AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ‘ಮಹಿಳೆಯರು ದೇಹ ಮುಚ್ಚಿಕೊಂಡಷ್ಟೂ ಉತ್ತಮ’: ಚರ್ಚೆ ಹುಟ್ಟುಹಾಕಿದ ಸಲ್ಮಾನ್​ ಖಾನ್​ ಹೇಳಿಕೆ

Aap ki Adalat: ‘ಒಂದು ಡೀಸೆಂಟ್​ ಸಿನಿಮಾ ಮಾಡಿದಾಗ ಇಡೀ ಕುಟುಂಬದವರು ಬಂದು ನೋಡುತ್ತಾರೆ. ಅದರಲ್ಲಿ ಯಾವುದೇ ದ್ವಂದ್ವ ನೀತಿ ಇಲ್ಲ’ ಎಂದು ಸಲ್ಮಾನ್​ ಖಾನ್​ ಹೇಳಿದ್ದಾರೆ.

Salman Khan: ‘ಮಹಿಳೆಯರು ದೇಹ ಮುಚ್ಚಿಕೊಂಡಷ್ಟೂ ಉತ್ತಮ’: ಚರ್ಚೆ ಹುಟ್ಟುಹಾಕಿದ ಸಲ್ಮಾನ್​ ಖಾನ್​ ಹೇಳಿಕೆ
ಸಲ್ಮಾನ್ ಖಾನ್
ಮದನ್​ ಕುಮಾರ್​
|

Updated on: Apr 30, 2023 | 1:59 PM

Share

ಬೇರೆ ನಟರಿಗಿಂತ ಸಲ್ಮಾನ್​ ಖಾನ್ (Salman Khan)​ ಭಿನ್ನ. ತಮ್ಮ ಸಿನಿಮಾಗಳ ಶೂಟಿಂಗ್​ ಸೆಟ್​ನಲ್ಲಿ ಅವರು ಒಂದಷ್ಟು ನಿಯಮಗಳನ್ನು ವಿಧಿಸುತ್ತಾರೆ ಎಂಬ ಮಾತಿದೆ. ಅದರಲ್ಲೂ ಮಹಿಳೆಯರ ಬಟ್ಟೆ ವಿಚಾರದಲ್ಲಿ ಅವರು ಕೊಂಚ ಕಟ್ಟುನಿಟ್ಟು ಎಂಬ ಸುದ್ದಿ ಕೂಡ ಹರಡಿದೆ. ಕೆಲವೇ ದಿನಗಳ ಹಿಂದೆ ನಟಿ ಪಲಕ್​ ತಿವಾರಿ (Palak Tiwari) ಅವರು ಈ ಕುರಿತು ನೀಡಿದ ಹೇಳಿಕೆ ವೈರಲ್​ ಆಗಿತ್ತು. ಆದರೆ ನಂತರದ ದಿನಗಳಲ್ಲಿ ಅವರು ತಮ್ಮ ಹೇಳಿಕೆಗೆ ಬೇರೆ ರೀತಿಯ ಸಮರ್ಥನೆ ನೀಡಲು ಪ್ರಯತ್ನಿಸಿದ್ದರು. ಆದರೆ ಈಗ ಸ್ವತಃ ಸಲ್ಮಾನ್​ ಖಾನ್​ ಅವರು ಈ ವಿಚಾರದ ಬಗ್ಗೆ ಮೌನ ಮುರಿದಿದ್ದಾರೆ. ಮಹಿಳೆಯರ ಬಟ್ಟೆ (Dress Code) ಬಗ್ಗೆ ತಮಗೆ ಇರುವ ಅಭಿಪ್ರಾಯ ಏನು ಎಂಬುದನ್ನು ಅವರು ಬಹಿರಂಗವಾಗಿ ಹೇಳಿದ್ದಾರೆ. ಅವರ ಈ ಹೇಳಿಕೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಇತ್ತೀಚೆಗೆ ಸಲ್ಮಾನ್​ ಖಾನ್​ ಅವರು ‘ಆಪ್​ ಕಿ ಅದಾಲತ್​’ ಶೋನಲ್ಲಿ ಭಾಗವಹಿಸಿದ್ದರು. ಆಗ ಅವರಿಗೆ ಈ ಬಗ್ಗೆ ಪ್ರಶ್ನೆ ಎದುರಾಯಿತು. ಅದಕ್ಕೆ ಅವರು ನೇರವಾಗಿ ಉತ್ತರ ನೀಡಿದ್ದಾರೆ. ‘ಒಂದು ಡೀಸೆಂಟ್​ ಸಿನಿಮಾ ಮಾಡಿದಾಗ ಇಡೀ ಕುಟುಂಬದವರು ಬಂದು ನೋಡುತ್ತಾರೆ. ಅದರಲ್ಲಿ ಯಾವುದೇ ದ್ವಂದ್ವ ನೀತಿ ಇಲ್ಲ. ಮಹಿಳೆಯ ದೇಹ ಬಹಳ ಮೌಲ್ಯಯುತವಾದ್ದದ್ದು ಅಂತ ನಾನು ಭಾವಿಸಿದ್ದೇನೆ. ಹಾಗಾಗಿ ಹೆಚ್ಚು ದೇಹ ಮುಚ್ಚಿಕೊಂಡಷ್ಟೂ ಒಳ್ಳೆಯದು ಎಂದು ನನಗೆ ಅನಿಸುತ್ತದೆ’ ಎಂದಿ​ದ್ದಾರೆ ಸಲ್ಮಾನ್​ ಖಾನ್​.

