AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂ ನಿರ್ದೇಶಕನೊಟ್ಟಿಗೆ ಸಲ್ಮಾನ್ ಖಾನ್ ಐತಿಹಾಸಿಕ ಹಿನ್ನೆಲೆಯ ಸಿನಿಮಾ

Salman Khan movies: ಬಾಲಿವುಡ್​ ಖಾನ್​ಗಳು ಸಿನಿಮಾ ಯಶಸ್ಸಿಗೆ ದಕ್ಷಿಣ ಭಾರತದ ನಿರ್ದೇಶಕರನ್ನು ಆಶ್ರಯಿಸುತ್ತಿದ್ದಾರೆ. ಶಾರುಖ್ ಖಾನ್ ಈಗಾಗಲೇ ಅಟ್ಲಿ ಜೊತೆ ಸಿನಿಮಾ ಮಾಡಿ ಗೆದ್ದಿದ್ದಾರೆ. ಆಮಿರ್ ಖಾನ್ ಮುಂದಿನ ಸಿನಿಮಾ ಅನ್ನು ಲೋಕೇಶ್ ಕನಗರಾಜ್ ನಿರ್ದೇಶಿಸಲಿದ್ದಾರೆ. ಇದೀಗ ಸಲ್ಮಾನ್ ಖಾನ್, ಮಲಯಾಳಂನ ಪ್ರತಿಭಾವಂತ ನಿರ್ದೇಶಕರೊಟ್ಟಿಗೆ ಕೈ ಜೋಡಿಸಲು ಮುಂದಾಗಿದ್ದಾರೆ.

ಮಲಯಾಳಂ ನಿರ್ದೇಶಕನೊಟ್ಟಿಗೆ ಸಲ್ಮಾನ್ ಖಾನ್ ಐತಿಹಾಸಿಕ ಹಿನ್ನೆಲೆಯ ಸಿನಿಮಾ
Salman Khan Mahesh Narayanan
ಮಂಜುನಾಥ ಸಿ.
|

Updated on: Aug 08, 2025 | 10:58 AM

Share

ಬಾಲಿವುಡ್ (Bollywood) ನಟರು ಯಶಸ್ಸಿಗಾಗಿ ದಕ್ಷಿಣ ಭಾರತ ಸಿನಿಮಾ ನಿರ್ದೇಶಕರ ಬೆನ್ನು ಬಿದ್ದಿದ್ದಾರೆ. ಶಾರುಖ್ ಖಾನ್, ಅಟ್ಲಿ ಜೊತೆ ಕೈಜೋಡಿಸಿ ‘ಜವಾನ್’ ಸಿನಿಮಾ ಮೂಲಕ ಭಾರಿ ದೊಡ್ಡ ಯಶಸ್ಸು ತಮ್ಮದಾಗಿಸಿಕೊಂಡಿದ್ದಾರೆ. ಜೊತೆಗೆ ಅದೇ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ. ಆದರೆ ಸತತ ಸೋಲು ಕಾಣುತ್ತಲೇ ಬರುತ್ತಿರುವ ಸಲ್ಮಾನ್ ಖಾನ್, ತಮಿಳಿನ ಮುರುಗದಾಸ್ ಜೊತೆ ಕೈಜೋಡಿಸಿ ‘ಸಿಖಂಧರ್’ ಸಿನಿಮಾ ಮಾಡಿದ್ದರು. ಆದರೆ ಅದು ನಿರೀಕ್ಷಿತ ಪ್ರದರ್ಶನ ಕಾಣಲಿಲ್ಲ. ಇದೀಗ ಮಲಯಾಳಂನ ಪ್ರತಿಭಾವಂತ ಸಿನಿಮಾ ನಿರ್ದೇಶಕನ ಜೊತೆಗೆ ಕೈಜೋಡಿಸಿದ್ದಾರೆ.

