AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾಗೆ ಹೊರಟ ಸಲ್ಮಾನ್​ ಖಾನ್​-ಕತ್ರಿನಾ ಕೈಫ್​; ಏನಿದು ಸಮಾಚಾರ?

ಕೊವಿಡ್ ಎರಡನೇ ಅಲೆ​ ಕಾರಣದಿಂದ ಸಿನಿಮಾ ಶೂಟಿಂಗ್​ ನಿಂತಿತ್ತು. ಭಾರತದಲ್ಲಿ ಕೊರೊನಾ ವೈರಸ್​ ಹೆಚ್ಚಾದ ಕಾರಣಕ್ಕೆ ಅನೇಕ ರಾಷ್ಟ್ರಗಳು ಭಾರತದಿಂದ ಬರುವ ಪ್ರಯಾಣಿಕರಿಗೆ ನಿರ್ಬಂಧ ಹೇರಿತ್ತು.

ರಷ್ಯಾಗೆ ಹೊರಟ ಸಲ್ಮಾನ್​ ಖಾನ್​-ಕತ್ರಿನಾ ಕೈಫ್​; ಏನಿದು ಸಮಾಚಾರ?
ರಷ್ಯಾಗೆ ಹೊರಟ ಸಲ್ಮಾನ್​ ಖಾನ್​-ಕತ್ರಿನಾ ಕೈಫ್​; ಏನಿದು ಸಮಾಚಾರ?
TV9 Web
| Edited By: |

Updated on: Aug 16, 2021 | 5:27 PM

Share

‘ಏಕ್​ ಥಾ ಟೈಗರ್​’, ‘ಟೈಗರ್​ ಜಿಂದಾ ಹೈ’ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿದ್ದವು. ಈಗ ಸಲ್ಮಾನ್​ ಖಾನ್ ‘ಟೈಗರ್​ 3’ಗೆ ಸಿದ್ಧತೆ ನಡೆಸಿದ್ದಾರೆ. ಸತತ ಸೋಲಿನಿಂದ ಕಂಗೆಟ್ಟಿರುವ ಅವರಿಗೆ ಈ ಸಿನಿಮಾ ಬಹಳ ಮಹತ್ವದ್ದಾಗಿದೆ. ಈ ಕಾರಣಕ್ಕೆ ಅವರು ಈ ಚಿತ್ರದ ಬಗ್ಗೆ ಹೆಚ್ಚು ಆಸ್ತೆ ವಹಿಸಿದ್ದಾರೆ. ಈ ಸಿನಿಮಾದ ಆ್ಯಕ್ಷನ್​ ದೃಶ್ಯಗಳ ಶೂಟಿಂಗ್​ ರಷ್ಯಾದಲ್ಲಿ ನಡೆಯುತ್ತಿದ್ದು, ಸಲ್ಮಾನ್​ ಖಾನ್​, ಕತ್ರಿನಾ ಕೈಫ್ ಬುಧವಾರ (ಆಗಸ್ಟ್​ 18) ರಷ್ಯಾಗೆ ಪ್ರಯಾಣ ಬೆಳೆಸಲಿದ್ದಾರೆ.

ಕೊವಿಡ್ ಎರಡನೇ ಅಲೆ​ ಕಾರಣದಿಂದ ಸಿನಿಮಾ ಶೂಟಿಂಗ್​ ನಿಂತಿತ್ತು. ಭಾರತದಲ್ಲಿ ಕೊರೊನಾ ವೈರಸ್​ ಹೆಚ್ಚಾದ ಕಾರಣಕ್ಕೆ ಅನೇಕ ರಾಷ್ಟ್ರಗಳು ಭಾರತದಿಂದ ಬರುವ ಪ್ರಯಾಣಿಕರಿಗೆ ನಿರ್ಬಂಧ ಹೇರಿತ್ತು. ಆದರೆ, ಈಗ ಕೊವಿಡ್​ ಕಡಿಮೆ ಆಗಿದೆ. ಹೀಗಾಗಿ, ಬೇರೆ ದೇಶಗಳಿಗೆ ಭಾರತದ ವಿಮಾನಗಳು ತೆರಳುತ್ತಿವೆ. ಈ ಕಾರಣಕ್ಕೆ ‘ಟೈಗರ್​ 3’ ತಂಡ ರಷ್ಯಾಗೆ ಪ್ರಯಾಣ ಬೆಳೆಸಿದೆ. ರಷ್ಯಾ ಮಾತ್ರವಲ್ಲದೆ, ಆಸ್ಟ್ರೇಲಿಯಾ ಹಾಗೂ ಟರ್ಕಿಗೆ ತಂಡ ಪ್ರಯಾಣ ಬೆಳೆಸಲಿದೆ.

