್ನು ಹುಡುಗರು ಆ ದೃಷ್ಟಿಯಿಂದ ನೋಡುವುದು ನನಗೆ ಇಷ್ಟ ಆಗುವುದಿಲ್ಲ’ ಎಂದು ಸಲ್ಮಾನ್​ ಖಾನ್​ ಹೇಳಿದ್ದಾರೆ. ಸಲ್ಲು ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಯಿತು. ಆ ಸಿನಿಮಾದಲ್ಲಿ ನಟಿಸಿದ ಪಲಕ್​ ತಿವಾರಿ ಅವರು ಸಂದರ್ಶನವೊಂದರಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಬಳಿಕ ಇಷ್ಟೆಲ್ಲ ಚರ್ಚೆ ಆರಂಭ ಆಗಿತ್ತು.

ಬಾಲಿವುಡ್​ನಲ್ಲಿ ಸಲ್ಮಾನ್​ ಖಾನ್​ ಅವರಿಗೆ ಸಖತ್ ಬೇಡಿಕೆ ಇದೆ. ‘ಟೈಗರ್​ 3’ ಸಿನಿಮಾದ ಕೆಲಸಗಳಲ್ಲಿ ಅವರು ನಿರತರಾಗಿದ್ದಾರೆ. ಈ ನಡುವೆ ಅವರಿಗೆ ಬೆದರಿಕೆ ಕರೆಗಳು ಕೂಡ ಹೆಚ್ಚಾಗಿವೆ. ಹಾಗಾಗಿ ತಮ್ಮ ಸುರಕ್ಷತೆ ಬಗ್ಗೆ ಅವರು ಗಮನ ಹರಿಸಿದ್ದಾರೆ. ಇತ್ತೀಚೆಗೆ ಸಲ್ಮಾನ್​ ಖಾನ್​ ಅವರು ಹೊಸ ಬುಲೆಟ್​ ಪ್ರೂಫ್​ ಕಾರು ಖರೀದಿಸಿದ ಬಗ್ಗೆ ಸುದ್ದಿ ಆಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