Salman Khan: ಒಂದು ದಿನದ ಮಟ್ಟಿಗೆ ತಮ್ಮ ಪ್ರೀತಿಯ ವಸ್ತುವನ್ನು ಆಮಿರ್​ ಖಾನ್​ಗೆ ನೀಡಿದ ಸಲ್ಮಾನ್​ ಖಾನ್​

ಇದನ್ನೂ ಓದಿ
Image
ಸಲ್ಮಾನ್ ಖಾನ್​ಗೆ ಹ್ಯಾಂಡ್​​ಶೇಕ್ ಮಾಡಲು ಬಂದ ಅಭಿಮಾನಿ; ಸಿಟ್ಟಿನಿಂದ ತಳ್ಳಿದ ಸಲ್ಲು ಬಾಡಿಗಾರ್ಡ್​
Image
Ayush Sharma: ಅರ್ಪಿತಾ ಖಾನ್​ ರೀತಿ ಇರುವ ಹುಡುಗಿಯನ್ನು ಸಲ್ಲು ಹೀರೋಯಿನ್​ ಮಾಡಿಕೊಳ್ತಾರಾ? ನೆಟ್ಟಿಗರ ಪ್ರಶ್ನೆ
Image
Kisi Ka Bhai Kisi Ki Jaan: ಸೋಮವಾರದ ಪರೀಕ್ಷೆಯಲ್ಲಿ ಸಲ್ಲು ಸಿನಿಮಾ ಪಾಸ್​; 100 ಕೋಟಿ ರೂ. ಗಡಿ ಮುಟ್ಟಲು ಇನ್ನೆಷ್ಟು ಬಾಕಿ?
Image
Salman Khan: ‘ಫ್ಯಾಮಿಲಿ ಎಂಟರ್​ಟೇನರ್​’; ‘ಕಿಸಿ ಕ ಭಾಯ್ ಕಿಸಿ ಕಿ ಜಾನ್​’ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

‘ಸಮಸ್ಯೆ ಇರುವುದು ಹುಡುಗಿಯರಲ್ಲಿ ಅಲ್ಲ. ಸಮಸ್ಯೆ ಇರುವುದು ಹುಡುಗರಲ್ಲಿ. ನಿಮ್ಮ ತಾಯಿ, ತಂಗಿ, ಪತ್ನಿಯನ್ನು ಹುಡುಗರು ಆ ದೃಷ್ಟಿಯಿಂದ ನೋಡುವುದು ನನಗೆ ಇಷ್ಟ ಆಗುವುದಿಲ್ಲ’ ಎಂದು ಸಲ್ಮಾನ್​ ಖಾನ್​ ಹೇಳಿದ್ದಾರೆ. ಸಲ್ಲು ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಯಿತು. ಆ ಸಿನಿಮಾದಲ್ಲಿ ನಟಿಸಿದ ಪಲಕ್​ ತಿವಾರಿ ಅವರು ಸಂದರ್ಶನವೊಂದರಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಬಳಿಕ ಇಷ್ಟೆಲ್ಲ ಚರ್ಚೆ ಆರಂಭ ಆಗಿತ್ತು.

ಬಾಲಿವುಡ್​ನಲ್ಲಿ ಸಲ್ಮಾನ್​ ಖಾನ್​ ಅವರಿಗೆ ಸಖತ್ ಬೇಡಿಕೆ ಇದೆ. ‘ಟೈಗರ್​ 3’ ಸಿನಿಮಾದ ಕೆಲಸಗಳಲ್ಲಿ ಅವರು ನಿರತರಾಗಿದ್ದಾರೆ. ಈ ನಡುವೆ ಅವರಿಗೆ ಬೆದರಿಕೆ ಕರೆಗಳು ಕೂಡ ಹೆಚ್ಚಾಗಿವೆ. ಹಾಗಾಗಿ ತಮ್ಮ ಸುರಕ್ಷತೆ ಬಗ್ಗೆ ಅವರು ಗಮನ ಹರಿಸಿದ್ದಾರೆ. ಇತ್ತೀಚೆಗೆ ಸಲ್ಮಾನ್​ ಖಾನ್​ ಅವರು ಹೊಸ ಬುಲೆಟ್​ ಪ್ರೂಫ್​ ಕಾರು ಖರೀದಿಸಿದ ಬಗ್ಗೆ ಸುದ್ದಿ ಆಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