ರಾಷ್ಟ್ರಪ್ರಶಸ್ತಿ ವಿಜೇತ ಮಲಯಾಳಂ ಸಿನಿಮಾ ‘ಟೇಕ್ ಆಫ್’, ಕೋವಿಡ್ ಸಮಯದಲ್ಲಿ ಬಹಳ ಜನಪ್ರಿಯವಾದ ‘ಸಿ ಯು ಸೂನ್‘, ಫಹಾದ್ ಫಾಸಿಲ್ ನಟನೆಯ ಗ್ಯಾಂಗ್ಸ್ಟರ್ ಸಿನಿಮಾ ‘ಮಾಲಿಕ್’, ಕುಂಚಕ್ಕೊ ಬೋಬನ್ ನಟನೆಯ ಸೂಕ್ಷ್ಮ ಕಥಾವಸ್ತುವಿನ ಸಿನಿಮಾ ‘ಅರಿಯಿಪ್ಪು’ ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ಮತ್ತು ಸಂಕಲನಕಾರರೂ ಆಗಿರುವ ಮಹೇಶ್ ನಾರಾಯಣನ್ ಅವರು ಸಲ್ಮಾನ್ ಖಾನ್ ಗಾಗಿ ಹೊಸ ಸಿನಿಮಾ ನಿರ್ದೇಶನ ಮಾಡಲಿದ್ದಾರೆ.

ಮಹೇಶ್ ನಾರಾಯಣನ್ ಪಾಲಿಗೆ ಇದು ಮೊದಲ ಹಿಂದಿ ಸಿನಿಮಾ ಆಗಲಿದೆ. ಈ ಹಿಂದೆ ಅವರು ‘ಫ್ಯಾಂಟಮ್ ಹಾಸ್ಪಿಟಲ್’ ಹೆಸರಿನ ಹಿಂದಿ ಸಿನಿಮಾ ನಿರ್ದೇಶಿಸಲು ಮುಂದಾಗಿದ್ದರು ಆದರೆ ಕೆಲವು ಕಾರಣಗಳಿಗಾಗಿ ಆ ಸಿನಿಮಾ ಸೆಟ್ಟೇರಲಿಲ್ಲ. ಆದರೆ ಈಗ ಸಲ್ಮಾನ್ ಖಾನ್ ಜೊತೆಗೆ ಐತಿಹಾಸಿಕ ಹಿನ್ನೆಲೆಯ ಕತೆಯುಳ್ಳ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಸಿನಿಮಾದ ಕತೆ 1970 ರಿಂದ 1990 ರ ಕಾಲಘಟ್ಟದ್ದಾಗಿರಲಿದೆ.

ಇದನ್ನೂ ಓದಿ:ಕೃಷ್ಣಮೃಗ ಭೇಟೆ ಪ್ರಕರಣ: ಸಲ್ಮಾನ್ ಖಾನ್​ಗೆ ಅರ್ಜಿ ಮತ್ತೆ ವಿಚಾರಣೆಗೆ

ಕಳೆದ ಕೆಲ ವರ್ಷಗಳಲ್ಲಿ ಕೇವಲ ಪಕ್ಕಾ ಮಾಸ್ ಮಸಾಲ ಸಿನಿಮಾಗಳಲ್ಲಿ ಮಾತ್ರವೇ ನಟಿಸುತ್ತಾ ಬಂದಿರುವ ಸಲ್ಮಾನ್ ಖಾನ್ ಅಚಾನಕ್ಕಾಗಿ ತಮ್ಮ ಶೈಲಿ ಬದಲಾಯಿಸಿಕೊಂಡಿದ್ದಾರೆ. ಪ್ರಸ್ತುತ ಅವರು ‘ಘಲವಾನ್’ ಹೆಸರಿನ ಸಿನಿಮಾನಲ್ಲಿ ನಟಿಸುತ್ತಿದ್ದು, ಇಂಡೋ-ಚೀನಾ ಸೈನಿಕರ ನಡುವೆ ನಡೆದ ಗಲಭೆಯ ಘಟನೆಯನ್ನು ಈ ಸಿನಿಮಾ ಆಧರಿಸಿದೆ. ಸಿನಿಮಾನಲ್ಲಿ ಆರ್ಮಿ ಮೇಜರ್ ಪಾತ್ರದಲ್ಲಿ ಸಲ್ಮಾನ್ ಖಾನ್ ನಿರ್ವಹಿಸಿದ್ದಾರೆ. ಇನ್ನು ಕಬೀರ್ ಖಾನ್ ಅವರೊಟ್ಟಿಗೂ ಸಿನಿಮಾದ ಬಗ್ಗೆ ಚರ್ಚೆ ನಡೆಸಿದ್ದು ‘ಭಜರಂಗಿ ಭಾಯಿಜಾನ್ 2’ ಸಿನಿಮಾಕ್ಕಾಗಿ ಈ ಜೋಡಿ ಮತ್ತೆ ಒಂದಾಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