‘ಸಲ್ಮಾನ್, ಕತ್ರಿನಾ, ನಿರ್ದೇಶಕ ಮನೀಶ್ ಶರ್ಮಾ ಸೇರಿದಂತೆ ಎಲ್ಲರನ್ನೂ ವಿಶೇಷ ವಿಮಾನದಲ್ಲಿ ಕರೆದುಕೊಂಡು ಹೋಗಲಾಗುತ್ತಿದೆ. ಟೈಗರ್ ತಂಡ ಆಗಸ್ಟ್  18ರಂದು ವಿಮಾನ ಏರುತ್ತಿದೆ. ಕೊವಿಡ್​ನಿಂದ ಬಚಾವ್​ ಆಗಲು ಎಲ್ಲರೂ ಬಯೋಬಬಲ್​ ನಿಯಮ ನಿರ್ವಹಣೆ ಮಾಡುವುದು ಕಡ್ಡಾಯವಾಗಿದೆ. ರಷ್ಯಾದಿಂದ ಟರ್ಕಿ ಹಾಗೂ ಆಸ್ಟ್ರೇಲಿಯಾಗೆ ಈ ತಂಡ ಪ್ರಯಾಣ ಬೆಳೆಸಲಿದೆ ಎಂದು ಮೂಲಗಳು ಹೇಳಿವೆ.

‘ಟೈಗರ್​ 3’ ಮೇಲೆ ಅಭಿಮಾನಿಗಳು ಇಟ್ಟುಕೊಂಡಿರುವ ನಿರೀಕ್ಷೆಯ ಮಟ್ಟವನ್ನು ತಲುಪಲು ನಿರ್ಮಾಪಕರು ಕೋಟಿ ಕೋಟಿ ರೂ. ಹಣ ಖರ್ಚು ಮಾಡುತ್ತಿದ್ದಾರೆ. ‘ಟೈಗರ್​ 3’ ಚಿತ್ರದಲ್ಲಿ ವಿಲನ್​ ಇಂಟ್ರಡಕ್ಷನ್​ ಸೀನ್​ಗಾಗಿ ನಿರ್ಮಾಪಕರು ಬರೋಬ್ಬರಿ 10 ಕೋಟಿ ರೂ. ಖರ್ಚು ಮಾಡುತ್ತಿದ್ದಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು.  ‘ಏಕ್​ ಥಾ ಟೈಗರ್​’, ‘ಟೈಗರ್​ ಜಿಂದಾ ಹೈ’ ಬಳಿಕ ಟೈಗರ್​ ಸರಣಿಯಲ್ಲಿ ಮೂಡಿಬರುತ್ತಿರುವ ಮೂರನೇ ಸಿನಿಮಾ ಇದಾಗಿದ್ದು, ಈ ಬಾರಿಯೂ ಸಲ್ಮಾನ್​ ಖಾನ್​ಗೆ ಜೋಡಿಯಾಗಿ ಕತ್ರಿನಾ ಕೈಫ್​ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಶಾರುಖ್​ ಖಾನ್​ ಕೂಡ ಒಂದು ಅತಿಥಿ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಸಿಗಬೇಕಿದೆ.

ಇದನ್ನೂ ಓದಿ: ‘ಟೈಗರ್​3’ ಚಿತ್ರದ​ ತರಬೇತಿಯ ಆ್ಯಕ್ಷನ್​ ವಿಡಿಯೋ ಕ್ಲಿಪ್​ ಹಂಚಿಕೊಂಡ ಕತ್ರಿನಾ

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್